Categories: ಲೇಖನ

ಬದುಕೊಂದು ಊಹೆಗೆ ನಿಲುಕದ ಅನಂತದೆಡೆಗೆ ಪಯಣ….

ಸಾಮಾಜಿಕ ಬದುಕಿನ ಒಳಪುಟ………..

ಆಳವಾಗಿ ಪ್ರೀತಿಸುವವರು ಒಂದಷ್ಟು ಜನ,
ಅಷ್ಟೇ ಗಾಢವಾಗಿ ದ್ವೇಷಿಸುವವರು ಇನ್ನೊಂದಷ್ಟು ಜನ,…..

ಮೆಚ್ಚುವವರಿಗೆ ಬರವಿಲ್ಲ,
ಟೀಕಿಸುವವರು ಕಡಿಮೆಯೇನಿಲ್ಲ,…….

ಅಸೂಯೆ ಒಳಗೊಳಗೆ,
ಕುಹುಕ ನಗು ಮೇಲಿನ ಹೊದಿಕೆ,….

ಎತ್ತಿ ಕಟ್ಟುವವರು ಹಲವರು,
ಎಚ್ಚರಿಸುವವರು ಕೆಲವರು,……

ಹೃದಯ ತಟ್ಟುವವರು ಇದ್ದಾರೆ,
ಬೆನ್ನಿಗೆ ಇರಿಯುವವರೂ ಉಂಟು,……

ಧೈರ್ಯ ತುಂಬುವವರು,
ಭಯ ಪಡಿಸುವವರು,
ಜೊತೆಯಾಗುವವರು,
ದೂರ ಸರಿಯುವವರು,
ಸ್ವಾಗತಿಸುವವರು,
ವಿರೋಧಿಸುವವರು,……

ತಪ್ಪು ಅರ್ಥೈಸಿಕೊಂಡವರು,
ನಿಜದ ಅನುಭಾವಿಗಳು,
ಪೂರ್ವಾಗ್ರಹ ಪೀಡಿತರು,
ವಿಶಾಲ ದೃಷ್ಟಿಯವರು,
ಮಜಾ ತೆಗೆದುಕೊಳ್ಳುವವರು,
ಹಿತ ಬಯಸುವವರು,…..

ನಿರ್ಲಿಪ್ತರು – ನಿರ್ಲಕ್ಷ್ಯವಹಿಸುವವರು,
ಹಿಂಸಾವಾದಿಗಳು, ಕರುಣಾಮಯಿಗಳು,
ಮೇಲೆತ್ತುವವರು,
ಕೆಳಗೆ ತುಳಿಯುವವರು,
ಸ್ವಾಭಿಮಾನಗಳು,
ಮಾರಿಕೊಂಡವರು,……

ಮುಖವಾಡ ಧರಿಸಿರುವವರು,
ಸಹಜ ಸ್ವಭಾವದವರು,
ಆಕ್ರೋಶ ನುಡಿಯ ಮಾತುಗಳು
ಮೆಲು ಧ್ವನಿಯ ವಿನಯಿಗಳು,
ನಗುನಗುತ್ತಾ ಅಳಿಸುವವರು,
ಅಳುವಿನಲ್ಲಿ ನಗುತ್ತಾ ಜೊತೆಯಾಗುವವರು,…..

ನಿಜ ವೀರರು,
ರಣ ಹೇಡಿಗಳು,
ಬಹುಮಾನಿಸುವವರು,
ಅವಮಾನಿಸುವವರು,
ಪ್ರೇರೇಪಿಸುವವರು,
ಪ್ರಚೋದಿಸುವವರು,
ತ್ಯಾಗಿಗಳು – ಸ್ವಾರ್ಥಿಗಳು,
ಜಾಣ ಪೆದ್ದರು – ಪೆದ್ದ ಜಾಣರು,……

ನವ ರಸಗಳು,
64 ವಿದ್ಯೆಗಳು,
ಊಹೆಗೂ ನಿಲುಕದ ಮನಸುಗಳು……

18 ರ ಕನಸುಗಳು,
30 ರ ಆಸೆಗಳು,
50 ರ ಭರವಸೆಗಳು,
70 ರ ನೋವುಗಳು,
ಸಾಮಾಜಿಕ ಜಾಲತಾಣಗಳ ಅಭಿಪ್ರಾಯಗಳು,….

ಯೇಸುವನ್ನೇ ಶಿಲುಬೆಗೇರಿಸಿದರು,
ಬಸವನನ್ನೇ ಕೊಂದರು,
ಅಬ್ರಹಾಂ ಲಿಂಕನ್ನನ್ನನ್ನೇ ಇಲ್ಲವಾಗಿಸಿದರು,
ಪೈಗಂಬರನನ್ನೇ ಓಡಿಸಿದರು,
ಗಾಂಧಿಗೇ ಗುಂಡಿಕ್ಕಿದರು,…….

ನಮ್ಮ ತನವೂ ಇರಬೇಕು,
ಹೊಂದಾಣಿಕೆಯೂ ಆಗಬೇಕು,
ಸಹಕಾರವೂ ಸಿಗಬೇಕು…..
ವೈವಿಧ್ಯತೆಯೂ ಬೆರೆಯಬೇಕು,
ಅತಿರೇಕಗಳ ನಡುವೆ ಸಮನ್ವಯ.. ‌…

ಈ ಎಲ್ಲದರ ನಡುವೆ ‌ವಾಸ್ತವದ ಬದುಕು,
ವ್ಯಾವಹಾರಿಕ ಬದುಕು, ನೆಮ್ಮದಿಯ ಜೀವನದ ಹುಡುಕಾಟ…….

ವಯಸ್ಸಿನ ಅಂತರ,
ಹಣಕಾಸಿನ ವ್ಯತ್ಯಾಸ,
ಜಾತಿಯ ಕಂದರ,
ವಿದ್ಯೆಯ ಭಿನ್ನತೆ,
ಅಧಿಕಾರದ ಅಸಮಾನತೆ,

ಬದುಕನ್ನು ಬಯಸುವವರಿಗೆ,
ಹೆದರಿಕೆ, ನಾಚಿಕೆ, ಅವಮಾನ,
ಆಸೆ, ಸಾವನ್ನು ಸ್ವಾಗತಿಸುವವರಿಗೆ…….

ಹೀಗೆ ಬದುಕೊಂದು ಊಹೆಗೆ ನಿಲುಕದ ಅನಂತದೆಡೆಗೆ ಪಯಣ…….

ಅದರಲ್ಲಿ,

ಬರುವವರಿಗೆ ಸ್ವಾಗತ,
ಹೋಗುವವರಿಗೆ ವಂದನೆಗಳು,…..

ಮೆಚ್ಚುವವರಿಗೆ ಧನ್ಯವಾದಗಳು,
ಟೀಕಿಸುವವರಿಗೆ ನಮಸ್ಕಾರಗಳು,….

ಅಭಿಮಾನಿಸುವವರಿಗೆ ಕೃತಜ್ಞತೆಗಳು,
ಅಸೂಯೆಪಡುವವರಿಗೆ ಸಹಾನುಭೂತಿಗಳು,…..

ಪ್ರೀತಿಸುವವರಿಗೆ ನಗು,
ದ್ವೇಷಿಸುವವರಿಗೆ ನಿರ್ಲಕ್ಷ್ಯ,…..

ಸಹಾಯ ಮಾಡುವವರಿಗೆ ಸಲಾಂ,
ತೊಂದರೆ ಕೊಡುವವರಿಗೆ ಗುಡ್ ಬೈ,…..

ಆತ್ಮೀಯರಿಗೊಂದಷ್ಟು ಅಪ್ಪುಗೆ,
ಪರಿಚಿತರಿಗೊಂದಷ್ಟು ಸಲುಗೆ,…..

ಪ್ರೋತ್ಸಾಹಿಸುವವರಿಗೆ ನಮನಗಳು,
ಕಾಲೆಳೆಯುವವರಿಗೆ ತಿರಸ್ಕಾರಗಳು,….

ಜೊತೆಯಾಗುವವರಿಗೆ
ಯಶಸ್ಸಾಗಲಿ,
ದೂರಾವಾಗುವವರಿಗೆ ಒಳ್ಳೆಯದಾಗಲಿ,……

ಗೆದ್ದವರಿಗೆ ಅಭಿನಂದನೆಗಳು,
ಸೋತವರಿಗೆ ಹಿತ ನುಡಿಗಳು,…..

ಹೀಗೆ, ಎಲ್ಲಾ ಭಾವನೆಗಳೊಂದಿಗೆ, ಸಾಗುತ್ತಲೇ ಇದೆ ಬದುಕು,….

ನನ್ನದು, ನಿಮ್ಮದು, ಎಲ್ಲರದೂ,

ಬದುಕಿನೊಂದಿಗೆ ಸರಸವಾಡುತ್ತಾ,
ವಿಧಿಯೊಂದಿಗೆ ಚೆಲ್ಲಾಟವಾಡುತ್ತಾ,
ಬರುವುದನ್ನು ಸ್ವೀಕರಿಸುತ್ತಾ,
ಹೋಗುವುದನ್ನು ಬೀಳ್ಕೊಡುತ್ತಾ,
ನಗುತ್ತಾ, ಅಳುತ್ತಾ,….‌…‌‌‌

ಸಾಗುತ್ತಲೇ ಇರಲಿ ಜೀವನ…..

ಕೊನೆಯೇ ಇಲ್ಲವೇನೋ ಎಂಬ ಭಾವದೊಂದಿಗೆ..‌‌‌…………..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

6 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

7 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

9 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 day ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

1 day ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

1 day ago