ಅಂದು ನಾವು ಮಾಡಿದ ಆ ಮೂರು ತಪ್ಪುಗಳಿಂದ ಇಂದು ನೋವು ಅನುಭವಿಸುತ್ತಿದ್ದೇವೆ. ಪಕ್ಷಕ್ಕೆ ದ್ರೋಹ ಬಗೆದು ಬಿಜೆಪಿಗೆ ಸೇರ್ಪಡೆಗೊಂಡ ಬಿ.ಸಿ ಆನಂದ್ ಗೆ ಬಮೂಲ್ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕಿದೆ. ಈ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರು, ಮುಖಂಡರ ಒಮ್ಮತದ ಮೇರೆಗೆ ಜೆಡಿಎಸ್ ಅಭ್ಯರ್ಥಿ ಹುಸ್ಕೂರ್ ಟಿ.ಆನಂದ್ ಅವರಿಗೆ ಬಾಹ್ಯ ಬೆಂಬಲ ನೀಡಲಾಗುತ್ತಿದೆ ಎಂದು ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಹೇಳಿದರು.
ಬಿ.ಸಿ.ಆನಂದ್ ನಮ್ಮ ಪಕ್ಷದ ಸಹಕಾರದಿಂದ ಹಲವು ಅಧಿಕಾರಗಳನ್ನು ಅನುಭವಸಿ, ಒಂದು ಹಂತಕ್ಕೆ ಬೆಳೆದು ನಿಂತ ಮೇಲೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಅವರಿಗೆ ಬುದ್ಧಿ ಕಲಿಸುವ ಕಾಲ ಬಂದಿದೆ. ಆ ಕಾರಣದಿಂದ ನಮ್ಮ ಪಕ್ಷದಿಂದ ಬಮೂಲ್ ಚುನಾವಣೆಗೆ ಹಲವು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು, ಆದರೆ, ಅವರ ನಾಮಪತ್ರಗಳನ್ನು ವಾಪಸ್ ಪಡೆಯುವಂತೆ ಮಾಡಿ ಜೆಡಿಎಸ್ ಅಭ್ಯರ್ಥಿ ಹುಸ್ಕೂರ್ ಆನಂದ್ ಅವರಿಗೆ ಬೆಂಬಲ ಸೂಚಿಸಿದ್ದೇವೆ ಎಂದರು.
ನಮಗೆ ಅಧಿಕೃತವಾಗಿ ಜೆಡಿಎಸ್ ನಿಂದ ಬೆಂಬಲ ಬೇಡಿಕೆ ಪತ್ರ ಬಂದಿದ್ದು, ನಾವು ಈ ಕುರಿತು ಹೈಕಮಾಂಡ್ ಗಮನಕ್ಕೆ ತಂದು, ಎಲ್ಲರ ಒಮ್ಮತದಿಂದ ಈ ನಿರ್ಧಾರಕ್ಕೆ ಬಂದಿದ್ದೇವೆ ಎಂದು ಹೇಳಿದರು.
ನಾವು ಯಾವ ಬೇಡಿಕೆ ಇಡದೇ ಜೆಡಿಎಸ್ ಅಭ್ಯರ್ಥಿ ಹುಸ್ಕೂರ್ ಆನಂದ್ ಅವರಿಗೆ ಬಾಹ್ಯ ಬೆಂಬಲ ಸೂಚಿಸಿದ್ದೇವೆ. ತಾಲೂಕಿನ ರೈತರ ಅಭಿವೃದ್ಧಿಗಾಗಿ ಎಲ್ಲರು ಸಹಕರಿಸಬೇಕು ಎಂದು ತಿಳಿಸಿದರು.
ನಂತರ ಕಾಂಗ್ರೆಸ್ ಹಾಗೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಹುಸ್ಕೂರ್ ಟಿ.ಆನಂದ್ ಮಾತನಾಡಿ, ನಮಗೆ ಬಾಹ್ಯ ಬೆಂಬಲ ಸೂಚಿಸಿದ ಕಾಂಗ್ರೆಸ್ ಪಕ್ಷಕ್ಕೆ ಧನ್ಯವಾದ. ನಮಗೆ ಬೆಂಬಲ ಸೂಚಿಸುವಂತೆ ಕೇಳಿಕೊಂಡ ಕೂಡಲೇ ಯಾವುದೇ ಷರತ್ತು ಹಾಕದೇ ಬಾಹ್ಯ ಬೆಂಬಲ ಸೂಚಿಸಿದ್ದಾರೆ ಎಂದು. ಹೇಳಿದರು.
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…