ಬಮೂಲ್ ಚುನಾವಣೆಗೆ ಸ್ಪರ್ಧಿಸುವಂತೆ ಮಾಜಿ ಪ್ರಧಾನಿ ದೇವೇಗೌಡರು, ಕೇಂದ್ರ ಸಚಿವ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಜಿಲ್ಲಾಧ್ಯಕ್ಷ ಬಿ.ಮುನೇಗೌಡರು ಸೇರಿದಂತೆ ಮುಖಂಡರು, ಕಾರ್ಯಕರ್ತರ ಸೂಚನೆ ಮೇರೆಗೆ ನಾನು ಸ್ಪರ್ಧೆ ಮಾಡುತ್ತಿದ್ದೇನೆ ಎಂದು ಕಾಂಗ್ರೆಸ್ ಬೆಂಬಲಿತ ಹಾಗೂ ಜೆಡಿಎಸ್ ಅಭ್ಯರ್ಥಿ ಹುಸ್ಕೂರ್ ಟಿ.ಆನಂದ್ ಅವರು ಹೇಳಿದರು.
ನಾವು ಬಮೂಲ್ ಚುನಾವಣೆ ಗೆಲ್ಲುವುದು ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನ ಉಳಿವು-ಅಳಿವು ಸಂಗತಿಯಾಗಿದೆ. ಆದ್ಧರಿಂದ ಜೆಡಿಎಸ್ ಪಕ್ಷದ ಎಲ್ಲಾ ಡೈರಿ ಅಧ್ಯಕ್ಷರುಗಳು ನನಗೆ ಮತ ಹಾಕುವುದರ ಮೂಲಕ ಜೆಡಿಎಸ್ ನ್ನು ದೊಡ್ಡಬಳ್ಳಾಪುರದಲ್ಲಿ ಇನ್ನಷ್ಟು ಪ್ರಬಲವಾಗಿಸಬೇಕು ಎಂದು ಕೋರಿದರು.
ಜೆಡಿಎಸ್, ಕಾಂಗ್ರೆಸ್, ಬಿಜೆಪಿ ಈ ಮೂರು ಪಕ್ಷದವರು ಸೇರಿ ಪಕ್ಷಾತೀತವಾಗಿ ನನಗೆ ಮತ ನೀಡಿ ಗೆಲ್ಲಿಸುತ್ತಾರೆ ಎಂಬ ಭರವಸೆ ನನಗಿದೆ. ಬಮೂಲ್ ರೈತ ಸಮುದಾಯದ ಸಂಸ್ಥೆ, ಇದಕ್ಕೆ ಪಕ್ಷ ಬರುವುದಿಲ್ಲ. ಬಮೂಲ್ ಚುನಾವಣೆ ರೈತರಿಗಾಗಿ ನಡೆಯುವ ಚುನಾವಣೆ ಆದ್ದರಿಂದ ಪಕ್ಷ ಭೇದ ಮರೆತು ರೈತರ ಬಗ್ಗೆ ಕಾಳಜಿ ವಹಿಸುವವರಿಗೆ ಮತ ನೀಡಿ ಎಂದು ಕೋರಿದರು.
ಜೆಡಿಎಸ್ ನ 88 ಮಂದಿ ಡೈರಿ ಅಧ್ಯಕ್ಷರಿದ್ದಾರೆ. ಕಾಂಗ್ರೆಸ್ ನ 55 ಮಂದಿ ಇದ್ದಾರೆ. ಬಿಜೆಪಿಯ 52 ಇದ್ದಾರೆ. ಇವರೆಲ್ಲಾರು ನನಗೆ ಮತ ನೀಡುತ್ತಾರೆ ಎಂಬ ನಂಬಿಕೆ ನನಗಿದೆ ಎಂದರು.
ಬಿಜೆಪಿಯ ಬಿ.ಸಿ ಆನಂದ್ ವಾಮಮಾರ್ಗದಿಂದ ಬಿಜೆಪಿ ಸೇರ್ಪಡೆಗೊಂಡಿರುವುದೇ ಹೊರೆತು ಬಿಜೆಪಿಯಿಂದ ಗೆದ್ದಿಲ್ಲ. ಹಿಂದೆ ಮೂರು ಪಕ್ಷದ ಸಹಕಾರದಿಂದ ಗೆದ್ದಿದ್ದರು. ಸಹಕಾರ ನೀಡಿ ಗೆಲ್ಲಿಸಿರುವವರಿಗೆ ಏನೇನು ಸಹಾಯ ಮಾಡಿದ್ದಾರೆ ಎಂಬುದಕ್ಕೆ ಅವರೇ ಉತ್ತರ ಕೊಡಬೇಕು. ಒಂದು ವೇಳೆ ನಾನು ಗೆದ್ದರೆ ನನ್ನ ಕೈಹಿಡಿದವರನ್ನ ಕೈ ಬಿಡುವುದಿಲ್ಲ. ರೈತರಪರ ಕೆಲಸ ಮಾಡುತ್ತೇನೆ ಎಂದರು.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…