ಅಂದು ನಾವು ಮಾಡಿದ ಆ ಮೂರು ತಪ್ಪುಗಳಿಂದ ಇಂದು ನೋವು ಅನುಭವಿಸುತ್ತಿದ್ದೇವೆ. ಪಕ್ಷಕ್ಕೆ ದ್ರೋಹ ಬಗೆದು ಬಿಜೆಪಿಗೆ ಸೇರ್ಪಡೆಗೊಂಡ ಬಿ.ಸಿ ಆನಂದ್ ಗೆ ಬಮೂಲ್ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕಿದೆ. ಈ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರು, ಮುಖಂಡರ ಒಮ್ಮತದ ಮೇರೆಗೆ ಜೆಡಿಎಸ್ ಅಭ್ಯರ್ಥಿ ಹುಸ್ಕೂರ್ ಟಿ.ಆನಂದ್ ಅವರಿಗೆ ಬಾಹ್ಯ ಬೆಂಬಲ ನೀಡಲಾಗುತ್ತಿದೆ ಎಂದು ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಹೇಳಿದರು.
ಬಿ.ಸಿ.ಆನಂದ್ ನಮ್ಮ ಪಕ್ಷದ ಸಹಕಾರದಿಂದ ಹಲವು ಅಧಿಕಾರಗಳನ್ನು ಅನುಭವಸಿ, ಒಂದು ಹಂತಕ್ಕೆ ಬೆಳೆದು ನಿಂತ ಮೇಲೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಅವರಿಗೆ ಬುದ್ಧಿ ಕಲಿಸುವ ಕಾಲ ಬಂದಿದೆ. ಆ ಕಾರಣದಿಂದ ನಮ್ಮ ಪಕ್ಷದಿಂದ ಬಮೂಲ್ ಚುನಾವಣೆಗೆ ಹಲವು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು, ಆದರೆ, ಅವರ ನಾಮಪತ್ರಗಳನ್ನು ವಾಪಸ್ ಪಡೆಯುವಂತೆ ಮಾಡಿ ಜೆಡಿಎಸ್ ಅಭ್ಯರ್ಥಿ ಹುಸ್ಕೂರ್ ಆನಂದ್ ಅವರಿಗೆ ಬೆಂಬಲ ಸೂಚಿಸಿದ್ದೇವೆ ಎಂದರು.
ನಮಗೆ ಅಧಿಕೃತವಾಗಿ ಜೆಡಿಎಸ್ ನಿಂದ ಬೆಂಬಲ ಬೇಡಿಕೆ ಪತ್ರ ಬಂದಿದ್ದು, ನಾವು ಈ ಕುರಿತು ಹೈಕಮಾಂಡ್ ಗಮನಕ್ಕೆ ತಂದು, ಎಲ್ಲರ ಒಮ್ಮತದಿಂದ ಈ ನಿರ್ಧಾರಕ್ಕೆ ಬಂದಿದ್ದೇವೆ ಎಂದು ಹೇಳಿದರು.
ನಾವು ಯಾವ ಬೇಡಿಕೆ ಇಡದೇ ಜೆಡಿಎಸ್ ಅಭ್ಯರ್ಥಿ ಹುಸ್ಕೂರ್ ಆನಂದ್ ಅವರಿಗೆ ಬಾಹ್ಯ ಬೆಂಬಲ ಸೂಚಿಸಿದ್ದೇವೆ. ತಾಲೂಕಿನ ರೈತರ ಅಭಿವೃದ್ಧಿಗಾಗಿ ಎಲ್ಲರು ಸಹಕರಿಸಬೇಕು ಎಂದು ತಿಳಿಸಿದರು.
ನಂತರ ಕಾಂಗ್ರೆಸ್ ಹಾಗೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಹುಸ್ಕೂರ್ ಟಿ.ಆನಂದ್ ಮಾತನಾಡಿ, ನಮಗೆ ಬಾಹ್ಯ ಬೆಂಬಲ ಸೂಚಿಸಿದ ಕಾಂಗ್ರೆಸ್ ಪಕ್ಷಕ್ಕೆ ಧನ್ಯವಾದ. ನಮಗೆ ಬೆಂಬಲ ಸೂಚಿಸುವಂತೆ ಕೇಳಿಕೊಂಡ ಕೂಡಲೇ ಯಾವುದೇ ಷರತ್ತು ಹಾಕದೇ ಬಾಹ್ಯ ಬೆಂಬಲ ಸೂಚಿಸಿದ್ದಾರೆ ಎಂದು. ಹೇಳಿದರು.
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…