ದೊಡ್ಡಬಳ್ಳಾಪುರ: ಬೆಂಗಳೂರು ಸಹಕಾರ ಹಾಲು ಒಕ್ಕೂಟ (ಬಮೂಲ್) ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯ ಶಾಂತಿಯುತವಾಗಿ ಮುಕ್ತಾಯಗೊಂಡು, ಫಲಿತಾಂಶ ಕೂಡ ಹೊರಬಂದಿದೆ. ಬಮೂಲ್ ಫಲಿತಾಂಶದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಸಿ ಆನಂದ್ ಅವರು ಗೆಲುವು ಸಾಧಿಸಿದ್ದಾರೆ.
ಒಟ್ಟು 201 ಮತಗಳಲ್ಲಿ 156ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದ್ದಾರೆ. ಇವರ ಪ್ರತಿಸ್ಪರ್ಧಿ ಜೆಡಿಎಸ್ ಅಭ್ಯರ್ಥಿ ಹಸ್ಕೂರ್ ಟಿ.ಆನಂದ್ ಅವರು ಕೇವಲ 40 ಮತಗಳನ್ನು ಪಡೆದು ಪರಾಭಾವಗೊಂಡಿದ್ದಾರೆ. ಇನ್ನುಳಿದ 5 ಮತಗಳು ಅಸಿಂಧುಗೊಂಡಿವೆ ಎಂದು ತಿಳಿದು ಬಂದಿದೆ.
ಇಂದು ಬೆಂಗಳೂರು ಡೇರಿ ವೃತ್ತ ಸಮೀಪ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಆವರಣದಲ್ಲಿ ಬೆಳಿಗ್ಗೆ 9-00 ಗಂಟೆಯಿಂದ ಸಂಜೆ 4-00 ಗಂಟೆಯವರೆಗೆ ಮತದಾನ ನಡೆದಿದ್ದು, ಸಂಜೆ ಫಲಿತಾಂಶ ಹೊರಬಿದ್ದಿದೆ. ಬಮೂಲ್ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಹುಸ್ಕೂರು ಆನಂದ್ ವಿರುದ್ಧ ಬಿಜೆಪಿ ಅಭ್ಯರ್ಥಿ ಬಿ.ಸಿ ಆನಂದ್ ಕುಮಾರ್ ಜಯಸಾಧಿಸಿದ್ದಾರೆ.
ದೊಡ್ಡಬಳ್ಳಾಪುರ ಮತ ಕ್ಷೇತ್ರದ ಎಣಿಕೆಯನ್ನು ನ್ಯಾಯಾಲಯದ ತೀರ್ಪಿನ ಬಳಿಕ ನಡೆಸಲಾಗುವುದು ಎಂದು ಗೊಂದಲ ಸೃಷ್ಟಿ ಆಗಿತ್ತು. ಇದೀಗ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯಲಾಗಿದೆ.
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…