Categories: ಲೇಖನ

ಬದುಕಿನ ಪಯಣದ ಹಾದಿಯಲ್ಲಿ ಎರಡು ದಾರಿ ಮತ್ತು ಎರಡು ಆಯ್ಕೆಗಳು……

ಬದುಕಿನ ಪಯಣದ ಹಾದಿಯಲ್ಲಿ,

ಎರಡು ದಾರಿಗಳು ಮತ್ತು ಎರಡು ಆಯ್ಕೆಗಳು……..

ಪ್ರತಿಯೊಬ್ಬರ ಜೀವನದಲ್ಲೂ ಹುಟ್ಟಿನಿಂದ ಕೊನೆಯವರೆಗೂ ಎಲ್ಲಾ ವಿಭಾಗಗಳಲ್ಲೂ ಈ ದಾರಿಗಳು ಇರುತ್ತವೆ.

ಒಂದು,

ಹಿರಿಯರು ತೋರಿದ, ಧರ್ಮಗಳು ನೀಡಿದ, ಗ್ರಂಥಗಳು ಹೇಳಿದ ಅನುಭವದ ಆಧಾರದ ಮೇಲೆ ರೂಪಗೊಂಡ ಸಾಂಪ್ರದಾಯಿಕ ಮಾರ್ಗ.

ಹುಟ್ಟಿನ ಕಾರಣಕ್ಕೆ ದೊರೆಯುವ ಪ್ರದೇಶ, ತಂದೆ ತಾಯಿ ಮತ್ತು ಸಂಬಂದಗಳು, ಜಾತಿ ಭಾಷೆ ಧರ್ಮ ದೇವರು ಪರಿಸರ ಶಿಕ್ಷಣ ಉದ್ಯೋಗ ವೈವಾಹಿಕ ಬದುಕು ಹೀಗೆ ಎಲ್ಲವೂ ಹೆಚ್ಚು ಕಡಿಮೆ ತುಂಬಾ ಯೋಚಿಸದೆ ನಮ್ಮ ಆಯ್ಕೆಗಳು ಸಿದ್ದವಾಗಿರುತ್ತದೆ. ನೀವು ಗುರು ಹಿರಿಯರು ತೋರಿದ ಮಾರ್ಗದಲ್ಲಿ ನಡೆದರೆ ಸಾಕು. ಬದುಕಿನ ಒಂದು ಹಂತವನ್ನು ಸುಲಭವಾಗಿ ತಲುಪುತ್ತೀರಿ. ಆ ಸಂಧರ್ಭದಲ್ಲಿ ಎದುರಾಗುವ ಕಷ್ಟ ಸುಖಗಳಿಗೂ ಈ ಮಾರ್ಗದಲ್ಲಿ ಮೊದಲೇ ಪರಿಹಾರ ನಿರ್ಧಾರವಾಗುತ್ತದೆ. ನೀವು ಹೊಸ ದಾರಿ ಹುಡುಕುವ ಅವಶ್ಯಕತೆ ಇರುವುದಿಲ್ಲ.

ಹುಟ್ಟಿನ ಸಂಭ್ರಮ, ಸಾವಿನ ದುಃಖ, ಅನಿರೀಕ್ಷಿತ ಅಪಘಾತ, ಅನಾರೋಗ್ಯ, ವಿವಾಹ ವಿಚ್ಛೇದನ ಎಲ್ಲಕ್ಕೂ ದೇವರ ಧರ್ಮದ ನಂಬಿಕೆಯ ಜ್ಯೋತಿಷಿಗಳ ಪುನರ್ಜನ್ಮದ ಪರಿಹಾರ ಇರುತ್ತದೆ. ಭಾರತೀಯರ ಸಹಜ ಬದುಕಿನ ಶೈಲಿ ಇದು.

ಇನ್ನೊಂದು,

ಈ ಸಾಂಪ್ರದಾಯಿಕ ಶೈಲಿಗೆ ವಿರುದ್ದವಾದ ಹೊಸ ದಾರಿ. ಇದೇ ಸಮಾಜದ ನೀತಿ ನಿಯಮಗಳಿಗೆ ಅನುಸಾರವಾಗಿಯೇ ಬದುಕು ಪ್ರಾರಂಭಿಸಿದರೂ ಯಾವುದೋ ಕಾರಣದಿಂದ ಅಥವಾ ಪರಿಸ್ಥಿತಿಯ ಒತ್ತಡದಿಂದ ಸ್ವತಂತ್ರ ಚಿಂತನೆ ರೂಪಿಸಿಕೊಂಡು ಹೊಸ ದಾರಿಯಲ್ಲಿ ಮುನ್ನಡೆಯುವ ಪ್ರಯತ್ನ. ಇದು ಸ್ವಲ್ಪ ಅಸ್ಪಷ್ಟ. ದಾರಿಯಲ್ಲಿ ಸೋಲು ಗೆಲುವಿನ ಎಲ್ಲಾ ಸಾಧ್ಯತೆಯೂ ಇರುತ್ತದೆ. ತುಂಬಾ ರಿಸ್ಕ್ ಇಲ್ಲಿದೆ. ಬದುಕು ಪ್ರಪಾತಕ್ಕೆ ಕುಸಿಯಲೂ ಬಹುದು. ಸಾಂಪ್ರದಾಯಿಕ ಶೈಲಿಗೆ ವಿರುದ್ದವಾದುದರಿಂದ ಜನರ ಸಹಕಾರವೂ ದೊರೆಯುವುದಿಲ್ಲ.

ಎಲ್ಲಾ ಕಷ್ಟ ಸುಖಗಳಿಗೂ ತನ್ನ ಅರಿವಿನಿಂದಲೇ ಉತ್ತರ ಕಂಡುಕೊಳ್ಳಬೇಕು.
ಪ್ರವಾಹಕ್ಕೆ ವಿರುದ್ಧ ಈಜುವ ಸಾಹಸ ಮಾಡಬೇಕು.

ಈ ಎರಡು ದಾರಿಯಲ್ಲಿ ಯಾವುದು ಸರಿ ಯಾವುದು ತಪ್ಪು ಎಂಬ ಪ್ರಶ್ನೆಗಿಂತ ನಿಮ್ಮ ಮನಸ್ಥಿತಿ ಯಾವ ದಾರಿಗೆ ಒಗ್ಗುತ್ತದೆ ಎಂಬುದನ್ನು ನೀವೇ ನಿರ್ಧರಿಸಿಕೊಳ್ಳಬೇಕು‌.

ನೀವು ಮೃದು ಸ್ವಭಾವದವರಾಗಿದ್ದು ಯಥಾಸ್ಥಿತಿ ಇಷ್ಟು ಪಡುವವರಾದರೆ, ಹೆಚ್ಚಿನ ರಿಸ್ಕ್ ತೆಗೆದುಕೊಳ್ಳಲು ಇಷ್ಟವಿಲ್ಲದಿದ್ದರೆ, ತುಂಬಾ ಭಾವುಕರಾಗಿದ್ದರೆ, ಮನೆಯ ಜವಾಬ್ದಾರಿ ನಿಮ್ಮ ಹೆಗಲ ಮೇಲಿದ್ದರೆ ಮೊದಲಿನ ಆಯ್ಕೆ ಸೂಕ್ತ.

ಬಂದದ್ದೆಲ್ಲಾ ಬರಲಿ, ನೋವು ನಲಿವುಗಳನ್ನು ಅನುಭವಿಸಿಯೇ ತೀರುತ್ತೇನೆ, ನನ್ನ ಕಷ್ಟ ಸುಖಗಳನ್ನು ನನ್ನ ಕ್ರಿಯೆ ಪ್ರತಿಕ್ರಿಯೆಗಳೇ ನಿರ್ಧರಿಸುತ್ತವೆ, ಒಟ್ಟಿನಲ್ಲಿ ನನಗೆ ಸ್ವತಂತ್ರ ಚಿಂತನೆಯೇ ಬೇಕು. ಯಾವ ಪೂರ್ವ ನಿರ್ಧಾರಿತ ಸಿದ್ಧಾಂತಗಳನ್ನು ಪ್ರಶ್ನಿಸಿ, ಸರಿ ಎನಿಸಿದೆ ಒಪ್ಪಿಕೊಳ್ಳುವುದಿಲ್ಲ. ಪ್ರಪಾತಕ್ಕೆ ಬಿದ್ದರೂ ಅದು ನನ್ನ ನಿರ್ಧಾರಗಳ ಫಲಿತಾಂಶ ಕಾರಣ ಎಂಬ ಮನೋಭಾವದವರಿಗೆ ಎರಡನೆಯ ದಾರಿ ಸೂಕ್ತ.

ಒಟ್ಟು ಫಲಿತಾಂಶದ ದೃಷ್ಟಿಯಿಂದ ನೋಡುವುದಾದರೆ ಈ ಸಮಾಜದಲ್ಲಿ ಸುಮಾರು ಶೇಕಡಾ 90% ರಷ್ಟು ವಾಸ್ತವ ಜೀವನದಲ್ಲಿ ಯಶಸ್ಸಿಯಾಗಿರುವವರು ಸಾಂಪ್ರದಾಯಿಕ ಜೀವನಕ್ಕೆ ಶರಣಾಗಿರುವವರೇ ಆಗಿರುತ್ತಾರೆ.

ಎರಡನೆಯ ವರ್ಗದವರು ವಿಫಲರಾಗುವುದೇ ಹೆಚ್ಚಾದರೂ, ಬದುಕನ್ನು ಕ್ರಿಯಾತ್ಮಕವಾಗಿ ನೋಡಿ, ತಮ್ಮನ್ನು ಹೊಸ ಪ್ರಯೋಗಗಳಿಗೆ ತೆರೆದುಕೊಂಡು ಸ್ವತಂತ್ರ ಜೀವನ ನಡೆಸುತ್ತಾರೆ.

ಸಂಪ್ರದಾಯವಾದಿಗಳದು ಹೆಚ್ಚಿನ ಭಾಗ ನೆಮ್ಮದಿಯ ಬದುಕಾದರೆ,
ಹೊಸ ದಾರಿಯ ಹುಡುಕಾಟದವರದು ಸದಾ ಅತೃಪ್ತ ಆತ್ಮ.

ವಿಚಿತ್ರವೆಂದರೆ,
ಅವರಿಗೆ ಇವರು ಅರೆ ಹುಚ್ಚರಂತೆ,
ಇವರಿಗೆ ಅವರು ಅರೆ ಹುಚ್ಚರಂತೆ ಕಾಣುತ್ತಾರೆ.

ಬಹುತೇಕ ನನ್ನ ದಾರಿ ಎರಡನೆಯ ಮಾರ್ಗದ ಸಮೀಪದಲ್ಲಿದೆ ಎನಿಸುತ್ತದೆ………….

ನಿಮ್ಮ ಆಯ್ಕೆ ಯಾವುದೋ ?

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

3 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

1 day ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

1 day ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

2 days ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

2 days ago