Categories: ಲೇಖನ

ಬದುಕೊಂದು ಊಹೆಗೆ ನಿಲುಕದ ಅನಂತದೆಡೆಗೆ ಪಯಣ….

ಸಾಮಾಜಿಕ ಬದುಕಿನ ಒಳಪುಟ………..

ಆಳವಾಗಿ ಪ್ರೀತಿಸುವವರು ಒಂದಷ್ಟು ಜನ,
ಅಷ್ಟೇ ಗಾಢವಾಗಿ ದ್ವೇಷಿಸುವವರು ಇನ್ನೊಂದಷ್ಟು ಜನ,…..

ಮೆಚ್ಚುವವರಿಗೆ ಬರವಿಲ್ಲ,
ಟೀಕಿಸುವವರು ಕಡಿಮೆಯೇನಿಲ್ಲ,…….

ಅಸೂಯೆ ಒಳಗೊಳಗೆ,
ಕುಹುಕ ನಗು ಮೇಲಿನ ಹೊದಿಕೆ,….

ಎತ್ತಿ ಕಟ್ಟುವವರು ಹಲವರು,
ಎಚ್ಚರಿಸುವವರು ಕೆಲವರು,……

ಹೃದಯ ತಟ್ಟುವವರು ಇದ್ದಾರೆ,
ಬೆನ್ನಿಗೆ ಇರಿಯುವವರೂ ಉಂಟು,……

ಧೈರ್ಯ ತುಂಬುವವರು,
ಭಯ ಪಡಿಸುವವರು,
ಜೊತೆಯಾಗುವವರು,
ದೂರ ಸರಿಯುವವರು,
ಸ್ವಾಗತಿಸುವವರು,
ವಿರೋಧಿಸುವವರು,……

ತಪ್ಪು ಅರ್ಥೈಸಿಕೊಂಡವರು,
ನಿಜದ ಅನುಭಾವಿಗಳು,
ಪೂರ್ವಾಗ್ರಹ ಪೀಡಿತರು,
ವಿಶಾಲ ದೃಷ್ಟಿಯವರು,
ಮಜಾ ತೆಗೆದುಕೊಳ್ಳುವವರು,
ಹಿತ ಬಯಸುವವರು,…..

ನಿರ್ಲಿಪ್ತರು – ನಿರ್ಲಕ್ಷ್ಯವಹಿಸುವವರು,
ಹಿಂಸಾವಾದಿಗಳು, ಕರುಣಾಮಯಿಗಳು,
ಮೇಲೆತ್ತುವವರು,
ಕೆಳಗೆ ತುಳಿಯುವವರು,
ಸ್ವಾಭಿಮಾನಗಳು,
ಮಾರಿಕೊಂಡವರು,……

ಮುಖವಾಡ ಧರಿಸಿರುವವರು,
ಸಹಜ ಸ್ವಭಾವದವರು,
ಆಕ್ರೋಶ ನುಡಿಯ ಮಾತುಗಳು
ಮೆಲು ಧ್ವನಿಯ ವಿನಯಿಗಳು,
ನಗುನಗುತ್ತಾ ಅಳಿಸುವವರು,
ಅಳುವಿನಲ್ಲಿ ನಗುತ್ತಾ ಜೊತೆಯಾಗುವವರು,…..

ನಿಜ ವೀರರು,
ರಣ ಹೇಡಿಗಳು,
ಬಹುಮಾನಿಸುವವರು,
ಅವಮಾನಿಸುವವರು,
ಪ್ರೇರೇಪಿಸುವವರು,
ಪ್ರಚೋದಿಸುವವರು,
ತ್ಯಾಗಿಗಳು – ಸ್ವಾರ್ಥಿಗಳು,
ಜಾಣ ಪೆದ್ದರು – ಪೆದ್ದ ಜಾಣರು,……

ನವ ರಸಗಳು,
64 ವಿದ್ಯೆಗಳು,
ಊಹೆಗೂ ನಿಲುಕದ ಮನಸುಗಳು……

18 ರ ಕನಸುಗಳು,
30 ರ ಆಸೆಗಳು,
50 ರ ಭರವಸೆಗಳು,
70 ರ ನೋವುಗಳು,
ಸಾಮಾಜಿಕ ಜಾಲತಾಣಗಳ ಅಭಿಪ್ರಾಯಗಳು,….

ಯೇಸುವನ್ನೇ ಶಿಲುಬೆಗೇರಿಸಿದರು,
ಬಸವನನ್ನೇ ಕೊಂದರು,
ಅಬ್ರಹಾಂ ಲಿಂಕನ್ನನ್ನನ್ನೇ ಇಲ್ಲವಾಗಿಸಿದರು,
ಪೈಗಂಬರನನ್ನೇ ಓಡಿಸಿದರು,
ಗಾಂಧಿಗೇ ಗುಂಡಿಕ್ಕಿದರು,…….

ನಮ್ಮ ತನವೂ ಇರಬೇಕು,
ಹೊಂದಾಣಿಕೆಯೂ ಆಗಬೇಕು,
ಸಹಕಾರವೂ ಸಿಗಬೇಕು…..
ವೈವಿಧ್ಯತೆಯೂ ಬೆರೆಯಬೇಕು,
ಅತಿರೇಕಗಳ ನಡುವೆ ಸಮನ್ವಯ.. ‌…

ಈ ಎಲ್ಲದರ ನಡುವೆ ‌ವಾಸ್ತವದ ಬದುಕು,
ವ್ಯಾವಹಾರಿಕ ಬದುಕು, ನೆಮ್ಮದಿಯ ಜೀವನದ ಹುಡುಕಾಟ…….

ವಯಸ್ಸಿನ ಅಂತರ,
ಹಣಕಾಸಿನ ವ್ಯತ್ಯಾಸ,
ಜಾತಿಯ ಕಂದರ,
ವಿದ್ಯೆಯ ಭಿನ್ನತೆ,
ಅಧಿಕಾರದ ಅಸಮಾನತೆ,

ಬದುಕನ್ನು ಬಯಸುವವರಿಗೆ,
ಹೆದರಿಕೆ, ನಾಚಿಕೆ, ಅವಮಾನ,
ಆಸೆ, ಸಾವನ್ನು ಸ್ವಾಗತಿಸುವವರಿಗೆ…….

ಹೀಗೆ ಬದುಕೊಂದು ಊಹೆಗೆ ನಿಲುಕದ ಅನಂತದೆಡೆಗೆ ಪಯಣ…….

ಅದರಲ್ಲಿ,

ಬರುವವರಿಗೆ ಸ್ವಾಗತ,
ಹೋಗುವವರಿಗೆ ವಂದನೆಗಳು,…..

ಮೆಚ್ಚುವವರಿಗೆ ಧನ್ಯವಾದಗಳು,
ಟೀಕಿಸುವವರಿಗೆ ನಮಸ್ಕಾರಗಳು,….

ಅಭಿಮಾನಿಸುವವರಿಗೆ ಕೃತಜ್ಞತೆಗಳು,
ಅಸೂಯೆಪಡುವವರಿಗೆ ಸಹಾನುಭೂತಿಗಳು,…..

ಪ್ರೀತಿಸುವವರಿಗೆ ನಗು,
ದ್ವೇಷಿಸುವವರಿಗೆ ನಿರ್ಲಕ್ಷ್ಯ,…..

ಸಹಾಯ ಮಾಡುವವರಿಗೆ ಸಲಾಂ,
ತೊಂದರೆ ಕೊಡುವವರಿಗೆ ಗುಡ್ ಬೈ,…..

ಆತ್ಮೀಯರಿಗೊಂದಷ್ಟು ಅಪ್ಪುಗೆ,
ಪರಿಚಿತರಿಗೊಂದಷ್ಟು ಸಲುಗೆ,…..

ಪ್ರೋತ್ಸಾಹಿಸುವವರಿಗೆ ನಮನಗಳು,
ಕಾಲೆಳೆಯುವವರಿಗೆ ತಿರಸ್ಕಾರಗಳು,….

ಜೊತೆಯಾಗುವವರಿಗೆ
ಯಶಸ್ಸಾಗಲಿ,
ದೂರಾವಾಗುವವರಿಗೆ ಒಳ್ಳೆಯದಾಗಲಿ,……

ಗೆದ್ದವರಿಗೆ ಅಭಿನಂದನೆಗಳು,
ಸೋತವರಿಗೆ ಹಿತ ನುಡಿಗಳು,…..

ಹೀಗೆ, ಎಲ್ಲಾ ಭಾವನೆಗಳೊಂದಿಗೆ, ಸಾಗುತ್ತಲೇ ಇದೆ ಬದುಕು,….

ನನ್ನದು, ನಿಮ್ಮದು, ಎಲ್ಲರದೂ,

ಬದುಕಿನೊಂದಿಗೆ ಸರಸವಾಡುತ್ತಾ,
ವಿಧಿಯೊಂದಿಗೆ ಚೆಲ್ಲಾಟವಾಡುತ್ತಾ,
ಬರುವುದನ್ನು ಸ್ವೀಕರಿಸುತ್ತಾ,
ಹೋಗುವುದನ್ನು ಬೀಳ್ಕೊಡುತ್ತಾ,
ನಗುತ್ತಾ, ಅಳುತ್ತಾ,….‌…‌‌‌

ಸಾಗುತ್ತಲೇ ಇರಲಿ ಜೀವನ…..

ಕೊನೆಯೇ ಇಲ್ಲವೇನೋ ಎಂಬ ಭಾವದೊಂದಿಗೆ..‌‌‌…………..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಸರ್ಕಾರಗಳ ಸಾಧನೋತ್ಸವ…….

ಸರ್ಕಾರಗಳ ಸಾಧನೋತ್ಸವ....... ಕರ್ನಾಟಕದ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರ 8ನೇ ವರ್ಷದ ( 5+3 ) ಸಾಧನಾ ಉತ್ಸವ, ಭಾರತದ…

2 hours ago

ತಿಪ್ಪೂರು ವಿಎಸ್ ಎಸ್ ಎನ್ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ದೊಡ್ಡಬಳ್ಳಾಪುರ ತಾಲೂಕಿನ ತಿಪ್ಪೂರು ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿಎಸ್ಎಸ್ ಎನ್ ನ ನೂತನ ಅಧ್ಯಕ್ಷರಾಗಿ…

12 hours ago

ಹಕ್ಕಿಜ್ವರ ಶಂಕೆ: ನವಿಲುಗಳ ಮಾರಣ ಹೋಮ…

ನೆಲಮಂಗಲ: ನೆಲಮಂಗಲದಲ್ಲಿ ನವಿಲುಗಳ ಸಾಮೂಹಿಕ ಸಾವು ಪ್ರಕರಣ ಬೆಳಕಿಗೆ ಬಂದಿದೆ. ಹಕ್ಕಿಜ್ವರ (Bird Flu)ಶಂಕೆಯಿಂದ ಸುಮಾರು 10-15 ನವಿಲುಗಳು ಸಾವನ್ನಪ್ಪಿದ…

13 hours ago

ಮೇ.21ಕ್ಕೆ ಭೂಸ್ವಾಧೀನ ವಿರೋಧಿಸಿ ಡಿಸಿ ಕಚೇರಿಗೆ ಟ್ರ್ಯಾಕರ್ ಮೆರವಣಿಗೆ

ದೊಡ್ಡಬೆಳವಂಗಲ ಹೋಬಳಿಯ 2100 ಎಕರೆಯ ಭೂಸ್ವಾಧೀನ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿಗೆ ದೊಡ್ಡಬೆಳವಂಗಲ,‌ ಚಿಕ್ಕಬೆಳವಂಗಲ, ಸೊಣ್ಣೇನಹಳ್ಳಿ, ರಾಂಪುರ, ನಾರನಹಳ್ಳಿ ಗ್ರಾಮಗಳ ರೈತರಿಂದ…

15 hours ago

ಸ್ನೇಹಿತನ ಬರ್ತಡೇ ಪಾರ್ಟಿಗೆ ಬಂದಿದ್ದ ಯುವಕ ಈಜುಕೊಳಕ್ಕೆ ಬಿದ್ದು ಸಾವು

ದೊಡ್ಡಬಳ್ಳಾಪುರ: ಸ್ನೇಹಿತನ ಬರ್ತಡೇ ಪಾರ್ಟಿಗೆಂದು ಖಾಸಗಿ ರೆಸಾರ್ಟ್‌ಗೆ ಬಂದಿದ್ದ ಯುವಕನೊಬ್ಬ ನಿದ್ದೆಗಣ್ಣಿನಲ್ಲಿ ಈಜುಕೊಳಕ್ಕೆ ಬಿದ್ದು ಮೃತಪಟ್ಟ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…

16 hours ago

ದಶಕಗಳುರುಳಿದರೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಿಲ್ಲ ಜಿಲ್ಲಾ ಕೇಂದ್ರ

ರಾಜ್ಯ ರಾಜಧಾನಿ ಬೆಂಗಳೂರಿಗೆ ಪಕ್ಕದಲ್ಲೇ ಇರುವ ಜಿಲ್ಲೆ ಎಂದರೆ ಅದು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಕೈಗಾರಿಕಾ ಬೆಳವಣಿಗೆ, ವೇಗವಾದ ನಗರೀಕರಣ,…

1 day ago