Categories: ಲೇಖನ

ಬದುಕಿನ ಪಯಣದ ಹಾದಿಯಲ್ಲಿ ಎರಡು ದಾರಿ ಮತ್ತು ಎರಡು ಆಯ್ಕೆಗಳು……

ಬದುಕಿನ ಪಯಣದ ಹಾದಿಯಲ್ಲಿ,

ಎರಡು ದಾರಿಗಳು ಮತ್ತು ಎರಡು ಆಯ್ಕೆಗಳು……..

ಪ್ರತಿಯೊಬ್ಬರ ಜೀವನದಲ್ಲೂ ಹುಟ್ಟಿನಿಂದ ಕೊನೆಯವರೆಗೂ ಎಲ್ಲಾ ವಿಭಾಗಗಳಲ್ಲೂ ಈ ದಾರಿಗಳು ಇರುತ್ತವೆ.

ಒಂದು,

ಹಿರಿಯರು ತೋರಿದ, ಧರ್ಮಗಳು ನೀಡಿದ, ಗ್ರಂಥಗಳು ಹೇಳಿದ ಅನುಭವದ ಆಧಾರದ ಮೇಲೆ ರೂಪಗೊಂಡ ಸಾಂಪ್ರದಾಯಿಕ ಮಾರ್ಗ.

ಹುಟ್ಟಿನ ಕಾರಣಕ್ಕೆ ದೊರೆಯುವ ಪ್ರದೇಶ, ತಂದೆ ತಾಯಿ ಮತ್ತು ಸಂಬಂದಗಳು, ಜಾತಿ ಭಾಷೆ ಧರ್ಮ ದೇವರು ಪರಿಸರ ಶಿಕ್ಷಣ ಉದ್ಯೋಗ ವೈವಾಹಿಕ ಬದುಕು ಹೀಗೆ ಎಲ್ಲವೂ ಹೆಚ್ಚು ಕಡಿಮೆ ತುಂಬಾ ಯೋಚಿಸದೆ ನಮ್ಮ ಆಯ್ಕೆಗಳು ಸಿದ್ದವಾಗಿರುತ್ತದೆ. ನೀವು ಗುರು ಹಿರಿಯರು ತೋರಿದ ಮಾರ್ಗದಲ್ಲಿ ನಡೆದರೆ ಸಾಕು. ಬದುಕಿನ ಒಂದು ಹಂತವನ್ನು ಸುಲಭವಾಗಿ ತಲುಪುತ್ತೀರಿ. ಆ ಸಂಧರ್ಭದಲ್ಲಿ ಎದುರಾಗುವ ಕಷ್ಟ ಸುಖಗಳಿಗೂ ಈ ಮಾರ್ಗದಲ್ಲಿ ಮೊದಲೇ ಪರಿಹಾರ ನಿರ್ಧಾರವಾಗುತ್ತದೆ. ನೀವು ಹೊಸ ದಾರಿ ಹುಡುಕುವ ಅವಶ್ಯಕತೆ ಇರುವುದಿಲ್ಲ.

ಹುಟ್ಟಿನ ಸಂಭ್ರಮ, ಸಾವಿನ ದುಃಖ, ಅನಿರೀಕ್ಷಿತ ಅಪಘಾತ, ಅನಾರೋಗ್ಯ, ವಿವಾಹ ವಿಚ್ಛೇದನ ಎಲ್ಲಕ್ಕೂ ದೇವರ ಧರ್ಮದ ನಂಬಿಕೆಯ ಜ್ಯೋತಿಷಿಗಳ ಪುನರ್ಜನ್ಮದ ಪರಿಹಾರ ಇರುತ್ತದೆ. ಭಾರತೀಯರ ಸಹಜ ಬದುಕಿನ ಶೈಲಿ ಇದು.

ಇನ್ನೊಂದು,

ಈ ಸಾಂಪ್ರದಾಯಿಕ ಶೈಲಿಗೆ ವಿರುದ್ದವಾದ ಹೊಸ ದಾರಿ. ಇದೇ ಸಮಾಜದ ನೀತಿ ನಿಯಮಗಳಿಗೆ ಅನುಸಾರವಾಗಿಯೇ ಬದುಕು ಪ್ರಾರಂಭಿಸಿದರೂ ಯಾವುದೋ ಕಾರಣದಿಂದ ಅಥವಾ ಪರಿಸ್ಥಿತಿಯ ಒತ್ತಡದಿಂದ ಸ್ವತಂತ್ರ ಚಿಂತನೆ ರೂಪಿಸಿಕೊಂಡು ಹೊಸ ದಾರಿಯಲ್ಲಿ ಮುನ್ನಡೆಯುವ ಪ್ರಯತ್ನ. ಇದು ಸ್ವಲ್ಪ ಅಸ್ಪಷ್ಟ. ದಾರಿಯಲ್ಲಿ ಸೋಲು ಗೆಲುವಿನ ಎಲ್ಲಾ ಸಾಧ್ಯತೆಯೂ ಇರುತ್ತದೆ. ತುಂಬಾ ರಿಸ್ಕ್ ಇಲ್ಲಿದೆ. ಬದುಕು ಪ್ರಪಾತಕ್ಕೆ ಕುಸಿಯಲೂ ಬಹುದು. ಸಾಂಪ್ರದಾಯಿಕ ಶೈಲಿಗೆ ವಿರುದ್ದವಾದುದರಿಂದ ಜನರ ಸಹಕಾರವೂ ದೊರೆಯುವುದಿಲ್ಲ.

ಎಲ್ಲಾ ಕಷ್ಟ ಸುಖಗಳಿಗೂ ತನ್ನ ಅರಿವಿನಿಂದಲೇ ಉತ್ತರ ಕಂಡುಕೊಳ್ಳಬೇಕು.
ಪ್ರವಾಹಕ್ಕೆ ವಿರುದ್ಧ ಈಜುವ ಸಾಹಸ ಮಾಡಬೇಕು.

ಈ ಎರಡು ದಾರಿಯಲ್ಲಿ ಯಾವುದು ಸರಿ ಯಾವುದು ತಪ್ಪು ಎಂಬ ಪ್ರಶ್ನೆಗಿಂತ ನಿಮ್ಮ ಮನಸ್ಥಿತಿ ಯಾವ ದಾರಿಗೆ ಒಗ್ಗುತ್ತದೆ ಎಂಬುದನ್ನು ನೀವೇ ನಿರ್ಧರಿಸಿಕೊಳ್ಳಬೇಕು‌.

ನೀವು ಮೃದು ಸ್ವಭಾವದವರಾಗಿದ್ದು ಯಥಾಸ್ಥಿತಿ ಇಷ್ಟು ಪಡುವವರಾದರೆ, ಹೆಚ್ಚಿನ ರಿಸ್ಕ್ ತೆಗೆದುಕೊಳ್ಳಲು ಇಷ್ಟವಿಲ್ಲದಿದ್ದರೆ, ತುಂಬಾ ಭಾವುಕರಾಗಿದ್ದರೆ, ಮನೆಯ ಜವಾಬ್ದಾರಿ ನಿಮ್ಮ ಹೆಗಲ ಮೇಲಿದ್ದರೆ ಮೊದಲಿನ ಆಯ್ಕೆ ಸೂಕ್ತ.

ಬಂದದ್ದೆಲ್ಲಾ ಬರಲಿ, ನೋವು ನಲಿವುಗಳನ್ನು ಅನುಭವಿಸಿಯೇ ತೀರುತ್ತೇನೆ, ನನ್ನ ಕಷ್ಟ ಸುಖಗಳನ್ನು ನನ್ನ ಕ್ರಿಯೆ ಪ್ರತಿಕ್ರಿಯೆಗಳೇ ನಿರ್ಧರಿಸುತ್ತವೆ, ಒಟ್ಟಿನಲ್ಲಿ ನನಗೆ ಸ್ವತಂತ್ರ ಚಿಂತನೆಯೇ ಬೇಕು. ಯಾವ ಪೂರ್ವ ನಿರ್ಧಾರಿತ ಸಿದ್ಧಾಂತಗಳನ್ನು ಪ್ರಶ್ನಿಸಿ, ಸರಿ ಎನಿಸಿದೆ ಒಪ್ಪಿಕೊಳ್ಳುವುದಿಲ್ಲ. ಪ್ರಪಾತಕ್ಕೆ ಬಿದ್ದರೂ ಅದು ನನ್ನ ನಿರ್ಧಾರಗಳ ಫಲಿತಾಂಶ ಕಾರಣ ಎಂಬ ಮನೋಭಾವದವರಿಗೆ ಎರಡನೆಯ ದಾರಿ ಸೂಕ್ತ.

ಒಟ್ಟು ಫಲಿತಾಂಶದ ದೃಷ್ಟಿಯಿಂದ ನೋಡುವುದಾದರೆ ಈ ಸಮಾಜದಲ್ಲಿ ಸುಮಾರು ಶೇಕಡಾ 90% ರಷ್ಟು ವಾಸ್ತವ ಜೀವನದಲ್ಲಿ ಯಶಸ್ಸಿಯಾಗಿರುವವರು ಸಾಂಪ್ರದಾಯಿಕ ಜೀವನಕ್ಕೆ ಶರಣಾಗಿರುವವರೇ ಆಗಿರುತ್ತಾರೆ.

ಎರಡನೆಯ ವರ್ಗದವರು ವಿಫಲರಾಗುವುದೇ ಹೆಚ್ಚಾದರೂ, ಬದುಕನ್ನು ಕ್ರಿಯಾತ್ಮಕವಾಗಿ ನೋಡಿ, ತಮ್ಮನ್ನು ಹೊಸ ಪ್ರಯೋಗಗಳಿಗೆ ತೆರೆದುಕೊಂಡು ಸ್ವತಂತ್ರ ಜೀವನ ನಡೆಸುತ್ತಾರೆ.

ಸಂಪ್ರದಾಯವಾದಿಗಳದು ಹೆಚ್ಚಿನ ಭಾಗ ನೆಮ್ಮದಿಯ ಬದುಕಾದರೆ,
ಹೊಸ ದಾರಿಯ ಹುಡುಕಾಟದವರದು ಸದಾ ಅತೃಪ್ತ ಆತ್ಮ.

ವಿಚಿತ್ರವೆಂದರೆ,
ಅವರಿಗೆ ಇವರು ಅರೆ ಹುಚ್ಚರಂತೆ,
ಇವರಿಗೆ ಅವರು ಅರೆ ಹುಚ್ಚರಂತೆ ಕಾಣುತ್ತಾರೆ.

ಬಹುತೇಕ ನನ್ನ ದಾರಿ ಎರಡನೆಯ ಮಾರ್ಗದ ಸಮೀಪದಲ್ಲಿದೆ ಎನಿಸುತ್ತದೆ………….

ನಿಮ್ಮ ಆಯ್ಕೆ ಯಾವುದೋ ?

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

7 hours ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

19 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

20 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

22 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

23 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

1 day ago