Categories: ಲೇಖನ

ಬದುಕೊಂದು ಯುದ್ದ ಭೂಮಿ…ಗೆಲ್ಲಬಹುದು – ಸೋಲಬಹುದು – ಅನಿರೀಕ್ಷಿತವಾಗಿ ಸಾಯಬಹುದು………..

ಯುದ್ದ ಮತ್ತು ಜೀವನ……

ಬದುಕೊಂದು ಯುದ್ದ ಭೂಮಿ……………

ಗೆಲ್ಲಬಹುದು – ಸೋಲಬಹುದು – ಅನಿರೀಕ್ಷಿತವಾಗಿ ಸಾಯಬಹುದು………..

ರಣರಂಗದ ಎಲ್ಲಾ ಸಾಧ್ಯತೆಗಳು ಜೀವನದಲ್ಲೂ ಸಂಭವಿಸುವ ಅವಕಾಶ ಇದ್ದೇ ಇದೆ………‌

ಯುದ್ದದಲ್ಲಿ ಕತ್ತಿ, ಬಂದೂಕು,
ಬಾಂಬು, ಗುಂಡುಗಳು ಯಾವ ಸಮಯದಲ್ಲಾದರೂ ನಮ್ಮನ್ನು ಗಾಯ ಮಾಡಬಹುದು ಅಥವಾ ಸಾಯಿಸಬಹುದು ಅಥವಾ ನಮ್ಮನ್ನು ಮುಟ್ಟದೇ ಹೋಗಬಹುದು…..

ಯುದ್ದದಂತೆ ಬದುಕಿನಲ್ಲಿ ನಮ್ಮೊಂದಿಗೆ ಹಲವಾರು ಜನರಿರುತ್ತಾರೆ. ಕೆಲವೊಮ್ಮೆ ಮುಂದೆ, ಮತ್ತೆ ಕೆಲವರು ಹಿಂದೆ, ಹಲವರು ಆಗಾಗ ಜೊತೆಯಾಗುತ್ತಾರೆ ಅಥವಾ ಸಂದರ್ಭ ಸನ್ನಿವೇಶದ ಒತ್ತಡದಿಂದ ಎಲ್ಲರೂ ಬೇರೆಯಾಗಿ ನಾವು ಒಂಟಿಯೂ ಆಗಬಹುದು……..‌

ಯುದ್ದದಲ್ಲಿರುವ ಯಶಸ್ಸುಗಳು, ಸಂಭ್ರಮಗಳು, ತ್ಯಾಗಗಳು, ತೃಪ್ತಿಗಳು ಬದುಕಿನಲ್ಲೂ ಸಂಭವಿಸುತ್ತದೆ. ಹಾಗೆಯೇ ಸೋಲು, ಹತಾಶೆ, ಒಂಟಿತನ, ಕುತಂತ್ರಗಳೂ ಸಹ ಯುದ್ಧ ಮತ್ತು ಬದುಕಿನ ಭಾಗಗಳೇ ಆಗಿದೆ…….

ಯುದ್ಧದ ಗೆಲುವು ನಮ್ಮನ್ನು ವಿಜೃಂಬಿಸಿದರೆ, ಯುದ್ಧದ ಸೋಲು ನರಕಯಾತನೆಯೂ ಆಗಿ ಬದುಕು ಅಲ್ಲಿಗೆ ಮುಕ್ತಾಯವೂ ಆಗಬಹುದು. ಹಾಗೆ ಜೀವನದ ಯಶಸ್ಸು ನಮ್ಮನ್ನು ಅತ್ಯುತ್ತಮ ಸ್ಥಾನಕ್ಕೆ ಕೊಂಡೊಯ್ದುರೆ, ಸೋಲು ಸಾವಾಗಿಯೂ ಪರಿವರ್ತನೆಯಾಗಬಹುದು….

ಯುದ್ಧದ ತೀವ್ರ ಭಾವನೆಗಳು, ಆತಂಕಗಳು, ಆಯಾಯ ಸಂದರ್ಭದ ನಮ್ಮ ನಿರ್ಧಾರಗಳು ನಮ್ಮ ಮುಂದಿನ ಗತಿಯನ್ನು ನಿರ್ಧರಿಸುವಂತೆ ಜೀವನದಲ್ಲಿಯೂ ಕಠಿಣ ಸಂದರ್ಭದಲ್ಲಿ ನಾವು ತೆಗೆದುಕೊಳ್ಳುವ ತೀರ್ಮಾನಗಳು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತದೆ………..

ರಣಭೂಮಿಯ ಪ್ರತಿ ಹೆಜ್ಜೆಯನ್ನು ಅತ್ಯಂತ ಜಾಗರೂಕತೆಯಿಂದ, ವಿವೇಚನೆಯಿಂದ, ಸೂಕ್ಷ್ಮ ಮುಂದಾಲೋಚನೆಯಿಂದ, ನಿರೀಕ್ಷಿತ ಪರಿಣಾಮ ಊಹಿಸಿಯೇ ಇಡಬೇಕು ಮತ್ತು ಅದರ ಫಲಿತಾಂಶವನ್ನು ಎದುರಿಸಬೇಕು. ಹಾಗೆಯೇ ಬದುಕಿನಲ್ಲಿಯೂ ಬಾಲ್ಯದಿಂದ ಮುಪ್ಪಿನವರಗೆ ಆಯಾಯ ಕಾಲಘಟ್ಟದಲ್ಲಿ ನಾವು ಯೋಚಿಸಿ ನಿರ್ಧರಿಸಬೇಕು ಮತ್ತು ಫಲಿತಾಂಶಗಳನ್ನು ನಮ್ಮೆಲ್ಲ ಶ್ರಮದ ನಂತರವೂ ಬಂದಂತೆ ಸ್ವೀಕರಿಸಬೇಕು. ಕೊರಗುತ್ತಾ ಕುಳಿತರೆ ಸಾವು ಖಚಿತ………..

ಯುದ್ದದಲ್ಲಿ ಕೆಲವೊಮ್ಮೆ ಸೋಲಿನ ಅಂಚಿಗೆ ಬರಬಹುದು. ನಮ್ಮ ಯೋಜನೆಗಳು ತಲೆಕೆಳಗಾಗಬಹುದು, ನಮ್ಮವರಿಂದ ನಿರೀಕ್ಷಿತ ಬೆಂಬಲ ಸಿಗದಿರಬಹುದು. ಆಗಲೂ ನಿರಾಶರಾಗದೆ ಕೊನೆಯವರೆಗೂ ಹೋರಾಡಬೇಕು. ಬದುಕಿನಲ್ಲೂ ಕೂಡ ಇದು ಅಷ್ಟೇ ಸಹಜ……..

ನಮ್ಮ ಕಣ್ಣ ಮುಂದೆಯೇ ಅನೇಕ ಸಾವುನೋವುಗಳು ಸಂಭವಿಸಿದರೂ ನಾವು ಆ ಕ್ಷಣದ ನಮ್ಮ ಕರ್ತವ್ಯ ಮುಗಿಸಿ ಮನ್ನಡೆಯವುದು ಯುದ್ಧದ ಅನಿವಾರ್ಯತೆ. ಹಾಗೆಯೇ ಬದುಕಿನಲ್ಲಿಯೂ ಇದರಲ್ಲಿ ಅಂತಹ ವ್ಯತ್ಯಾಸವಿಲ್ಲ…………….

ಅದೃಷ್ಟ ಮತ್ತು ದುರಾದೃಷ್ಟವೆಂಬ ಖಚಿತವಲ್ಲದ, ವಿವರಿಸಲಾಗದ, ಪರಿಣಾಮದವರೆಗೂ ತಿಳಿಯದ ಒಂದು ಆಟ ಮಾತ್ರ ಯುದ್ಧ ಮತ್ತು ಬದುಕಿನಲ್ಲಿ ಇದ್ದೇ ಇರುತ್ತದೆ……..

ನಿಮ್ಮೆಲ್ಲಾ ಶ್ರಮ, ಒಳ್ಳೆಯತನ, ಚಾಕಚಕ್ಯತೆ ಎಲ್ಲವೂ ಇದ್ದು ವಿವರಿಸಲಾಗದ ಕಾರಣಕ್ಕೆ ನಿಮಗೆ ಯುದ್ದದಲ್ಲಿ ಸೋಲಾಗಬಹುದು. ಹಾಗೆಯೇ ಜೀವನದಲ್ಲಿಯೂ ಅನಿರೀಕ್ಷಿತವಾಗಿ ಯಶಸ್ಸು ಸಿಗಬಹುದು ಅಥವಾ ಸೋಲೂ ಆಗಬಹುದು……………

ದುಷ್ಟರು ಜನಪ್ರಿಯರಾಗಬಹುದು, ಉಡಾಫೆಯವರು ಅಧಿಕಾರಕ್ಕೇರಬಹುದು ಮತ್ತು ಪ್ರಾಮಾಣಿಕರು ದಕ್ಷರು ಹೇಳ ಹೆಸರಿಲ್ಲದಂತಾಗಬಹುದು…….

ಈ ಎಲ್ಲಾ ಸಾಧ್ಯತೆಗಳ ವಿಸ್ಮಯ ಪ್ರಪಂಚ ಯುದ್ಧ ಮತ್ತು ಬದುಕು………

ಹಾಗಾದರೆ ಇದರ ಪಾಠವೇನು ?
ಏನೂ ಇಲ್ಲ…..
ಸೃಷ್ಟಿಯ ಸಹಜತೆಯನ್ನು ಒಪ್ಪಿಕೊಂಡು ನಮ್ಮ ಮೆದುಳಿನ ಗ್ರಹಿಕೆಯ ಪ್ರತಿಕ್ರಿಯೆಗಳನ್ನು ಅನುಸರಿಸುತ್ತಾ ಜೀವವಿರುವವರೆಗೂ ನಮ್ಮ ನಿಯಂತ್ರಣವಿಲ್ಲದ ವಿಷಯಗಳಲ್ಲಿ ಅದನ್ನು ಬಂದಂತೆ ಸ್ವೀಕರಿಸಿ, ನಿಯಂತ್ರಣ ಇರುವ ಕಡೆ ಮತ್ತದೇ ಮೆದುಳ ಅರಿವಿನಿಂದ ಅದನ್ನು ನಮಗೆ ಸಾಧ್ಯವಿರುವಂತೆ ಅನುಕೂಲಕರವಾಗಿ ಪರಿವರ್ತಿಸಿ ಬದುಕುವುದು.

ಮಾಡುವುದನ್ನು ಯೋಚಿಸಿ ಮಾಡಿ. ಪರಿಣಾಮ ಸ್ವೀಕರಿಸಿ.
ಪಶ್ಚಾತ್ತಾಪಕ್ಕೆ ಹೆಚ್ಚಿನ ಅವಕಾಶ ಕೊಡಬೇಡಿ…….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಬೃಹತ್ ಪಾದಯಾತ್ರೆ

ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಇಂದು ಚಿಕ್ಕಬಳ್ಳಾಪುರ ನಗರದಲ್ಲಿ ಬೃಹತ್ ಪಾದಯಾತ್ರೆ ನಡೆಸಲಾಯಿತು. ಬಿಜೆಪಿ ಯುವ ಮುಖಂಡ ಹಾಗೂ ಹರಿಕೃಷ್ಣ…

8 hours ago

ತಹಶೀಲ್ದಾರ್‌ ಕಚೇರಿಗೆ ಶಾಸಕ ಕೊತ್ತೂರು ಮಂಜುನಾಥ್‌ ದಿಢೀರ್‌ ಭೇಟಿ: ಅಧಿಕಾರಿಗಳಿಗೆ ತರಾಟೆ, ತ್ವರಿತವಾಗಿ ಕಡತ ವಿಲೇವಾರಿಗೆ ಸೂಚನೆ

ಕೋಲಾರ: ಶಾಸಕ ಕೊತ್ತೂರು ಮಂಜುನಾಥ್‌ ಮಂಗಳವಾರ ಬೆಳಿಗ್ಗೆ ತಹಶೀಲ್ದಾರ್‌ ಕಚೇರಿಗೆ ದಿಢೀರನೇ ಭೇಟಿ ನೀಡಿ ಕಡತ ಪರಿಶೀಲಿಸಿ ಅಧಿಕಾರಿಗಳು ಹಾಗೂ…

11 hours ago

ಅಂತರ್ಜಲ ಪ್ರಮಾಣ ವರ್ಷದಿಂದ ವರ್ಷಕ್ಕೆ ಕುಸಿತ: ಒಂದು ತಿಂಗಳಲ್ಲಿ 1.15 ಮೀ. ನೀರಿನ ಮಟ್ಟ ಕುಸಿತ: ಬೋರ್‌ವೆಲ್‌ಗಳಲ್ಲಿ ಬರಿದಾದ ನೀರು: ರೈತ ಕಂಗಾಲು

ದೊಡ್ಡಬಳ್ಳಾಪುರದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೆ ಹೆಚ್ಚುತ್ತಿದೆ‌. ಈ ಹಿನ್ನೆಲೆ ತೀವ್ರ ಜಲಕ್ಷಾಮದ ಕಾರ್ಮೋಡ ಆವರಿಸಿದಂತಿದೆ‌. ವರ್ಷದಿಂದ ವರ್ಷಕ್ಕೆ ಏರುತ್ತಿರುವ…

13 hours ago

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

19 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

20 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

21 hours ago