ಬದುಕಿನಲ್ಲಿ ಸತ್ವಯುತವಾದ ತತ್ವಗಳನ್ನು ಅಳವಡಿಸಿಕೊಳ್ಳಿ- ಆರ್.ಕೆ.ಬಾಲಚಂದ್ರ

ರುಡ್‌ಸೆಟ್ ಸಂಸ್ಥೆಯಲ್ಲಿ ಕೌಶಲ್ಯ, ಉದ್ಯಮಶೀಲತಾ ಅಭಿವೃದ್ಧಿ ಕುರಿತು ತರಬೇತಿ ಪಡೆದು ಸ್ವ ಉದ್ಯೋಗಿಗಳಾಗುವುದು ಮಾತ್ರವಲ್ಲದೆ, ಸಂಸ್ಥೆಯಲ್ಲಿ ಕಲಿತ ವಿಚಾರಗಳ ಪೈಕಿ ಬದುಕಿನಲ್ಲಿ ಸತ್ವಯುತವಾದ ತತ್ವಗಳನ್ನು ಅಳವಡಿಕೊಳ್ಳಬೇಕೆಂದು ರಾಷ್ಟ್ರಮಟ್ಟದ ಮಾನವ ಸಂಪನ್ಮೂಲ ತರಬೇತುದಾರರಾದ ಆರ್.ಕೆ.ಬಾಲಚಂದ್ರ ಅವರು ಶಿಬಿರಾರ್ಥಿಗಳಿಗೆ ಕರೆ ನೀಡಿದರು.

ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆಯ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆದ ಎಲೆಕ್ಟ್ರಿಕ್ ಮೋಟಾರ್ ರಿವೈಂಡಿಂಗ್ ದುರಸ್ತಿ ಮತ್ತು ಸೇವೆ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಅವರು ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಜೀವನ ಎಂಬುದು ಹುಡುಗಾಟವಲ್ಲ ಅದೊಂದು ನಿರಂತರ ಹುಡುಕಾಟ ಎಂದ ಅವರು ತಾಳ್ಮೆ ಮತ್ತು ದುಡಿಮೆಯ ಮೂಲಕ ಪ್ರತಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದೆಂಬ ಕಿವಿಮಾತು ಹೇಳಿದರು.

ಬದುಕು ಅವಶ್ಯಕತೆಗಳೊಂದಿಗೆ ನಡೆಯುತ್ತಿದ್ದು, ಸದೃಢವಾದ ಗುರಿಯನ್ನಿಟ್ಟುಕೊಂಡು ಸನ್ಮಾರ್ಗದಲ್ಲಿ ನಡೆಯಿರಿ ಎಂದರಲ್ಲದೆ, ಸಮಾಜವು ಪ್ರತಿದಿನವೂ ಹೊಸದೊಂದು ಅವಕಾಶ ತೆರೆದಿಡುತ್ತಲೆ ಇರುತ್ತದೆ, ಅವಕಾಶವನ್ನು ಗುರುತಿಸಿ ಸದ್ಬಳಕೆ ಮಾಡಿಕೊಳ್ಳುವ ಜಾಣ್ಮೆ ನಮ್ಮಲ್ಲಿರಬೇಕೆಂದು ಹೇಳಿದರು.

ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ಅವರು ಮಾತನಾಡಿ, ಸಂಸ್ಥೆಯ ಕುರಿತು ಹಾಗೂ ಸಂಸ್ಥೆಯಲ್ಲಿ ನಡೆಯುವ ವಿವಿಧ ಚಟುವಟಿಕೆಗಳ ಮಾಹಿತಿಯನ್ನು ಸಂಸ್ಥೆಯ ಶಿಬಿರಾರ್ಥಿಗಳಾದ ತಾವು ಸಾರ್ವಜನಿಕರಿಗೆ ತಿಳಿಸಬೇಕೆಂದರಲ್ಲದೆ, ಶಿಬಿರಾರ್ಥಿಗಳಿಗೆ ಶುಭಕೋರಿದರು.

ಸಮಾರೋಪ ಸಮಾರಂಭದಲ್ಲಿ ಮೌಲ್ಯಮಾಪಕರಾದ ನಾಗರಾಜ, ಸಂಸ್ಥೆಯ ಉಪನ್ಯಾಸಕರಾದ ರವೀಂದ್ರ ಹಾಗೂ ವಿದ್ಯಾ ಹೊಸಮನಿ ಸೇರಿದಂತೆ ಎಲೆಕ್ಟ್ರಿಕ್ ಮೋಟಾರ್ ರಿವೈಂಡಿಂಗ್ ದುರಸ್ತಿ ಮತ್ತು ಸೇವೆ ತರಬೇತಿಯ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

7 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

8 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

16 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

3 days ago