ಬಮೂಲ್ ಚುನಾವಣೆ: ನನಗೆ ಜೆಡಿಎಸ್, ಕಾಂಗ್ರೆಸ್, ಬಿಜೆಪಿ ಮೂರು ಪಕ್ಷದವರು ಮತ ನೀಡಿ ಗೆಲ್ಲಿಸುತ್ತಾರೆ- ಹುಸ್ಕೂರ್ ಟಿ.ಆನಂದ್

ಬಮೂಲ್ ಚುನಾವಣೆಗೆ ಸ್ಪರ್ಧಿಸುವಂತೆ ಮಾಜಿ ಪ್ರಧಾನಿ ದೇವೇಗೌಡರು, ಕೇಂದ್ರ ಸಚಿವ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಜಿಲ್ಲಾಧ್ಯಕ್ಷ ಬಿ.ಮುನೇಗೌಡರು ಸೇರಿದಂತೆ ಮುಖಂಡರು, ಕಾರ್ಯಕರ್ತರ ಸೂಚನೆ ಮೇರೆಗೆ ನಾನು ಸ್ಪರ್ಧೆ ಮಾಡುತ್ತಿದ್ದೇನೆ ಎಂದು ಕಾಂಗ್ರೆಸ್ ಬೆಂಬಲಿತ ಹಾಗೂ ಜೆಡಿಎಸ್ ಅಭ್ಯರ್ಥಿ ಹುಸ್ಕೂರ್ ಟಿ.ಆನಂದ್ ಅವರು ಹೇಳಿದರು.

ನಾವು ಬಮೂಲ್ ಚುನಾವಣೆ ಗೆಲ್ಲುವುದು ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನ ಉಳಿವು-ಅಳಿವು ಸಂಗತಿಯಾಗಿದೆ. ಆದ್ಧರಿಂದ ಜೆಡಿಎಸ್ ಪಕ್ಷದ ಎಲ್ಲಾ ಡೈರಿ ಅಧ್ಯಕ್ಷರುಗಳು ನನಗೆ ಮತ ಹಾಕುವುದರ‌ ಮೂಲಕ ಜೆಡಿಎಸ್ ನ್ನು ದೊಡ್ಡಬಳ್ಳಾಪುರದಲ್ಲಿ ಇನ್ನಷ್ಟು ಪ್ರಬಲವಾಗಿಸಬೇಕು ಎಂದು ಕೋರಿದರು.

ಜೆಡಿಎಸ್, ಕಾಂಗ್ರೆಸ್, ಬಿಜೆಪಿ ಈ ಮೂರು ಪಕ್ಷದವರು ಸೇರಿ ಪಕ್ಷಾತೀತವಾಗಿ ನನಗೆ ಮತ ನೀಡಿ ಗೆಲ್ಲಿಸುತ್ತಾರೆ ಎಂಬ ಭರವಸೆ ನನಗಿದೆ. ಬಮೂಲ್ ರೈತ ಸಮುದಾಯದ ಸಂಸ್ಥೆ, ಇದಕ್ಕೆ ಪಕ್ಷ ಬರುವುದಿಲ್ಲ. ಬಮೂಲ್ ಚುನಾವಣೆ ರೈತರಿಗಾಗಿ ನಡೆಯುವ ಚುನಾವಣೆ ಆದ್ದರಿಂದ ಪಕ್ಷ ಭೇದ ಮರೆತು ರೈತರ ಬಗ್ಗೆ ಕಾಳಜಿ ವಹಿಸುವವರಿಗೆ ಮತ ನೀಡಿ ಎಂದು ಕೋರಿದರು.

ಜೆಡಿಎಸ್ ನ 88 ಮಂದಿ ಡೈರಿ ಅಧ್ಯಕ್ಷರಿದ್ದಾರೆ. ಕಾಂಗ್ರೆಸ್ ನ 55 ಮಂದಿ ಇದ್ದಾರೆ. ಬಿಜೆಪಿಯ 52 ಇದ್ದಾರೆ. ಇವರೆಲ್ಲಾರು ನನಗೆ ಮತ ನೀಡುತ್ತಾರೆ ಎಂಬ ನಂಬಿಕೆ ನನಗಿದೆ ಎಂದರು.

ಬಿಜೆಪಿಯ ಬಿ.ಸಿ ಆನಂದ್ ವಾಮಮಾರ್ಗದಿಂದ ಬಿಜೆಪಿ ಸೇರ್ಪಡೆಗೊಂಡಿರುವುದೇ ಹೊರೆತು ಬಿಜೆಪಿಯಿಂದ ಗೆದ್ದಿಲ್ಲ. ಹಿಂದೆ ಮೂರು ಪಕ್ಷದ ಸಹಕಾರದಿಂದ ಗೆದ್ದಿದ್ದರು. ಸಹಕಾರ ನೀಡಿ ಗೆಲ್ಲಿಸಿರುವವರಿಗೆ ಏನೇನು ಸಹಾಯ ಮಾಡಿದ್ದಾರೆ ಎಂಬುದಕ್ಕೆ ಅವರೇ ಉತ್ತರ ಕೊಡಬೇಕು. ಒಂದು ವೇಳೆ ನಾನು ಗೆದ್ದರೆ ನನ್ನ ಕೈಹಿಡಿದವರನ್ನ ಕೈ ಬಿಡುವುದಿಲ್ಲ. ರೈತರ‌ಪರ ಕೆಲಸ ಮಾಡುತ್ತೇನೆ ಎಂದರು.

Ramesh Babu

Journalist

Recent Posts

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

3 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

6 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

8 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

8 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

19 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

20 hours ago