ಬದ್ಧತೆಯಿಂದ ಕಾರ್ಯ ನಿರ್ವಹಿಸಿದರೆ ಯಶಸ್ಸು ಸಾಧ್ಯ-ಸ್ತ್ರೀ ರೋಗ ತಜ್ಞೆ ಡಾ.ಶಾಲಿನಿ

ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳುವುದರೊಂದಿಗೆ ಬದ್ಧತೆಯಿಂದ ಕಾರ್ಯ ನಿರ್ವಹಿಸಿದಾಗ ಮಾತ್ರ ನಾವು ಬದುಕಲ್ಲಿ ಯಶಸ್ಸು ಕಾಣಲು ಸಾಧ್ಯವಾಗಲಿದ್ದು, ಮಹಿಳೆಯರು ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾದಾಗ ಮಾತ್ರ ಸಾಧನೆ ಮಾಡಲು ಸಾಧ್ಯವಿದೆ ಎಂದು ಸ್ತ್ರೀ ರೋಗ ತಜ್ಞೆ ಡಾ.ಶಾಲಿನಿ ಹೇಳಿದರು.

ನಗರದ ಅಪೇರಲ್ ಪಾರ್ಕ್ ಸಮೀಪದಲ್ಲಿರುವ ಶ್ರೀ ರಾಮ ಸಮೂಹ ಶಿಕ್ಷಣ ಸಂಸ್ಥೆಯ ಸೂರ್ಯ ಪದವಿ ಪೂರ್ವ ಕಾಲೇಜು, ಶ್ರೀ ರಾಮ ನರ್ಸಿಂಗ್ ಕಾಲೇಜು ಸಹಯೋಗದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಹಿಳಾ ಸಬಲೀಕರಣ, ಮಹಿಳಾ ಸಶಕ್ತೀಕರಣದ ಧ್ಯೇಯ ಹಾಗೂ ಲಿಂಗ ಅಸಮಾನತೆಯ ವಿರುದ್ದ ದನಿ ಎತ್ತುವ ನಿಟ್ಟಿನಲ್ಲಿ ಮಹಿಳಾ ದಿನಾಚರಣೆ ಪ್ರಮುಖ ಪಾತ್ರ ವಹಿಸಲಿದೆ. ಇಂದು ಎಲ್ಲಾ ಕ್ಷೇತ್ರಗಳಲ್ಲಿಯೂ ಮಹಿಳೆಯರು ಬರುತ್ತಿರುವುದು ಸಂತಸದ ಸಂಗತಿಯಾಗಿದೆ. ಇದಕ್ಕೆ ಕುಟುಂಬ ಹಾಗೂ ಸಮುದಾಯದ ಸಹಕಾರ ಬೇಕು. ಮಹಿಳೆ ತನ್ನಲ್ಲಿರುವ ಅಂತರ್ ಶಕ್ತಿಯನ್ನು ಹೊರ ತಂದಾಗ ಮಾತ್ರ ಸಬಲರಾಗಲು ಸಾಧ್ಯ. ಪ್ರಾಪ್ತ ವಯಸ್ಸಿಗೆ ಬಂದು ಯುವತಿಯರು ಸ್ವತಂತ್ರ್ಯ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮಥ್ಯ್ಯ ಪಡೆದಿರುತ್ತಾರೆ. ಆದರೆ ಇದಕ್ಕೆ ತಕ್ಕೆ ಅರ್ಹತೆ ಪಡೆದುಕೊಳ್ಳಬೇಕು. ಜಂಕ್ ಫುಡ್‍ಗಳ ಆಹಾರ ಸೇವನೆ ನಮ್ಮ ಆರೋಗ್ಯಕ್ಕೆ ಹಾನಿಕರವಾಗಿದ್ದು, ಆರೋಗ್ಯಕ್ಕೆ ಮಹಿಳೆಯರು ಹೆಚ್ಚಿನ ಒತ್ತು ನೀಡಬೇಕಿದೆ ಎಂದರು.

ಪ್ರಗತಿಪರ ರೈತ ಮಹಿಳೆ ಬಿ.ಮಂಜುಳ ಮಾತನಾಡಿ, ಬದುಕಿನಲ್ಲಿ ಕಷ್ಟಗಳು ಬರುವುದು ಸಹಜ. ಆ ಅದಕ್ಕೆ ಧೃತಿಗೆಡಬಾರದು. ದಶಕಗಳ ಹಿಂದೆ ಗ್ರಾಮೀಣ ಹೆಣ್ಣು ಮಕ್ಕಳಿಗೆ ಶಿಕ್ಷಣ ಎನ್ನವುದು ಮರೀಚಿಕೆಯಾಗಿತ್ತು. ಆದರೆ ಈಗ ಕಾಲ ಬದಲಾಗಿದೆ ಎಂದು ತಾವು ಎಸ್.ಎಸ್.ಎಲ್.ಸಿ ನಂತರದ ದಿನಗಳಲ್ಲಿ ಕಷ್ಟಪಟ್ಟು ಕೃಷಿ ಮಾಡಿದೆ.150 ರೂ ಸಂಬಳ ಪಡೆದು ಸೇವಾ ಸಂಸ್ಥೆಯಲ್ಲಿ ಕೆಲಸ ಮಾಡಿದೆ. ಪ್ರಗತಿಪರ ಕೃಷಿ ಮಹಿಳೆ ಸೇರಿದಂತೆ ಹಲವಾರು ಪ್ರಶಸ್ತಿಗಳು ಬಂದಿವೆ. ಇದಕ್ಕೆ ಆತ್ಮ ವಿಶ್ವಾಸವೇ ನನಗೆ ಆಸರೆಯಾಯಿತು. ಹೆಣ್ಣು ಮಕ್ಕಳು ಶಿಕ್ಷಣಕ್ಕೆ ಆದ್ಯತೆ ನೀಡಿದರೆ, ಬದುಕಿನಲ್ಲಿ ಬರುವ ಸಂಕಷ್ಟಗಳನ್ನು ಎದುರಿಸಲು ಸಾಧ್ಯ ಎಂದರು.

ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್ ಮಾತನಾಡಿ, ರಾಜಕೀಯ ಕ್ಷೇತ್ರ ನನಗೆ ಹೊಸತಾದರೂ ಇಲ್ಲಿ ಬಂದು ಒಂದಿಷ್ಟು ಸೇವೆ ಮಾಡಿದ್ದೇನೆ. ಮಹಿಳೆಯರು ಯಾವುದೇ ಕಾರ್ಯ ನಿರ್ವಹಿಸಬಲ್ಲರು ಎನ್ನುವುದನ್ನು ಸಮಾಜಕ್ಕೆ ತೋರಿಸಬೇಕಿದೆ ಎಂದರು.

ಶ್ರೀ ರಾಮ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಡಾ.ಮಾಲಾ ವಿಜಯಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಹಿಳೆಯರಿಗಾಗುತ್ತಿದ್ದ ತಾರತಮ್ಯ, ಶೋಷಣೆಗಳ ವಿರುದ್ದ ದನಿ ಎತ್ತಿದ ಪ್ರತೀಕವಾಗಿ ಮಹಿಳಾ ದಿನಾಚರಣೆ ಆಚರಿಸಲಾಗುತ್ತಿದ್ದು, ಇದರ ಹಿನ್ನೆಲೆ ಅರಿಯಬೇಕಿದೆ. ಹೆಣ್ಣು ಮಕ್ಕಳಿಗೆ ಸಾಮಾಜಿಕ ಜವಾಬ್ದಾರಿಗಳಿರುತ್ತವೆ. ಸಾಮಾಜಿಕ ಜಲತಾಣಗಳಲ್ಲಿ ಪೋಸ್ಟ್‌ ಗಳನ್ನು ಹಾಕುವಾಗ ಎಚ್ಚರ ವಹಿಸಬೇಕು. ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್, ಸ್ತ್ರೀ ರೋಗ ತಜ್ಞೆ ಡಾ.ಶಾಲಿನಿ, ನಗರಸಭೆ ಮಾಜಿ ಅಧ್ಯಕ್ಷೆ ಶಾಂತಮ್ಮ, ವಿದುಷಿ ಶಾರದಾ ಶ್ರೀಧರ್,ಪ್ರಗತಿಪರ ರೈತ ಮಹಿಳೆ ಬಿ.ಮಂಜುಳ, ಮುಕ್ತಿಧಾಮದ ನಿರ್ವಾಹಕಿ ಲಕ್ಷ್ಮಮ್ಮ, ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ಪಾಲಕರಾದ ರಾಧಾಮಣಿ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಶ್ರೀ ರಾಮ ಆಸ್ಪತ್ರೆಯ ನಿರ್ದೇಶಕ ಡಾ.ಎಚ್.ಜಿ.ವಿಜಯ ಕುಮಾರ್, ಸುಜ್ಞಾನ ದೀಪಿಕಾ ಜಾಗೃತಿ ಸಂಚಾಲಕರಾದ ಎಂ.ಎಸ್.ಮಂಜುನಾಥ್, ಎಚ್‍ಇಎಚ್‍ಎಸ್ ಪ್ಯಾರಾಮೆಡಿಕಲ್ ಕಾಲೇಜು ಪ್ರಾಂಶುಪಾಲ ರಾಮಮೂರ್ತಿ, ಸೂರ್ಯ ಪ.ಪೂ.ಕಾಲೇಜಿನ ಪ್ರಾಂಶುಪಾಲ ಎಂ.ಸಿ.ಮಂಜುನಾಥ್ ಮೊದಲಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

14 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

21 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

2 days ago