ಬಮೂಲ್ ಚುನಾವಣೆ ಹಾಗೂ ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಚುನಾವಣೆ ಬಗ್ಗೆ ಚುಂಚೇಗೌಡರು ಏನಂದರು….?

ದೊಡ್ಡಬಳ್ಳಾಪುರ: ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್(ಪಿಎಲ್ಡಿ) ನಿಯಮಿತದ ಚುನಾವಣೆಯ ಅಂತಿಮ ಫಲಿತಾಂಶ ನ್ಯಾಯಾಲಯದ ಆದೇಶದ ಮೇರೆಗೆ ಪ್ರಕಟವಾಗಿದ್ದು,

ಚುನಾವಣೆ ಫಲಿತಾಂಶ ಪ್ರಕಟವಾಗುತ್ತಲೇ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳು ಕಣ್ಣು ನೆಟ್ಟಿದ್ದು, ಚರ್ಚೆ ತೀವ್ರಗೊಂಡಿದೆ.

ಈ ಕುರಿತಾಗಿ “ಪಬ್ಲಿಕ್ ಮಿರ್ಚಿ” ಯೊಂದಿಗೆ ದೊಡ್ಡಬಳ್ಳಾಪುರ ಯೋಜನಾ ಆಯೋಗದ ಅಧ್ಯಕ್ಷ ಚುಂಚೇಗೌಡ ಮಾತನಾಡಿ, ಎಲ್ಲಾ ಪಕ್ಷದಿಂದ ಐದೈದು ಮಂದಿ ಗೆದ್ದಿದ್ದಾರೆ. ಯಾರು ಅನ್ಯಾವಾಗದೇ 20ತಿಂಗಳಂತೆ ಒಬ್ಬೊಬ್ಬರು ಅಧಿಕಾರವನ್ನು ಹಂಚಿಕೊಂಡು ಸಹಕಾರದಿಂದ ಇರೋಣ ಎಂದು ಮಾತನಾಡಿಕೊಂಡಿದ್ದೇವೆ. ಈ ನಿರ್ಧಾರವನ್ನು ಯಾರೂ ಒಪ್ಪದ ಪಕ್ಷದಲ್ಲಿ ನಾವು ಬೇರೆ ತೀರ್ಮಾನ ತೆಗೆದುಕೊಳ್ಳುತ್ತೇವೆ. ಶತಾಯಗತಾಯ ಪಿಎಲ್ ಡಿ‌ ಬ್ಯಾಂಕ್ ಗೆ ಕಾಂಗ್ರೆಸ್ ನಿಂದಲೇ ಅಧ್ಯಕ್ಷರನ್ನಾಗಿ ಮಾಡಲು ಪ್ರಯತ್ನ ಮಾಡುತ್ತೇವೆ ಎಂದರು‌.

ಬಮೂಲ್ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಿಂದ ಮೂರ್ನಾಲ್ಕು ಮಂದಿ ಆಕಾಂಕ್ಷಿಗಳಿದ್ದಾರೆ. ಕಾಂಗ್ರೆಸ್ ಮುಖಂಡ ಹಾಗೂ ಭೂ ಮಂಜೂರಾತಿ‌ ಸಮಿತಿ ಸದಸ್ಯ ಗಂಗಸಂದ್ರ ಜಿ.ಕೆ.ಶ್ರೀಧರ್, ರಾಮಣ್ಣ, ಕಲ್ಲುದೇವನಹಳ್ಳಿ ಮರೀಗೌಡ, ಸಕ್ಕರೆಗೊಲ್ಲಹಳ್ಳಿ ರುದ್ರಮೂರ್ತಿ, ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಂಡರೆ ಹುಸ್ಕೂರ್ ಆನಂದ್ ಆಕಾಂಕ್ಷಿಗಳಾಗಿದ್ದರೆ. ಈ ಹಿನ್ನೆಲೆ ಇದೇ ಭಾನುವಾರ ಸಭೆ ಕರೆದಿದ್ದೇವೆ. ಅಂದು ಒಬ್ಬರನ್ನು ಅಂತಿಮ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡುತ್ತೇವೆ. ಜೆಡಿಎಸ್ ಪಕ್ಷದವರು ಬಿಜೆಪಿ ಜೊತೆ ಬಿಟ್ಟು ನಮ್ಮ ಕಾಂಗ್ರೆಸ್ ಜೊತೆ ಬಂದು ಮೈತ್ರಿ ಮಾಡಿಕೊಳ್ಳುವುದಕ್ಕೆ ಬಂದರೆ ನಾವು ಸ್ವಾಗತಿಸುತ್ತೇವೆ ಎಂದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

18 minutes ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

10 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

11 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

22 hours ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

22 hours ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

22 hours ago