ಬಮೂಲ್ ಚುನಾವಣೆಗೆ ಸ್ಪರ್ಧಿಸುವಂತೆ ಮಾಜಿ ಪ್ರಧಾನಿ ದೇವೇಗೌಡರು, ಕೇಂದ್ರ ಸಚಿವ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಜಿಲ್ಲಾಧ್ಯಕ್ಷ ಬಿ.ಮುನೇಗೌಡರು ಸೇರಿದಂತೆ ಮುಖಂಡರು, ಕಾರ್ಯಕರ್ತರ ಸೂಚನೆ ಮೇರೆಗೆ ನಾನು ಸ್ಪರ್ಧೆ ಮಾಡುತ್ತಿದ್ದೇನೆ ಎಂದು ಕಾಂಗ್ರೆಸ್ ಬೆಂಬಲಿತ ಹಾಗೂ ಜೆಡಿಎಸ್ ಅಭ್ಯರ್ಥಿ ಹುಸ್ಕೂರ್ ಟಿ.ಆನಂದ್ ಅವರು ಹೇಳಿದರು.
ನಾವು ಬಮೂಲ್ ಚುನಾವಣೆ ಗೆಲ್ಲುವುದು ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನ ಉಳಿವು-ಅಳಿವು ಸಂಗತಿಯಾಗಿದೆ. ಆದ್ಧರಿಂದ ಜೆಡಿಎಸ್ ಪಕ್ಷದ ಎಲ್ಲಾ ಡೈರಿ ಅಧ್ಯಕ್ಷರುಗಳು ನನಗೆ ಮತ ಹಾಕುವುದರ ಮೂಲಕ ಜೆಡಿಎಸ್ ನ್ನು ದೊಡ್ಡಬಳ್ಳಾಪುರದಲ್ಲಿ ಇನ್ನಷ್ಟು ಪ್ರಬಲವಾಗಿಸಬೇಕು ಎಂದು ಕೋರಿದರು.
ಜೆಡಿಎಸ್, ಕಾಂಗ್ರೆಸ್, ಬಿಜೆಪಿ ಈ ಮೂರು ಪಕ್ಷದವರು ಸೇರಿ ಪಕ್ಷಾತೀತವಾಗಿ ನನಗೆ ಮತ ನೀಡಿ ಗೆಲ್ಲಿಸುತ್ತಾರೆ ಎಂಬ ಭರವಸೆ ನನಗಿದೆ. ಬಮೂಲ್ ರೈತ ಸಮುದಾಯದ ಸಂಸ್ಥೆ, ಇದಕ್ಕೆ ಪಕ್ಷ ಬರುವುದಿಲ್ಲ. ಬಮೂಲ್ ಚುನಾವಣೆ ರೈತರಿಗಾಗಿ ನಡೆಯುವ ಚುನಾವಣೆ ಆದ್ದರಿಂದ ಪಕ್ಷ ಭೇದ ಮರೆತು ರೈತರ ಬಗ್ಗೆ ಕಾಳಜಿ ವಹಿಸುವವರಿಗೆ ಮತ ನೀಡಿ ಎಂದು ಕೋರಿದರು.
ಜೆಡಿಎಸ್ ನ 88 ಮಂದಿ ಡೈರಿ ಅಧ್ಯಕ್ಷರಿದ್ದಾರೆ. ಕಾಂಗ್ರೆಸ್ ನ 55 ಮಂದಿ ಇದ್ದಾರೆ. ಬಿಜೆಪಿಯ 52 ಇದ್ದಾರೆ. ಇವರೆಲ್ಲಾರು ನನಗೆ ಮತ ನೀಡುತ್ತಾರೆ ಎಂಬ ನಂಬಿಕೆ ನನಗಿದೆ ಎಂದರು.
ಬಿಜೆಪಿಯ ಬಿ.ಸಿ ಆನಂದ್ ವಾಮಮಾರ್ಗದಿಂದ ಬಿಜೆಪಿ ಸೇರ್ಪಡೆಗೊಂಡಿರುವುದೇ ಹೊರೆತು ಬಿಜೆಪಿಯಿಂದ ಗೆದ್ದಿಲ್ಲ. ಹಿಂದೆ ಮೂರು ಪಕ್ಷದ ಸಹಕಾರದಿಂದ ಗೆದ್ದಿದ್ದರು. ಸಹಕಾರ ನೀಡಿ ಗೆಲ್ಲಿಸಿರುವವರಿಗೆ ಏನೇನು ಸಹಾಯ ಮಾಡಿದ್ದಾರೆ ಎಂಬುದಕ್ಕೆ ಅವರೇ ಉತ್ತರ ಕೊಡಬೇಕು. ಒಂದು ವೇಳೆ ನಾನು ಗೆದ್ದರೆ ನನ್ನ ಕೈಹಿಡಿದವರನ್ನ ಕೈ ಬಿಡುವುದಿಲ್ಲ. ರೈತರಪರ ಕೆಲಸ ಮಾಡುತ್ತೇನೆ ಎಂದರು.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…