ಬಮೂಲ್ ಚುನಾವಣೆ: ನನಗೆ ಜೆಡಿಎಸ್, ಕಾಂಗ್ರೆಸ್, ಬಿಜೆಪಿ ಮೂರು ಪಕ್ಷದವರು ಮತ ನೀಡಿ ಗೆಲ್ಲಿಸುತ್ತಾರೆ- ಹುಸ್ಕೂರ್ ಟಿ.ಆನಂದ್

ಬಮೂಲ್ ಚುನಾವಣೆಗೆ ಸ್ಪರ್ಧಿಸುವಂತೆ ಮಾಜಿ ಪ್ರಧಾನಿ ದೇವೇಗೌಡರು, ಕೇಂದ್ರ ಸಚಿವ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಜಿಲ್ಲಾಧ್ಯಕ್ಷ ಬಿ.ಮುನೇಗೌಡರು ಸೇರಿದಂತೆ ಮುಖಂಡರು, ಕಾರ್ಯಕರ್ತರ ಸೂಚನೆ ಮೇರೆಗೆ ನಾನು ಸ್ಪರ್ಧೆ ಮಾಡುತ್ತಿದ್ದೇನೆ ಎಂದು ಕಾಂಗ್ರೆಸ್ ಬೆಂಬಲಿತ ಹಾಗೂ ಜೆಡಿಎಸ್ ಅಭ್ಯರ್ಥಿ ಹುಸ್ಕೂರ್ ಟಿ.ಆನಂದ್ ಅವರು ಹೇಳಿದರು.

ನಾವು ಬಮೂಲ್ ಚುನಾವಣೆ ಗೆಲ್ಲುವುದು ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನ ಉಳಿವು-ಅಳಿವು ಸಂಗತಿಯಾಗಿದೆ. ಆದ್ಧರಿಂದ ಜೆಡಿಎಸ್ ಪಕ್ಷದ ಎಲ್ಲಾ ಡೈರಿ ಅಧ್ಯಕ್ಷರುಗಳು ನನಗೆ ಮತ ಹಾಕುವುದರ‌ ಮೂಲಕ ಜೆಡಿಎಸ್ ನ್ನು ದೊಡ್ಡಬಳ್ಳಾಪುರದಲ್ಲಿ ಇನ್ನಷ್ಟು ಪ್ರಬಲವಾಗಿಸಬೇಕು ಎಂದು ಕೋರಿದರು.

ಜೆಡಿಎಸ್, ಕಾಂಗ್ರೆಸ್, ಬಿಜೆಪಿ ಈ ಮೂರು ಪಕ್ಷದವರು ಸೇರಿ ಪಕ್ಷಾತೀತವಾಗಿ ನನಗೆ ಮತ ನೀಡಿ ಗೆಲ್ಲಿಸುತ್ತಾರೆ ಎಂಬ ಭರವಸೆ ನನಗಿದೆ. ಬಮೂಲ್ ರೈತ ಸಮುದಾಯದ ಸಂಸ್ಥೆ, ಇದಕ್ಕೆ ಪಕ್ಷ ಬರುವುದಿಲ್ಲ. ಬಮೂಲ್ ಚುನಾವಣೆ ರೈತರಿಗಾಗಿ ನಡೆಯುವ ಚುನಾವಣೆ ಆದ್ದರಿಂದ ಪಕ್ಷ ಭೇದ ಮರೆತು ರೈತರ ಬಗ್ಗೆ ಕಾಳಜಿ ವಹಿಸುವವರಿಗೆ ಮತ ನೀಡಿ ಎಂದು ಕೋರಿದರು.

ಜೆಡಿಎಸ್ ನ 88 ಮಂದಿ ಡೈರಿ ಅಧ್ಯಕ್ಷರಿದ್ದಾರೆ. ಕಾಂಗ್ರೆಸ್ ನ 55 ಮಂದಿ ಇದ್ದಾರೆ. ಬಿಜೆಪಿಯ 52 ಇದ್ದಾರೆ. ಇವರೆಲ್ಲಾರು ನನಗೆ ಮತ ನೀಡುತ್ತಾರೆ ಎಂಬ ನಂಬಿಕೆ ನನಗಿದೆ ಎಂದರು.

ಬಿಜೆಪಿಯ ಬಿ.ಸಿ ಆನಂದ್ ವಾಮಮಾರ್ಗದಿಂದ ಬಿಜೆಪಿ ಸೇರ್ಪಡೆಗೊಂಡಿರುವುದೇ ಹೊರೆತು ಬಿಜೆಪಿಯಿಂದ ಗೆದ್ದಿಲ್ಲ. ಹಿಂದೆ ಮೂರು ಪಕ್ಷದ ಸಹಕಾರದಿಂದ ಗೆದ್ದಿದ್ದರು. ಸಹಕಾರ ನೀಡಿ ಗೆಲ್ಲಿಸಿರುವವರಿಗೆ ಏನೇನು ಸಹಾಯ ಮಾಡಿದ್ದಾರೆ ಎಂಬುದಕ್ಕೆ ಅವರೇ ಉತ್ತರ ಕೊಡಬೇಕು. ಒಂದು ವೇಳೆ ನಾನು ಗೆದ್ದರೆ ನನ್ನ ಕೈಹಿಡಿದವರನ್ನ ಕೈ ಬಿಡುವುದಿಲ್ಲ. ರೈತರ‌ಪರ ಕೆಲಸ ಮಾಡುತ್ತೇನೆ ಎಂದರು.

Ramesh Babu

Journalist

Recent Posts

ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ……

ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…

34 minutes ago

ಆಕ್ಸಿಡೆಂಟ್ ಸ್ಪಾಟ್ ಆದ ಮೆಣಸಿ ಗೇಟ್: ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ: ಹಲವರಿಗೆ ಗಾಯ: ಆಸ್ಪತ್ರೆಗೆ ದಾಖಲು

ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…

12 hours ago

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

21 hours ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

23 hours ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

1 day ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

2 days ago