ಬದುಕಿನಲ್ಲಿ ಸತ್ವಯುತವಾದ ತತ್ವಗಳನ್ನು ಅಳವಡಿಸಿಕೊಳ್ಳಿ- ಆರ್.ಕೆ.ಬಾಲಚಂದ್ರ

ರುಡ್‌ಸೆಟ್ ಸಂಸ್ಥೆಯಲ್ಲಿ ಕೌಶಲ್ಯ, ಉದ್ಯಮಶೀಲತಾ ಅಭಿವೃದ್ಧಿ ಕುರಿತು ತರಬೇತಿ ಪಡೆದು ಸ್ವ ಉದ್ಯೋಗಿಗಳಾಗುವುದು ಮಾತ್ರವಲ್ಲದೆ, ಸಂಸ್ಥೆಯಲ್ಲಿ ಕಲಿತ ವಿಚಾರಗಳ ಪೈಕಿ ಬದುಕಿನಲ್ಲಿ ಸತ್ವಯುತವಾದ ತತ್ವಗಳನ್ನು ಅಳವಡಿಕೊಳ್ಳಬೇಕೆಂದು ರಾಷ್ಟ್ರಮಟ್ಟದ ಮಾನವ ಸಂಪನ್ಮೂಲ ತರಬೇತುದಾರರಾದ ಆರ್.ಕೆ.ಬಾಲಚಂದ್ರ ಅವರು ಶಿಬಿರಾರ್ಥಿಗಳಿಗೆ ಕರೆ ನೀಡಿದರು.

ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆಯ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆದ ಎಲೆಕ್ಟ್ರಿಕ್ ಮೋಟಾರ್ ರಿವೈಂಡಿಂಗ್ ದುರಸ್ತಿ ಮತ್ತು ಸೇವೆ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಅವರು ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಜೀವನ ಎಂಬುದು ಹುಡುಗಾಟವಲ್ಲ ಅದೊಂದು ನಿರಂತರ ಹುಡುಕಾಟ ಎಂದ ಅವರು ತಾಳ್ಮೆ ಮತ್ತು ದುಡಿಮೆಯ ಮೂಲಕ ಪ್ರತಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದೆಂಬ ಕಿವಿಮಾತು ಹೇಳಿದರು.

ಬದುಕು ಅವಶ್ಯಕತೆಗಳೊಂದಿಗೆ ನಡೆಯುತ್ತಿದ್ದು, ಸದೃಢವಾದ ಗುರಿಯನ್ನಿಟ್ಟುಕೊಂಡು ಸನ್ಮಾರ್ಗದಲ್ಲಿ ನಡೆಯಿರಿ ಎಂದರಲ್ಲದೆ, ಸಮಾಜವು ಪ್ರತಿದಿನವೂ ಹೊಸದೊಂದು ಅವಕಾಶ ತೆರೆದಿಡುತ್ತಲೆ ಇರುತ್ತದೆ, ಅವಕಾಶವನ್ನು ಗುರುತಿಸಿ ಸದ್ಬಳಕೆ ಮಾಡಿಕೊಳ್ಳುವ ಜಾಣ್ಮೆ ನಮ್ಮಲ್ಲಿರಬೇಕೆಂದು ಹೇಳಿದರು.

ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ಅವರು ಮಾತನಾಡಿ, ಸಂಸ್ಥೆಯ ಕುರಿತು ಹಾಗೂ ಸಂಸ್ಥೆಯಲ್ಲಿ ನಡೆಯುವ ವಿವಿಧ ಚಟುವಟಿಕೆಗಳ ಮಾಹಿತಿಯನ್ನು ಸಂಸ್ಥೆಯ ಶಿಬಿರಾರ್ಥಿಗಳಾದ ತಾವು ಸಾರ್ವಜನಿಕರಿಗೆ ತಿಳಿಸಬೇಕೆಂದರಲ್ಲದೆ, ಶಿಬಿರಾರ್ಥಿಗಳಿಗೆ ಶುಭಕೋರಿದರು.

ಸಮಾರೋಪ ಸಮಾರಂಭದಲ್ಲಿ ಮೌಲ್ಯಮಾಪಕರಾದ ನಾಗರಾಜ, ಸಂಸ್ಥೆಯ ಉಪನ್ಯಾಸಕರಾದ ರವೀಂದ್ರ ಹಾಗೂ ವಿದ್ಯಾ ಹೊಸಮನಿ ಸೇರಿದಂತೆ ಎಲೆಕ್ಟ್ರಿಕ್ ಮೋಟಾರ್ ರಿವೈಂಡಿಂಗ್ ದುರಸ್ತಿ ಮತ್ತು ಸೇವೆ ತರಬೇತಿಯ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

23 minutes ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

5 hours ago

ನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ

ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ…

9 hours ago

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

1 day ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

3 days ago