ಅಂದು ನಾವು ಮಾಡಿದ ಆ ಮೂರು ತಪ್ಪುಗಳಿಂದ ಇಂದು ನೋವು ಅನುಭವಿಸುತ್ತಿದ್ದೇವೆ. ಪಕ್ಷಕ್ಕೆ ದ್ರೋಹ ಬಗೆದು ಬಿಜೆಪಿಗೆ ಸೇರ್ಪಡೆಗೊಂಡ ಬಿ.ಸಿ ಆನಂದ್ ಗೆ ಬಮೂಲ್ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕಿದೆ. ಈ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರು, ಮುಖಂಡರ ಒಮ್ಮತದ ಮೇರೆಗೆ ಜೆಡಿಎಸ್ ಅಭ್ಯರ್ಥಿ ಹುಸ್ಕೂರ್ ಟಿ.ಆನಂದ್ ಅವರಿಗೆ ಬಾಹ್ಯ ಬೆಂಬಲ ನೀಡಲಾಗುತ್ತಿದೆ ಎಂದು ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಹೇಳಿದರು.
ಬಿ.ಸಿ.ಆನಂದ್ ನಮ್ಮ ಪಕ್ಷದ ಸಹಕಾರದಿಂದ ಹಲವು ಅಧಿಕಾರಗಳನ್ನು ಅನುಭವಸಿ, ಒಂದು ಹಂತಕ್ಕೆ ಬೆಳೆದು ನಿಂತ ಮೇಲೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಅವರಿಗೆ ಬುದ್ಧಿ ಕಲಿಸುವ ಕಾಲ ಬಂದಿದೆ. ಆ ಕಾರಣದಿಂದ ನಮ್ಮ ಪಕ್ಷದಿಂದ ಬಮೂಲ್ ಚುನಾವಣೆಗೆ ಹಲವು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು, ಆದರೆ, ಅವರ ನಾಮಪತ್ರಗಳನ್ನು ವಾಪಸ್ ಪಡೆಯುವಂತೆ ಮಾಡಿ ಜೆಡಿಎಸ್ ಅಭ್ಯರ್ಥಿ ಹುಸ್ಕೂರ್ ಆನಂದ್ ಅವರಿಗೆ ಬೆಂಬಲ ಸೂಚಿಸಿದ್ದೇವೆ ಎಂದರು.
ನಮಗೆ ಅಧಿಕೃತವಾಗಿ ಜೆಡಿಎಸ್ ನಿಂದ ಬೆಂಬಲ ಬೇಡಿಕೆ ಪತ್ರ ಬಂದಿದ್ದು, ನಾವು ಈ ಕುರಿತು ಹೈಕಮಾಂಡ್ ಗಮನಕ್ಕೆ ತಂದು, ಎಲ್ಲರ ಒಮ್ಮತದಿಂದ ಈ ನಿರ್ಧಾರಕ್ಕೆ ಬಂದಿದ್ದೇವೆ ಎಂದು ಹೇಳಿದರು.
ನಾವು ಯಾವ ಬೇಡಿಕೆ ಇಡದೇ ಜೆಡಿಎಸ್ ಅಭ್ಯರ್ಥಿ ಹುಸ್ಕೂರ್ ಆನಂದ್ ಅವರಿಗೆ ಬಾಹ್ಯ ಬೆಂಬಲ ಸೂಚಿಸಿದ್ದೇವೆ. ತಾಲೂಕಿನ ರೈತರ ಅಭಿವೃದ್ಧಿಗಾಗಿ ಎಲ್ಲರು ಸಹಕರಿಸಬೇಕು ಎಂದು ತಿಳಿಸಿದರು.
ನಂತರ ಕಾಂಗ್ರೆಸ್ ಹಾಗೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಹುಸ್ಕೂರ್ ಟಿ.ಆನಂದ್ ಮಾತನಾಡಿ, ನಮಗೆ ಬಾಹ್ಯ ಬೆಂಬಲ ಸೂಚಿಸಿದ ಕಾಂಗ್ರೆಸ್ ಪಕ್ಷಕ್ಕೆ ಧನ್ಯವಾದ. ನಮಗೆ ಬೆಂಬಲ ಸೂಚಿಸುವಂತೆ ಕೇಳಿಕೊಂಡ ಕೂಡಲೇ ಯಾವುದೇ ಷರತ್ತು ಹಾಕದೇ ಬಾಹ್ಯ ಬೆಂಬಲ ಸೂಚಿಸಿದ್ದಾರೆ ಎಂದು. ಹೇಳಿದರು.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…