Categories: ಲೇಖನ

ಬದುಕೊಂದು ಊಹೆಗೆ ನಿಲುಕದ ಅನಂತದೆಡೆಗೆ ಪಯಣ….

ಸಾಮಾಜಿಕ ಬದುಕಿನ ಒಳಪುಟ………..

ಆಳವಾಗಿ ಪ್ರೀತಿಸುವವರು ಒಂದಷ್ಟು ಜನ,
ಅಷ್ಟೇ ಗಾಢವಾಗಿ ದ್ವೇಷಿಸುವವರು ಇನ್ನೊಂದಷ್ಟು ಜನ,…..

ಮೆಚ್ಚುವವರಿಗೆ ಬರವಿಲ್ಲ,
ಟೀಕಿಸುವವರು ಕಡಿಮೆಯೇನಿಲ್ಲ,…….

ಅಸೂಯೆ ಒಳಗೊಳಗೆ,
ಕುಹುಕ ನಗು ಮೇಲಿನ ಹೊದಿಕೆ,….

ಎತ್ತಿ ಕಟ್ಟುವವರು ಹಲವರು,
ಎಚ್ಚರಿಸುವವರು ಕೆಲವರು,……

ಹೃದಯ ತಟ್ಟುವವರು ಇದ್ದಾರೆ,
ಬೆನ್ನಿಗೆ ಇರಿಯುವವರೂ ಉಂಟು,……

ಧೈರ್ಯ ತುಂಬುವವರು,
ಭಯ ಪಡಿಸುವವರು,
ಜೊತೆಯಾಗುವವರು,
ದೂರ ಸರಿಯುವವರು,
ಸ್ವಾಗತಿಸುವವರು,
ವಿರೋಧಿಸುವವರು,……

ತಪ್ಪು ಅರ್ಥೈಸಿಕೊಂಡವರು,
ನಿಜದ ಅನುಭಾವಿಗಳು,
ಪೂರ್ವಾಗ್ರಹ ಪೀಡಿತರು,
ವಿಶಾಲ ದೃಷ್ಟಿಯವರು,
ಮಜಾ ತೆಗೆದುಕೊಳ್ಳುವವರು,
ಹಿತ ಬಯಸುವವರು,…..

ನಿರ್ಲಿಪ್ತರು – ನಿರ್ಲಕ್ಷ್ಯವಹಿಸುವವರು,
ಹಿಂಸಾವಾದಿಗಳು, ಕರುಣಾಮಯಿಗಳು,
ಮೇಲೆತ್ತುವವರು,
ಕೆಳಗೆ ತುಳಿಯುವವರು,
ಸ್ವಾಭಿಮಾನಗಳು,
ಮಾರಿಕೊಂಡವರು,……

ಮುಖವಾಡ ಧರಿಸಿರುವವರು,
ಸಹಜ ಸ್ವಭಾವದವರು,
ಆಕ್ರೋಶ ನುಡಿಯ ಮಾತುಗಳು
ಮೆಲು ಧ್ವನಿಯ ವಿನಯಿಗಳು,
ನಗುನಗುತ್ತಾ ಅಳಿಸುವವರು,
ಅಳುವಿನಲ್ಲಿ ನಗುತ್ತಾ ಜೊತೆಯಾಗುವವರು,…..

ನಿಜ ವೀರರು,
ರಣ ಹೇಡಿಗಳು,
ಬಹುಮಾನಿಸುವವರು,
ಅವಮಾನಿಸುವವರು,
ಪ್ರೇರೇಪಿಸುವವರು,
ಪ್ರಚೋದಿಸುವವರು,
ತ್ಯಾಗಿಗಳು – ಸ್ವಾರ್ಥಿಗಳು,
ಜಾಣ ಪೆದ್ದರು – ಪೆದ್ದ ಜಾಣರು,……

ನವ ರಸಗಳು,
64 ವಿದ್ಯೆಗಳು,
ಊಹೆಗೂ ನಿಲುಕದ ಮನಸುಗಳು……

18 ರ ಕನಸುಗಳು,
30 ರ ಆಸೆಗಳು,
50 ರ ಭರವಸೆಗಳು,
70 ರ ನೋವುಗಳು,
ಸಾಮಾಜಿಕ ಜಾಲತಾಣಗಳ ಅಭಿಪ್ರಾಯಗಳು,….

ಯೇಸುವನ್ನೇ ಶಿಲುಬೆಗೇರಿಸಿದರು,
ಬಸವನನ್ನೇ ಕೊಂದರು,
ಅಬ್ರಹಾಂ ಲಿಂಕನ್ನನ್ನನ್ನೇ ಇಲ್ಲವಾಗಿಸಿದರು,
ಪೈಗಂಬರನನ್ನೇ ಓಡಿಸಿದರು,
ಗಾಂಧಿಗೇ ಗುಂಡಿಕ್ಕಿದರು,…….

ನಮ್ಮ ತನವೂ ಇರಬೇಕು,
ಹೊಂದಾಣಿಕೆಯೂ ಆಗಬೇಕು,
ಸಹಕಾರವೂ ಸಿಗಬೇಕು…..
ವೈವಿಧ್ಯತೆಯೂ ಬೆರೆಯಬೇಕು,
ಅತಿರೇಕಗಳ ನಡುವೆ ಸಮನ್ವಯ.. ‌…

ಈ ಎಲ್ಲದರ ನಡುವೆ ‌ವಾಸ್ತವದ ಬದುಕು,
ವ್ಯಾವಹಾರಿಕ ಬದುಕು, ನೆಮ್ಮದಿಯ ಜೀವನದ ಹುಡುಕಾಟ…….

ವಯಸ್ಸಿನ ಅಂತರ,
ಹಣಕಾಸಿನ ವ್ಯತ್ಯಾಸ,
ಜಾತಿಯ ಕಂದರ,
ವಿದ್ಯೆಯ ಭಿನ್ನತೆ,
ಅಧಿಕಾರದ ಅಸಮಾನತೆ,

ಬದುಕನ್ನು ಬಯಸುವವರಿಗೆ,
ಹೆದರಿಕೆ, ನಾಚಿಕೆ, ಅವಮಾನ,
ಆಸೆ, ಸಾವನ್ನು ಸ್ವಾಗತಿಸುವವರಿಗೆ…….

ಹೀಗೆ ಬದುಕೊಂದು ಊಹೆಗೆ ನಿಲುಕದ ಅನಂತದೆಡೆಗೆ ಪಯಣ…….

ಅದರಲ್ಲಿ,

ಬರುವವರಿಗೆ ಸ್ವಾಗತ,
ಹೋಗುವವರಿಗೆ ವಂದನೆಗಳು,…..

ಮೆಚ್ಚುವವರಿಗೆ ಧನ್ಯವಾದಗಳು,
ಟೀಕಿಸುವವರಿಗೆ ನಮಸ್ಕಾರಗಳು,….

ಅಭಿಮಾನಿಸುವವರಿಗೆ ಕೃತಜ್ಞತೆಗಳು,
ಅಸೂಯೆಪಡುವವರಿಗೆ ಸಹಾನುಭೂತಿಗಳು,…..

ಪ್ರೀತಿಸುವವರಿಗೆ ನಗು,
ದ್ವೇಷಿಸುವವರಿಗೆ ನಿರ್ಲಕ್ಷ್ಯ,…..

ಸಹಾಯ ಮಾಡುವವರಿಗೆ ಸಲಾಂ,
ತೊಂದರೆ ಕೊಡುವವರಿಗೆ ಗುಡ್ ಬೈ,…..

ಆತ್ಮೀಯರಿಗೊಂದಷ್ಟು ಅಪ್ಪುಗೆ,
ಪರಿಚಿತರಿಗೊಂದಷ್ಟು ಸಲುಗೆ,…..

ಪ್ರೋತ್ಸಾಹಿಸುವವರಿಗೆ ನಮನಗಳು,
ಕಾಲೆಳೆಯುವವರಿಗೆ ತಿರಸ್ಕಾರಗಳು,….

ಜೊತೆಯಾಗುವವರಿಗೆ
ಯಶಸ್ಸಾಗಲಿ,
ದೂರಾವಾಗುವವರಿಗೆ ಒಳ್ಳೆಯದಾಗಲಿ,……

ಗೆದ್ದವರಿಗೆ ಅಭಿನಂದನೆಗಳು,
ಸೋತವರಿಗೆ ಹಿತ ನುಡಿಗಳು,…..

ಹೀಗೆ, ಎಲ್ಲಾ ಭಾವನೆಗಳೊಂದಿಗೆ, ಸಾಗುತ್ತಲೇ ಇದೆ ಬದುಕು,….

ನನ್ನದು, ನಿಮ್ಮದು, ಎಲ್ಲರದೂ,

ಬದುಕಿನೊಂದಿಗೆ ಸರಸವಾಡುತ್ತಾ,
ವಿಧಿಯೊಂದಿಗೆ ಚೆಲ್ಲಾಟವಾಡುತ್ತಾ,
ಬರುವುದನ್ನು ಸ್ವೀಕರಿಸುತ್ತಾ,
ಹೋಗುವುದನ್ನು ಬೀಳ್ಕೊಡುತ್ತಾ,
ನಗುತ್ತಾ, ಅಳುತ್ತಾ,….‌…‌‌‌

ಸಾಗುತ್ತಲೇ ಇರಲಿ ಜೀವನ…..

ಕೊನೆಯೇ ಇಲ್ಲವೇನೋ ಎಂಬ ಭಾವದೊಂದಿಗೆ..‌‌‌…………..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಹೊಸ ವರ್ಷಾಚರಣೆಗೆ ಕ್ಷಣಗಣನೆ- ನ್ಯೂ ಇಯರ್ ಸೆಲೆಬ್ರೇಷನ್ ಗೆ ನಂದಿಬೆಟ್ಟಕ್ಕೆ ಹೋಗುವ ಪ್ರವಾಸಿಗರಿಗೆ ನಿರ್ಬಂಧ

ಹೊಸ ವರ್ಷದ ಸ್ವಾಗತಕ್ಕೆ ಇಡೀ ರಾಜ್ಯವೇ ಸಜ್ಜಾಗುತ್ತಿದೆ. ಇತ್ತ ಹೊಸ ವರ್ಷದ ಆಚರಣೆ ನೆಪದಲ್ಲಿ ನಡೆಯುವ ಮೋಜು-ಮಸ್ತಿ, ಅನಾಹುತ ತಪ್ಪಿಸಿ,…

2 hours ago

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಒಟ್ಟು 17,350 ಮೆಟ್ರಿಕ್‌ ಟನ್ ಮೆಕ್ಕೆಜೋಳ ಖರೀದಿ- ಇನ್ನೂ 76,430 ಮೆಟ್ರಿಕ್‌ ಟನ್‌ ಖರೀದಿಸಲು ಬಾಕಿಯಿದೆ- ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಹಾಗೂ ರೈಲ್ವೆ ಯೋಜನೆಗಳ ಭೂಸ್ವಾಧೀನ ಕುರಿತು ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ…

4 hours ago

ಸ್ಲೋಚ್ ಕ್ಯಾಪ್ ಗೆ ವಿದಾಯ: ನೀಲಿ ಬಣ್ಣದ ಪೀಕ್ ಕ್ಯಾಪ್ ಧರಿಸಿ ಮಿಂಚಿದ ಬೆಂ ಗ್ರಾ ಜಿಲ್ಲಾ ಪೊಲೀಸ್ ಸಿಬ್ಬಂದಿ

1956ರ ದಶಕದಿಂದಲೂ ಪೊಲೀಸರು ಧರಿಸುತ್ತಿದ್ದ ಸ್ಲೋಚ್ ಕ್ಯಾಪ್ ಗೆ ವಿದಾಯ ಹೇಳುವ ಮೂಲಕ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ…

16 hours ago

ಹೊಸ ವರ್ಷಾಚರಣೆ: ಮಹಿಳೆಯರ ಸುರಕ್ಷತೆಗೆ ಮುನ್ನೆಚ್ಚರಿಕೆ ಕ್ರಮ ಪೊಲೀಸ್ ಇಲಾಖೆ ಕೈಗೊಳ್ಳಬೇಕು- ಸಿಎಂ ಸಿದ್ದರಾಮಯ್ಯ

ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಸೂಚನೆಗಳು…

17 hours ago

ಜ.1ರಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲೈಟ್ ಕಡ್ಡಾಯ – ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ- ಡಿವೈಎಸ್ಪಿ ಪಾಂಡುರಂಗ

ಹೆಲ್ಮೆಟ್ ಧರಿಸದ ಕಾರಣದಿಂದಲೇ ಅಪಘಾತಗಳಲ್ಲಿ ಹೆಚ್ಚಿನ ಸಾವು, ನೋವುಗಳು ಸಂಭವಿಸುತ್ತಲೇ ಇವೆ. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಸಂಚಾರ ನಿಯಮ…

20 hours ago

ಹಿಟ್ & ರನ್: ಸಿಮೆಂಟ್ ಬಲ್ಕರ್ ಗೆ ಬೈಕ್ ಡಿಕ್ಕಿ: ಇಬ್ಬರು ಬೈಕ್ ಸವಾರರು ಸಾವು: ಸಿಮೆಂಟ್ ಬಲ್ಕರ್ ಪರಾರಿ

ಸಿಮೆಂಟ್ ಬಲ್ಕರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ಸುಮಾರು…

23 hours ago