Categories: ಲೇಖನ

ಬದಲಾಗಬೇಕಿರುವುದು ಮಕ್ಕಳೋ – ಹಿರಿಯರೋ……

ಮಕ್ಕಳಿಗೆ ಒಳ್ಳೆಯ ಸಂಸ್ಕಾರ ಮತ್ತು ನಡತೆ ಕಲಿಸಬೇಕು ಎಂಬುದು ಆಧುನಿಕ ಕಾಲದ ಬಹುದೊಡ್ಡ ಆಶಯ. ಮಾಧ್ಯಮಗಳಲ್ಲೂ, ಅನೇಕ ವೇದಿಕೆಗಳಲ್ಲೂ ಇದೇ ಬಹು ಚರ್ಚಿತ ವಿಷಯ……

ಅಂದರೆ ಬಹಳಷ್ಟು ದೊಡ್ಡವರಲ್ಲಿಲ್ಲದ , ಸಮಾಜದಲ್ಲಿ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿರುವ ಅಥವಾ ಮುಖವಾಡಗಳಾಗಿ ಬದಲಾಗುತ್ತಿರುವ ನಿಜವಾದ ಮೌಲ್ಯಗಳನ್ನು ಅದರ ಮೂಲ ಸ್ವರೂಪದಲ್ಲಿಯೇ ಮಕ್ಕಳಲ್ಲಿ ಕಾಣಬೇಕೆಂಬ ಹಂಬಲ ಪೋಷಕರದು.ಇದರಿಂದಾಗಿ ಅವರಲ್ಲಿ ಒಳ್ಳೆಯ ಭವಿಷ್ಯ ರೂಪಗೊಳ್ಳುತ್ತದೆ ಎಂದು ಆಸೆಪಡುತ್ತಿದ್ದಾರೆ……

ಆಪೇಕ್ಷೆ ಏನೋ ಒಳ್ಳೆಯದು.
ಆದರೆ ವಾಸ್ತವ.

ವಿಚಿತ್ರವೆಂದರೆ,
ಭಾರತದಲ್ಲಿ ಮಾತ್ರವಲ್ಲ ಇಡೀ ವಿಶ್ವದಲ್ಲಿಯೇ ಯಾವ ತಂದೆ ತಾಯಿಗಳು ತಮ್ಮ ಮಕ್ಕಳಿಗೆ ಕೆಟ್ಟದ್ದನ್ನು ಹೇಳಿಕೊಡುವುದಿಲ್ಲ. ತಾವು ಕಳ್ಳರಾದರೂ ತಮ್ಮ ಮಕ್ಕಳು ಮಾತ್ರ ಉತ್ತಮ ದಾರಿ ಹಿಡಿಯಲಿ ಎಂದೇ ಇಚ್ಚಿಸುತ್ತಾರೆ……..

ಆದರೆ ಬಹಳಷ್ಟು ಮಕ್ಕಳು ತಮ್ಮ ನಡವಳಿಕೆಗಳಲ್ಲಿ ನಾವು ಹೇಳುವುದನ್ನು ಮಾಡುವುದು ಕಡಿಮೆ ಅಥವಾ ಮಾಡಿದಂತೆ ನಟಿಸುತ್ತಾರೆ.
ವಾಸ್ತವದಲ್ಲಿ ಅವರು ಗ್ರಹಿಸುವುದು ನಾವು ಹೇಳುವುದನ್ನಲ್ಲ ಮಾಡುವುದನ್ನು.
ದೊಡ್ಡವರನ್ನು ಅನುಕರಿಸುವುದೇ ಅವರ ಮೊದಲ ಮತ್ತು ಸುಲಭ ಆಯ್ಕೆ…….

ಮನೆಯಲ್ಲಿ ನಾವು ಹಾಡು ಹೇಳಿದರೆ, ನೃತ್ಯ ಮಾಡಿದರೆ, ಯೋಗ, ವ್ಯಾಯಾಮ ಮಾಡಿದರೆ, ಸಿಗರೇಟ್ ಸೇದಿದರೆ ಅದನ್ನು ಅನುಕರಿಸಲು ಪ್ರಯತ್ನಿಸುತ್ತಾರೆ.
ನಾವು ಮೊಬ್ಯೆಲ್ ನಲ್ಲಿ ಮಾತನಾಡುವಾಗ ಯಾರನ್ನಾದರು ಕೆಟ್ಟ ಮಾತಿನಲ್ಲಿ ಬೈದರೆ ಅಥವಾ ಕಾಣುವಂತ ಸುಳ್ಳು ಹೇಳಿದರೆ ತಕ್ಷಣಕ್ಕಲ್ಲದಿದ್ದರೂ ಅವಶ್ಯಕತೆ ಒದಗಿ ಬಂದಾಗ ಅದನ್ನು ಶಾಲೆಯೋ ಅಥವಾ ಇನ್ನೆಲ್ಲಾದರೂ ಪ್ರಯೋಗಿಸುತ್ತಾರೆ……

ಅವರನ್ನು ಶಾಲೆಗೆ ಕರೆದೊಯ್ಯುವ ಬಸ್ಸು, ಆಟೋ, ವ್ಯಾನುಗಳ ಡ್ರೈವರುಗಳ, ಆಯಾಗಳ ಮಾತು, ಚಟುವಟಿಕೆ ಅವರನ್ನು ಹೆಚ್ಚು ಸೆಳೆಯುತ್ತದೆ.
ಶಾಲೆ ಮತ್ತು ಮನೆಯ ಸುತ್ತುಮುತ್ತಲಿನ ವಾತಾವರಣ, ಅದರಲ್ಲೂ ಆಕ್ರಮಣಕಾರಿ ವರ್ತನೆಗಳು ಅವರನ್ನು ಬೇಗ ಆಕರ್ಷಿಸುತ್ತದೆ. ಇನ್ನು ಟಿವಿ, ಸಿನಿಮಾ, ಇಂಟರ್ನೆಟ್ ಗಳ ಅತಿರೇಕದ ಪ್ರಭಾವದಿಂದ ಅವರು ತಪ್ಪಸಿಕೊಳ್ಳುವುದು ಕಷ್ಟ……..

ಇದರ ಅರ್ಥ,
ಮೂಲಭತವಾಗಿ ಸಂಸ್ಕಾರಗಳನ್ನು ಹೇಳಿಕೊಡುವುದರಿಂದ ಹೆಚ್ಚಿನ ಪ್ರಯೋಜನವಿಲ್ಲ.
ವಾಹನ ಚಲಾಯಿಸುವುದನ್ನು ಪುಸ್ತಕದಲ್ಲಿ ನೋಡಿ ಕಲಿತಷ್ಟೇ ಪ್ರಯೋಜನ. ಆದರೆ ನಿಜವಾದ ಪರಿಣಾಮ ಸಮಾಜದ ಈಗಿನ ನಡವಳಿಕೆಗಳೇ ಅವರನ್ನು ರೂಪಿಸುತ್ತವೆ.
ನಮ್ಮಂತ ದೊಡ್ಡವರಿಗೇ ಇನ್ನೂ ಸರಿಯಾದ ಸಂಸ್ಕಾರ ಇಲ್ಲದಿರುವಾಗ ಪುಟ್ಟ ಮಕ್ಕಳಿಗೆ ಅದನ್ನು ಕಲಿಸುವುದು ಹೇಗೆ…..

ನಿಜವಾದ ಸಂಸ್ಕಾರ ಬೇಕಾಗಿರುವುದು ದೊಡ್ಡವರಿಗೆ.
ಏಕೆಂದರೆ, 0/15 ವರ್ಷದ ಮಕ್ಕಳು ದೊಡ್ಡ ತಪ್ಪು ಮಾಡುವುದು ತುಂಬಾ ಕಡಿಮೆ. 18/20 ತುಂಬುತ್ತಿದ್ದಂತೆ ಸಮಾಜಕ್ಕೆ ತೆರೆದುಕೊಳ್ಳುವ ಅವರು ತಮ್ಮ ವಯೋಸಹಜ ಬದಲಾವಣೆಗಳಿಂದ ಇಲ್ಲಿನ ನಡವಳಿಕೆಗಳನ್ನೇ ಅಳವಡಿಸಿಕೊಳ್ಳಲು ಪ್ರಯತ್ನಿಸುತ್ತಾರೆ…..

ಒಂದು ವೇಳೆ ಸಮಾಜದಲ್ಲಿ ಹೆಣ್ಣಿಗೆ ಸ್ವಾತಂತ್ರ್ಯ ಸಮಾನತೆ ಇದ್ದರೆ, ಕುಡಿತದ ಬಗ್ಗೆ ಅಸಹ್ಯವಿದ್ದರೆ,
ಲಂಚದ ಬಗ್ಗೆ ಕೆಟ್ಟ ಅಭಿಪ್ರಾಯವಿದ್ದರೆ, ಶ್ರಮ ಸಂಸ್ಕೃತಿಯ ಬಗ್ಗೆ ಗೌರವವಿದ್ದರೆ, ಒಳ್ಳೆಯತನಕ್ಕೆ ಬೆಲೆಯಿದ್ದರೆ,
ಪ್ರತಿಭೆಗೆ ತಕ್ಕ ಮಾನ್ಯತೆ ಇದ್ದರೆ,
ಳಮಕ್ಕಳೂ ಅದನ್ನೇ ಒಪ್ಪಿಕೊಳ್ಳಲು, ಅನುಸರಿಸಲು ಪ್ರಯತ್ನಿಸುತ್ತಾರೆ……

ಅಥವಾ,

ಇಲ್ಲಿ ಹೆಂಗಸರನ್ನು ಚುಡಾಯಿಸುವವನು ಮಹಾನ್ ಗಂಡಸೆಂತಲೂ,
ಬೈಕ್ ವೀಲಿಂಗ್ ಮಾಡುವವನನ್ನು
ಧೀರನೆಂತಲೂ,
ಕಾನೂನು ಉಲ್ಲಂಘಿಸುವವನನ್ನು ಶೂರನೆಂತಲೂ,
ಮೋಸದಿಂದಾರೂ ಹಣ ಮಾಡುವವನನ್ನು ಯಶಸ್ವಿ ವ್ಯಕ್ತಿಯಂತಲೂ ಬಿಂಬಿಸಿದರೆ ಮಕ್ಕಳೂ ಇದೇ ಪ್ರಭಾವಕ್ಕೆ ಒಳಗಾಗುತ್ತಾರೆ………

ಆದ್ದರಿಂದ,
ಬದಲಾಗಬೇಕಾಗಿರುವುದು ಏನೂ ಅರಿಯದ ಮಕ್ಕಳಲ್ಲ. ಎಲ್ಲವನ್ನೂ ಅರಿತಿದ್ದೇವೆಂದು ಭಾವಿಸಿರುವ ನಾವುಗಳಾದ ಜವಾಬ್ದಾರಿಯುತ ನಾಗರಿಕರು. ನೆಪಗಳನ್ನು ಹುಡುಕದೇ ಈ ಕ್ಷಣವೇ ಕನಿಷ್ಠ ಮಟ್ಟದ ನಾಗರಿಕ ಪ್ರಜ್ಞೆ ಬೆಳೆಸಿಕೊಳ್ಳೋಣ. ಇದೇನು ಬಾರಿ ಬಾರಿ ಕಷ್ಟವಲ್ಲ.
ಮನಸ್ಸು ಮಾಡಿದರೆ ಸುಲಭ ಮತ್ತು ಸರಳ………

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಕಮಲೂರು ಕೆರೆ ಪುನಶ್ಚೇತನ: ಫಾಕ್ಸ್ಕಾನ್‌ನಿಂದ ಗ್ರಾಮ ಪಂಚಾಯಿತಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ಕೆರೆಗಳು ಗ್ರಾಮೀಣ ಭಾಗಗಳ ಪ್ರಮುಖ ನೀರಿನ ಮೂಲಗಳಾಗಿದ್ದು, ಅವುಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಫಾಕ್ಸ್ಕಾನ್…

1 hour ago

ಬಿಸಿಲ ಬೇಗೆಯ ಎಫೆಕ್ಟ್: 2 ತಿಂಗಳಲ್ಲಿ 2.82 ಲಕ್ಷ ಲೀಟರ್ ಬಿಯರ್ ಮಾರಾಟ!: ಕಳೆದ ವರ್ಷಕ್ಕಿಂತ ಶೇ.33ರಷ್ಟು ಏರಿಕೆ

ಬೆಂಗಳೂರು ಗ್ರಾಮಾಂತರ: ಈ ಬಾರಿ ಬೇಸಿಗೆಯ ಬಿರು ಬಿಸಿಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಿಯರ್ ಮಾರಾಟಕ್ಕೆ ಹೊಸ ಉತ್ತೇಜನ ನೀಡಿದೆ.…

4 hours ago

ಆರ್‌ಒ ಘಟಕಗಳ ನೀರಿನ ಗುಣಮಟ್ಟ ಪ್ರಮಾಣಪತ್ರ ಪ್ರದರ್ಶನಕ್ಕೆ ಸದಸ್ಯರ ಆಗ್ರಹ

ದೊಡ್ಡಬಳ್ಳಾಪುರ: ನಗರದಲ್ಲಿನ ಎಲ್ಲಾ ಆರ್‌ಒ ಕುಡಿಯುವ ನೀರಿನ ಘಟಕಗಳ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿ, ಅದರ ಪ್ರಮಾಣಪತ್ರವನ್ನು ಸಾರ್ವಜನಿಕರ ವೀಕ್ಷಣೆಗೆ…

15 hours ago

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ದೊಡ್ಡಬಳ್ಳಾಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಸಾಧನೆ ಮಾಡಿ ರ‍್ಯಾಂಕ್ ಪಡೆದ…

17 hours ago

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

17 hours ago

ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ ರಾಜೀನಾಮೆ: ಜಿಲ್ಲಾಧಿಕಾರಿ ಅಂಗೀಕಾರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ. ಆನಂದ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಜಿಲ್ಲಾಧಿಕಾರಿ ಡಾ. ಕೆ. ಅನುರಾಧಾ…

1 day ago