ಬದ್ಧತೆಯಿಂದ ಕಾರ್ಯ ನಿರ್ವಹಿಸಿದರೆ ಯಶಸ್ಸು ಸಾಧ್ಯ-ಸ್ತ್ರೀ ರೋಗ ತಜ್ಞೆ ಡಾ.ಶಾಲಿನಿ

ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳುವುದರೊಂದಿಗೆ ಬದ್ಧತೆಯಿಂದ ಕಾರ್ಯ ನಿರ್ವಹಿಸಿದಾಗ ಮಾತ್ರ ನಾವು ಬದುಕಲ್ಲಿ ಯಶಸ್ಸು ಕಾಣಲು ಸಾಧ್ಯವಾಗಲಿದ್ದು, ಮಹಿಳೆಯರು ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾದಾಗ ಮಾತ್ರ ಸಾಧನೆ ಮಾಡಲು ಸಾಧ್ಯವಿದೆ ಎಂದು ಸ್ತ್ರೀ ರೋಗ ತಜ್ಞೆ ಡಾ.ಶಾಲಿನಿ ಹೇಳಿದರು.

ನಗರದ ಅಪೇರಲ್ ಪಾರ್ಕ್ ಸಮೀಪದಲ್ಲಿರುವ ಶ್ರೀ ರಾಮ ಸಮೂಹ ಶಿಕ್ಷಣ ಸಂಸ್ಥೆಯ ಸೂರ್ಯ ಪದವಿ ಪೂರ್ವ ಕಾಲೇಜು, ಶ್ರೀ ರಾಮ ನರ್ಸಿಂಗ್ ಕಾಲೇಜು ಸಹಯೋಗದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಹಿಳಾ ಸಬಲೀಕರಣ, ಮಹಿಳಾ ಸಶಕ್ತೀಕರಣದ ಧ್ಯೇಯ ಹಾಗೂ ಲಿಂಗ ಅಸಮಾನತೆಯ ವಿರುದ್ದ ದನಿ ಎತ್ತುವ ನಿಟ್ಟಿನಲ್ಲಿ ಮಹಿಳಾ ದಿನಾಚರಣೆ ಪ್ರಮುಖ ಪಾತ್ರ ವಹಿಸಲಿದೆ. ಇಂದು ಎಲ್ಲಾ ಕ್ಷೇತ್ರಗಳಲ್ಲಿಯೂ ಮಹಿಳೆಯರು ಬರುತ್ತಿರುವುದು ಸಂತಸದ ಸಂಗತಿಯಾಗಿದೆ. ಇದಕ್ಕೆ ಕುಟುಂಬ ಹಾಗೂ ಸಮುದಾಯದ ಸಹಕಾರ ಬೇಕು. ಮಹಿಳೆ ತನ್ನಲ್ಲಿರುವ ಅಂತರ್ ಶಕ್ತಿಯನ್ನು ಹೊರ ತಂದಾಗ ಮಾತ್ರ ಸಬಲರಾಗಲು ಸಾಧ್ಯ. ಪ್ರಾಪ್ತ ವಯಸ್ಸಿಗೆ ಬಂದು ಯುವತಿಯರು ಸ್ವತಂತ್ರ್ಯ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮಥ್ಯ್ಯ ಪಡೆದಿರುತ್ತಾರೆ. ಆದರೆ ಇದಕ್ಕೆ ತಕ್ಕೆ ಅರ್ಹತೆ ಪಡೆದುಕೊಳ್ಳಬೇಕು. ಜಂಕ್ ಫುಡ್‍ಗಳ ಆಹಾರ ಸೇವನೆ ನಮ್ಮ ಆರೋಗ್ಯಕ್ಕೆ ಹಾನಿಕರವಾಗಿದ್ದು, ಆರೋಗ್ಯಕ್ಕೆ ಮಹಿಳೆಯರು ಹೆಚ್ಚಿನ ಒತ್ತು ನೀಡಬೇಕಿದೆ ಎಂದರು.

ಪ್ರಗತಿಪರ ರೈತ ಮಹಿಳೆ ಬಿ.ಮಂಜುಳ ಮಾತನಾಡಿ, ಬದುಕಿನಲ್ಲಿ ಕಷ್ಟಗಳು ಬರುವುದು ಸಹಜ. ಆ ಅದಕ್ಕೆ ಧೃತಿಗೆಡಬಾರದು. ದಶಕಗಳ ಹಿಂದೆ ಗ್ರಾಮೀಣ ಹೆಣ್ಣು ಮಕ್ಕಳಿಗೆ ಶಿಕ್ಷಣ ಎನ್ನವುದು ಮರೀಚಿಕೆಯಾಗಿತ್ತು. ಆದರೆ ಈಗ ಕಾಲ ಬದಲಾಗಿದೆ ಎಂದು ತಾವು ಎಸ್.ಎಸ್.ಎಲ್.ಸಿ ನಂತರದ ದಿನಗಳಲ್ಲಿ ಕಷ್ಟಪಟ್ಟು ಕೃಷಿ ಮಾಡಿದೆ.150 ರೂ ಸಂಬಳ ಪಡೆದು ಸೇವಾ ಸಂಸ್ಥೆಯಲ್ಲಿ ಕೆಲಸ ಮಾಡಿದೆ. ಪ್ರಗತಿಪರ ಕೃಷಿ ಮಹಿಳೆ ಸೇರಿದಂತೆ ಹಲವಾರು ಪ್ರಶಸ್ತಿಗಳು ಬಂದಿವೆ. ಇದಕ್ಕೆ ಆತ್ಮ ವಿಶ್ವಾಸವೇ ನನಗೆ ಆಸರೆಯಾಯಿತು. ಹೆಣ್ಣು ಮಕ್ಕಳು ಶಿಕ್ಷಣಕ್ಕೆ ಆದ್ಯತೆ ನೀಡಿದರೆ, ಬದುಕಿನಲ್ಲಿ ಬರುವ ಸಂಕಷ್ಟಗಳನ್ನು ಎದುರಿಸಲು ಸಾಧ್ಯ ಎಂದರು.

ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್ ಮಾತನಾಡಿ, ರಾಜಕೀಯ ಕ್ಷೇತ್ರ ನನಗೆ ಹೊಸತಾದರೂ ಇಲ್ಲಿ ಬಂದು ಒಂದಿಷ್ಟು ಸೇವೆ ಮಾಡಿದ್ದೇನೆ. ಮಹಿಳೆಯರು ಯಾವುದೇ ಕಾರ್ಯ ನಿರ್ವಹಿಸಬಲ್ಲರು ಎನ್ನುವುದನ್ನು ಸಮಾಜಕ್ಕೆ ತೋರಿಸಬೇಕಿದೆ ಎಂದರು.

ಶ್ರೀ ರಾಮ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಡಾ.ಮಾಲಾ ವಿಜಯಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಹಿಳೆಯರಿಗಾಗುತ್ತಿದ್ದ ತಾರತಮ್ಯ, ಶೋಷಣೆಗಳ ವಿರುದ್ದ ದನಿ ಎತ್ತಿದ ಪ್ರತೀಕವಾಗಿ ಮಹಿಳಾ ದಿನಾಚರಣೆ ಆಚರಿಸಲಾಗುತ್ತಿದ್ದು, ಇದರ ಹಿನ್ನೆಲೆ ಅರಿಯಬೇಕಿದೆ. ಹೆಣ್ಣು ಮಕ್ಕಳಿಗೆ ಸಾಮಾಜಿಕ ಜವಾಬ್ದಾರಿಗಳಿರುತ್ತವೆ. ಸಾಮಾಜಿಕ ಜಲತಾಣಗಳಲ್ಲಿ ಪೋಸ್ಟ್‌ ಗಳನ್ನು ಹಾಕುವಾಗ ಎಚ್ಚರ ವಹಿಸಬೇಕು. ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್, ಸ್ತ್ರೀ ರೋಗ ತಜ್ಞೆ ಡಾ.ಶಾಲಿನಿ, ನಗರಸಭೆ ಮಾಜಿ ಅಧ್ಯಕ್ಷೆ ಶಾಂತಮ್ಮ, ವಿದುಷಿ ಶಾರದಾ ಶ್ರೀಧರ್,ಪ್ರಗತಿಪರ ರೈತ ಮಹಿಳೆ ಬಿ.ಮಂಜುಳ, ಮುಕ್ತಿಧಾಮದ ನಿರ್ವಾಹಕಿ ಲಕ್ಷ್ಮಮ್ಮ, ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ಪಾಲಕರಾದ ರಾಧಾಮಣಿ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಶ್ರೀ ರಾಮ ಆಸ್ಪತ್ರೆಯ ನಿರ್ದೇಶಕ ಡಾ.ಎಚ್.ಜಿ.ವಿಜಯ ಕುಮಾರ್, ಸುಜ್ಞಾನ ದೀಪಿಕಾ ಜಾಗೃತಿ ಸಂಚಾಲಕರಾದ ಎಂ.ಎಸ್.ಮಂಜುನಾಥ್, ಎಚ್‍ಇಎಚ್‍ಎಸ್ ಪ್ಯಾರಾಮೆಡಿಕಲ್ ಕಾಲೇಜು ಪ್ರಾಂಶುಪಾಲ ರಾಮಮೂರ್ತಿ, ಸೂರ್ಯ ಪ.ಪೂ.ಕಾಲೇಜಿನ ಪ್ರಾಂಶುಪಾಲ ಎಂ.ಸಿ.ಮಂಜುನಾಥ್ ಮೊದಲಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

30 minutes ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

5 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

1 day ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

1 day ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

1 day ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

2 days ago