Categories: ಲೇಖನ

ಬದುಕೊಂದು ಊಹೆಗೆ ನಿಲುಕದ ಅನಂತದೆಡೆಗೆ ಪಯಣ….

ಸಾಮಾಜಿಕ ಬದುಕಿನ ಒಳಪುಟ………..

ಆಳವಾಗಿ ಪ್ರೀತಿಸುವವರು ಒಂದಷ್ಟು ಜನ,
ಅಷ್ಟೇ ಗಾಢವಾಗಿ ದ್ವೇಷಿಸುವವರು ಇನ್ನೊಂದಷ್ಟು ಜನ,…..

ಮೆಚ್ಚುವವರಿಗೆ ಬರವಿಲ್ಲ,
ಟೀಕಿಸುವವರು ಕಡಿಮೆಯೇನಿಲ್ಲ,…….

ಅಸೂಯೆ ಒಳಗೊಳಗೆ,
ಕುಹುಕ ನಗು ಮೇಲಿನ ಹೊದಿಕೆ,….

ಎತ್ತಿ ಕಟ್ಟುವವರು ಹಲವರು,
ಎಚ್ಚರಿಸುವವರು ಕೆಲವರು,……

ಹೃದಯ ತಟ್ಟುವವರು ಇದ್ದಾರೆ,
ಬೆನ್ನಿಗೆ ಇರಿಯುವವರೂ ಉಂಟು,……

ಧೈರ್ಯ ತುಂಬುವವರು,
ಭಯ ಪಡಿಸುವವರು,
ಜೊತೆಯಾಗುವವರು,
ದೂರ ಸರಿಯುವವರು,
ಸ್ವಾಗತಿಸುವವರು,
ವಿರೋಧಿಸುವವರು,……

ತಪ್ಪು ಅರ್ಥೈಸಿಕೊಂಡವರು,
ನಿಜದ ಅನುಭಾವಿಗಳು,
ಪೂರ್ವಾಗ್ರಹ ಪೀಡಿತರು,
ವಿಶಾಲ ದೃಷ್ಟಿಯವರು,
ಮಜಾ ತೆಗೆದುಕೊಳ್ಳುವವರು,
ಹಿತ ಬಯಸುವವರು,…..

ನಿರ್ಲಿಪ್ತರು – ನಿರ್ಲಕ್ಷ್ಯವಹಿಸುವವರು,
ಹಿಂಸಾವಾದಿಗಳು, ಕರುಣಾಮಯಿಗಳು,
ಮೇಲೆತ್ತುವವರು,
ಕೆಳಗೆ ತುಳಿಯುವವರು,
ಸ್ವಾಭಿಮಾನಗಳು,
ಮಾರಿಕೊಂಡವರು,……

ಮುಖವಾಡ ಧರಿಸಿರುವವರು,
ಸಹಜ ಸ್ವಭಾವದವರು,
ಆಕ್ರೋಶ ನುಡಿಯ ಮಾತುಗಳು
ಮೆಲು ಧ್ವನಿಯ ವಿನಯಿಗಳು,
ನಗುನಗುತ್ತಾ ಅಳಿಸುವವರು,
ಅಳುವಿನಲ್ಲಿ ನಗುತ್ತಾ ಜೊತೆಯಾಗುವವರು,…..

ನಿಜ ವೀರರು,
ರಣ ಹೇಡಿಗಳು,
ಬಹುಮಾನಿಸುವವರು,
ಅವಮಾನಿಸುವವರು,
ಪ್ರೇರೇಪಿಸುವವರು,
ಪ್ರಚೋದಿಸುವವರು,
ತ್ಯಾಗಿಗಳು – ಸ್ವಾರ್ಥಿಗಳು,
ಜಾಣ ಪೆದ್ದರು – ಪೆದ್ದ ಜಾಣರು,……

ನವ ರಸಗಳು,
64 ವಿದ್ಯೆಗಳು,
ಊಹೆಗೂ ನಿಲುಕದ ಮನಸುಗಳು……

18 ರ ಕನಸುಗಳು,
30 ರ ಆಸೆಗಳು,
50 ರ ಭರವಸೆಗಳು,
70 ರ ನೋವುಗಳು,
ಸಾಮಾಜಿಕ ಜಾಲತಾಣಗಳ ಅಭಿಪ್ರಾಯಗಳು,….

ಯೇಸುವನ್ನೇ ಶಿಲುಬೆಗೇರಿಸಿದರು,
ಬಸವನನ್ನೇ ಕೊಂದರು,
ಅಬ್ರಹಾಂ ಲಿಂಕನ್ನನ್ನನ್ನೇ ಇಲ್ಲವಾಗಿಸಿದರು,
ಪೈಗಂಬರನನ್ನೇ ಓಡಿಸಿದರು,
ಗಾಂಧಿಗೇ ಗುಂಡಿಕ್ಕಿದರು,…….

ನಮ್ಮ ತನವೂ ಇರಬೇಕು,
ಹೊಂದಾಣಿಕೆಯೂ ಆಗಬೇಕು,
ಸಹಕಾರವೂ ಸಿಗಬೇಕು…..
ವೈವಿಧ್ಯತೆಯೂ ಬೆರೆಯಬೇಕು,
ಅತಿರೇಕಗಳ ನಡುವೆ ಸಮನ್ವಯ.. ‌…

ಈ ಎಲ್ಲದರ ನಡುವೆ ‌ವಾಸ್ತವದ ಬದುಕು,
ವ್ಯಾವಹಾರಿಕ ಬದುಕು, ನೆಮ್ಮದಿಯ ಜೀವನದ ಹುಡುಕಾಟ…….

ವಯಸ್ಸಿನ ಅಂತರ,
ಹಣಕಾಸಿನ ವ್ಯತ್ಯಾಸ,
ಜಾತಿಯ ಕಂದರ,
ವಿದ್ಯೆಯ ಭಿನ್ನತೆ,
ಅಧಿಕಾರದ ಅಸಮಾನತೆ,

ಬದುಕನ್ನು ಬಯಸುವವರಿಗೆ,
ಹೆದರಿಕೆ, ನಾಚಿಕೆ, ಅವಮಾನ,
ಆಸೆ, ಸಾವನ್ನು ಸ್ವಾಗತಿಸುವವರಿಗೆ…….

ಹೀಗೆ ಬದುಕೊಂದು ಊಹೆಗೆ ನಿಲುಕದ ಅನಂತದೆಡೆಗೆ ಪಯಣ…….

ಅದರಲ್ಲಿ,

ಬರುವವರಿಗೆ ಸ್ವಾಗತ,
ಹೋಗುವವರಿಗೆ ವಂದನೆಗಳು,…..

ಮೆಚ್ಚುವವರಿಗೆ ಧನ್ಯವಾದಗಳು,
ಟೀಕಿಸುವವರಿಗೆ ನಮಸ್ಕಾರಗಳು,….

ಅಭಿಮಾನಿಸುವವರಿಗೆ ಕೃತಜ್ಞತೆಗಳು,
ಅಸೂಯೆಪಡುವವರಿಗೆ ಸಹಾನುಭೂತಿಗಳು,…..

ಪ್ರೀತಿಸುವವರಿಗೆ ನಗು,
ದ್ವೇಷಿಸುವವರಿಗೆ ನಿರ್ಲಕ್ಷ್ಯ,…..

ಸಹಾಯ ಮಾಡುವವರಿಗೆ ಸಲಾಂ,
ತೊಂದರೆ ಕೊಡುವವರಿಗೆ ಗುಡ್ ಬೈ,…..

ಆತ್ಮೀಯರಿಗೊಂದಷ್ಟು ಅಪ್ಪುಗೆ,
ಪರಿಚಿತರಿಗೊಂದಷ್ಟು ಸಲುಗೆ,…..

ಪ್ರೋತ್ಸಾಹಿಸುವವರಿಗೆ ನಮನಗಳು,
ಕಾಲೆಳೆಯುವವರಿಗೆ ತಿರಸ್ಕಾರಗಳು,….

ಜೊತೆಯಾಗುವವರಿಗೆ
ಯಶಸ್ಸಾಗಲಿ,
ದೂರಾವಾಗುವವರಿಗೆ ಒಳ್ಳೆಯದಾಗಲಿ,……

ಗೆದ್ದವರಿಗೆ ಅಭಿನಂದನೆಗಳು,
ಸೋತವರಿಗೆ ಹಿತ ನುಡಿಗಳು,…..

ಹೀಗೆ, ಎಲ್ಲಾ ಭಾವನೆಗಳೊಂದಿಗೆ, ಸಾಗುತ್ತಲೇ ಇದೆ ಬದುಕು,….

ನನ್ನದು, ನಿಮ್ಮದು, ಎಲ್ಲರದೂ,

ಬದುಕಿನೊಂದಿಗೆ ಸರಸವಾಡುತ್ತಾ,
ವಿಧಿಯೊಂದಿಗೆ ಚೆಲ್ಲಾಟವಾಡುತ್ತಾ,
ಬರುವುದನ್ನು ಸ್ವೀಕರಿಸುತ್ತಾ,
ಹೋಗುವುದನ್ನು ಬೀಳ್ಕೊಡುತ್ತಾ,
ನಗುತ್ತಾ, ಅಳುತ್ತಾ,….‌…‌‌‌

ಸಾಗುತ್ತಲೇ ಇರಲಿ ಜೀವನ…..

ಕೊನೆಯೇ ಇಲ್ಲವೇನೋ ಎಂಬ ಭಾವದೊಂದಿಗೆ..‌‌‌…………..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

10 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

14 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

14 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

18 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago