ಬದ್ಧತೆಯಿಂದ ಕಾರ್ಯ ನಿರ್ವಹಿಸಿದರೆ ಯಶಸ್ಸು ಸಾಧ್ಯ-ಸ್ತ್ರೀ ರೋಗ ತಜ್ಞೆ ಡಾ.ಶಾಲಿನಿ

ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳುವುದರೊಂದಿಗೆ ಬದ್ಧತೆಯಿಂದ ಕಾರ್ಯ ನಿರ್ವಹಿಸಿದಾಗ ಮಾತ್ರ ನಾವು ಬದುಕಲ್ಲಿ ಯಶಸ್ಸು ಕಾಣಲು ಸಾಧ್ಯವಾಗಲಿದ್ದು, ಮಹಿಳೆಯರು ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾದಾಗ ಮಾತ್ರ ಸಾಧನೆ ಮಾಡಲು ಸಾಧ್ಯವಿದೆ ಎಂದು ಸ್ತ್ರೀ ರೋಗ ತಜ್ಞೆ ಡಾ.ಶಾಲಿನಿ ಹೇಳಿದರು.

ನಗರದ ಅಪೇರಲ್ ಪಾರ್ಕ್ ಸಮೀಪದಲ್ಲಿರುವ ಶ್ರೀ ರಾಮ ಸಮೂಹ ಶಿಕ್ಷಣ ಸಂಸ್ಥೆಯ ಸೂರ್ಯ ಪದವಿ ಪೂರ್ವ ಕಾಲೇಜು, ಶ್ರೀ ರಾಮ ನರ್ಸಿಂಗ್ ಕಾಲೇಜು ಸಹಯೋಗದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಹಿಳಾ ಸಬಲೀಕರಣ, ಮಹಿಳಾ ಸಶಕ್ತೀಕರಣದ ಧ್ಯೇಯ ಹಾಗೂ ಲಿಂಗ ಅಸಮಾನತೆಯ ವಿರುದ್ದ ದನಿ ಎತ್ತುವ ನಿಟ್ಟಿನಲ್ಲಿ ಮಹಿಳಾ ದಿನಾಚರಣೆ ಪ್ರಮುಖ ಪಾತ್ರ ವಹಿಸಲಿದೆ. ಇಂದು ಎಲ್ಲಾ ಕ್ಷೇತ್ರಗಳಲ್ಲಿಯೂ ಮಹಿಳೆಯರು ಬರುತ್ತಿರುವುದು ಸಂತಸದ ಸಂಗತಿಯಾಗಿದೆ. ಇದಕ್ಕೆ ಕುಟುಂಬ ಹಾಗೂ ಸಮುದಾಯದ ಸಹಕಾರ ಬೇಕು. ಮಹಿಳೆ ತನ್ನಲ್ಲಿರುವ ಅಂತರ್ ಶಕ್ತಿಯನ್ನು ಹೊರ ತಂದಾಗ ಮಾತ್ರ ಸಬಲರಾಗಲು ಸಾಧ್ಯ. ಪ್ರಾಪ್ತ ವಯಸ್ಸಿಗೆ ಬಂದು ಯುವತಿಯರು ಸ್ವತಂತ್ರ್ಯ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮಥ್ಯ್ಯ ಪಡೆದಿರುತ್ತಾರೆ. ಆದರೆ ಇದಕ್ಕೆ ತಕ್ಕೆ ಅರ್ಹತೆ ಪಡೆದುಕೊಳ್ಳಬೇಕು. ಜಂಕ್ ಫುಡ್‍ಗಳ ಆಹಾರ ಸೇವನೆ ನಮ್ಮ ಆರೋಗ್ಯಕ್ಕೆ ಹಾನಿಕರವಾಗಿದ್ದು, ಆರೋಗ್ಯಕ್ಕೆ ಮಹಿಳೆಯರು ಹೆಚ್ಚಿನ ಒತ್ತು ನೀಡಬೇಕಿದೆ ಎಂದರು.

ಪ್ರಗತಿಪರ ರೈತ ಮಹಿಳೆ ಬಿ.ಮಂಜುಳ ಮಾತನಾಡಿ, ಬದುಕಿನಲ್ಲಿ ಕಷ್ಟಗಳು ಬರುವುದು ಸಹಜ. ಆ ಅದಕ್ಕೆ ಧೃತಿಗೆಡಬಾರದು. ದಶಕಗಳ ಹಿಂದೆ ಗ್ರಾಮೀಣ ಹೆಣ್ಣು ಮಕ್ಕಳಿಗೆ ಶಿಕ್ಷಣ ಎನ್ನವುದು ಮರೀಚಿಕೆಯಾಗಿತ್ತು. ಆದರೆ ಈಗ ಕಾಲ ಬದಲಾಗಿದೆ ಎಂದು ತಾವು ಎಸ್.ಎಸ್.ಎಲ್.ಸಿ ನಂತರದ ದಿನಗಳಲ್ಲಿ ಕಷ್ಟಪಟ್ಟು ಕೃಷಿ ಮಾಡಿದೆ.150 ರೂ ಸಂಬಳ ಪಡೆದು ಸೇವಾ ಸಂಸ್ಥೆಯಲ್ಲಿ ಕೆಲಸ ಮಾಡಿದೆ. ಪ್ರಗತಿಪರ ಕೃಷಿ ಮಹಿಳೆ ಸೇರಿದಂತೆ ಹಲವಾರು ಪ್ರಶಸ್ತಿಗಳು ಬಂದಿವೆ. ಇದಕ್ಕೆ ಆತ್ಮ ವಿಶ್ವಾಸವೇ ನನಗೆ ಆಸರೆಯಾಯಿತು. ಹೆಣ್ಣು ಮಕ್ಕಳು ಶಿಕ್ಷಣಕ್ಕೆ ಆದ್ಯತೆ ನೀಡಿದರೆ, ಬದುಕಿನಲ್ಲಿ ಬರುವ ಸಂಕಷ್ಟಗಳನ್ನು ಎದುರಿಸಲು ಸಾಧ್ಯ ಎಂದರು.

ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್ ಮಾತನಾಡಿ, ರಾಜಕೀಯ ಕ್ಷೇತ್ರ ನನಗೆ ಹೊಸತಾದರೂ ಇಲ್ಲಿ ಬಂದು ಒಂದಿಷ್ಟು ಸೇವೆ ಮಾಡಿದ್ದೇನೆ. ಮಹಿಳೆಯರು ಯಾವುದೇ ಕಾರ್ಯ ನಿರ್ವಹಿಸಬಲ್ಲರು ಎನ್ನುವುದನ್ನು ಸಮಾಜಕ್ಕೆ ತೋರಿಸಬೇಕಿದೆ ಎಂದರು.

ಶ್ರೀ ರಾಮ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಡಾ.ಮಾಲಾ ವಿಜಯಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಹಿಳೆಯರಿಗಾಗುತ್ತಿದ್ದ ತಾರತಮ್ಯ, ಶೋಷಣೆಗಳ ವಿರುದ್ದ ದನಿ ಎತ್ತಿದ ಪ್ರತೀಕವಾಗಿ ಮಹಿಳಾ ದಿನಾಚರಣೆ ಆಚರಿಸಲಾಗುತ್ತಿದ್ದು, ಇದರ ಹಿನ್ನೆಲೆ ಅರಿಯಬೇಕಿದೆ. ಹೆಣ್ಣು ಮಕ್ಕಳಿಗೆ ಸಾಮಾಜಿಕ ಜವಾಬ್ದಾರಿಗಳಿರುತ್ತವೆ. ಸಾಮಾಜಿಕ ಜಲತಾಣಗಳಲ್ಲಿ ಪೋಸ್ಟ್‌ ಗಳನ್ನು ಹಾಕುವಾಗ ಎಚ್ಚರ ವಹಿಸಬೇಕು. ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್, ಸ್ತ್ರೀ ರೋಗ ತಜ್ಞೆ ಡಾ.ಶಾಲಿನಿ, ನಗರಸಭೆ ಮಾಜಿ ಅಧ್ಯಕ್ಷೆ ಶಾಂತಮ್ಮ, ವಿದುಷಿ ಶಾರದಾ ಶ್ರೀಧರ್,ಪ್ರಗತಿಪರ ರೈತ ಮಹಿಳೆ ಬಿ.ಮಂಜುಳ, ಮುಕ್ತಿಧಾಮದ ನಿರ್ವಾಹಕಿ ಲಕ್ಷ್ಮಮ್ಮ, ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ಪಾಲಕರಾದ ರಾಧಾಮಣಿ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಶ್ರೀ ರಾಮ ಆಸ್ಪತ್ರೆಯ ನಿರ್ದೇಶಕ ಡಾ.ಎಚ್.ಜಿ.ವಿಜಯ ಕುಮಾರ್, ಸುಜ್ಞಾನ ದೀಪಿಕಾ ಜಾಗೃತಿ ಸಂಚಾಲಕರಾದ ಎಂ.ಎಸ್.ಮಂಜುನಾಥ್, ಎಚ್‍ಇಎಚ್‍ಎಸ್ ಪ್ಯಾರಾಮೆಡಿಕಲ್ ಕಾಲೇಜು ಪ್ರಾಂಶುಪಾಲ ರಾಮಮೂರ್ತಿ, ಸೂರ್ಯ ಪ.ಪೂ.ಕಾಲೇಜಿನ ಪ್ರಾಂಶುಪಾಲ ಎಂ.ಸಿ.ಮಂಜುನಾಥ್ ಮೊದಲಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

57 minutes ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

3 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

8 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

9 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

12 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago