Categories: ಕೋಲಾರ

ಬಡವರ ಅನ್ನ ಕಸಿಯಲು ಹೊರಟ ಕಾಂಗ್ರೆಸ್ ಸರ್ಕಾರ: ಬಿಪಿಎಲ್ ಕಾರ್ಡ್ ರದ್ದು ಆದೇಶ ವಾಪಸ್ಸು ಮಾಡುವಂತೆ ಕಲ್ಲಂಡೂರು ಡಾ.ಕೆ ನಾಗರಾಜ್ ಒತ್ತಾಯ

ಕೋಲಾರ: ರಾಜ್ಯದಲ್ಲಿನ ಕಾಂಗ್ರೆಸ್ ಸರಕಾರವು ಐದು ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಸಾಧ್ಯವಾಗದೆ ಅನ್ನ ಭಾಗ್ಯದ ಫಲಾನುಭವಿಗಳ ಸಂಖ್ಯೆಯನ್ನು ಕಡಿಮೆ ಮಾಡಲು ಹೊರಟಿದ್ದು, ಇದರ ಭಾಗವಾಗಿಯೇ ಬಡವರ ಬಿಪಿಎಲ್ ಪಡಿತರ ಕಾರ್ಡ್ ಗಳನ್ನು ರದ್ದುಪಡಿಸುವ ಕ್ರಮವು ಖಂಡನೀಯವಾಗಿದ್ದು. ಬಡವರ ಅನ್ನಕ್ಕೆ ಕೈಹಾಕಿದೆ ಕೂಡಲೇ ಈ ಆದೇಶವನ್ನು ವಾಪಸ್ಸು ಪಡೆಯುವಂತೆ ಜೆಡಿಯು ಪಕ್ಷದ ರಾಜ್ಯ ಯುವ ಘಟಕದ ಅಧ್ಯಕ್ಷ ಕಲ್ಲಂಡೂರು ಡಾ.ಕೆ ನಾಗರಾಜ್ ಒತ್ತಾಯಿಸಿದರು.

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ರಾಜ್ಯದಲ್ಲಿ ಸುಮಾರು 11 ಲಕ್ಷ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಗೊಳಿಸಲು ಕಾಂಗ್ರೆಸ್ ಸರ್ಕಾರವು ಮುಂದಾಗಿದೆ. ಯಾವುದೇ ಪರಿಶೀಲನೆಯಾಗಲಿ ತಜ್ಞರ ಮಾರ್ಗದರ್ಶನವಾಗಲಿ ಪಡೆಯದೇ ಅವೈಜ್ಞಾನಿಕವಾದ ಆದೇಶವನ್ನು ಜಾರಿ ಮಾಡಲು ಹೊರಟಿದ್ದಾರೆ ಈ ಮೂಲಕ ಬಿಪಿಎಲ್ ಕಾರ್ಡ್ ರದ್ದು ಮಾಡಿದರೆ ಬಡವರು, ರೈತರು, ಸಾಮಾನ್ಯ ವರ್ಗದ ಜನರು ಆರ್ಥಿಕ ಕಷ್ಟಗಳನ್ನು ಎದುರಿಸಬೇಕಾಗುತ್ತದೆ ಬಡವರ ಪರವಾದ ಸರ್ಕಾರ ಎಂದು ಅಧಿಕಾರಕ್ಕೆ ಬಂದು ಬಡವರ ಅನ್ನವನ್ನು ಕಸಿಯಲು ಹೊರಟಿದ್ದಾರೆ ಈ ಕ್ರಮವನ್ನು ಕೂಡಲೇ ವಾಪಸ್ಸು ಪಡೆಯಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಯಿಂದ ವರ್ಷಕ್ಕೆ ಕನಿಷ್ಠ 55 ರಿಂದ 60 ಸಾವಿರ ಕೋಟಿ ಖರ್ಚಾಗುತ್ತಿದೆ ಎಂದು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹೇಳಿಕೊಂಡಿದ್ದಾರೆ ಇಷ್ಟೊಂದು ಹಣ ಹೊಂದಿಸಲು ಸಾಧ್ಯವಾಗದ ಸರ್ಕಾರವು ಬಡವರ ಬಿಪಿಎಲ್ ಕಾರ್ಡ್‌ ಸಂಖ್ಯೆಯನ್ನು ಕಡಿಮೆ ಮಾಡಿ ಅದರ ಮೂಲಕವೇ ಹಣ ಉಳಿಸಲು ಹೊರಟಿದ್ದು ಈ ಕ್ರಮ ಜಾರಿಯಾದರೆ ಬಡವರನ್ನು ಬೀದಿಗೆ ತಂದು ನಿಲ್ಲಿಸಿದ ಸಾಧನೆ ಕಾಂಗ್ರೆಸ್ ಸರಕಾರಕ್ಕೆ ಸಲ್ಲುತ್ತದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೂ ಮುಂಚೆ ಕೊಟ್ಟ ಆಶ್ವಾಸನೆಗಳಿಂದ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದಿದೆ ಅಧಿಕಾರಕ್ಕೆ ಬರುವ ಮುಂಚೆ ಒಂದು ಮಾತು ಅಧಿಕಾರಕ್ಕೆ ಬಂದ ನಂತರ ಮತ್ತೊಂದು ಮಾತಾಗಿದೆ ಈ ಸರಕಾರದಿಂದ ಬಡವರ ಮನೆ ಅನ್ನ ಕಿತ್ತುಕೊಳ್ಳುವ ಆದೇಶವನ್ನು ವಾಪಸ್ಸು ಪಡೆದು ಗ್ಯಾರಂಟಿ ಯೋಜನೆಗಳನ್ನು ರಾಜ್ಯದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವ ಕೆಲಸವನ್ನು ಮಾಡುವ ಮೂಲಕ ಕೊಟ್ಟ ಮಾತನ್ನು ಸರ್ಕಾರವು ಉಳಿಸಿಕೊಳ್ಳಬೇಕು ಎಂದು ಡಾ.ನಾಗರಾಜ್ ಒತ್ತಾಯಿಸಿದರು.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

15 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

16 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

17 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

17 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

1 day ago