ಬಮೂಲ್ ಚುನಾವಣೆ ಹಾಗೂ ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಚುನಾವಣೆ ಬಗ್ಗೆ ಚುಂಚೇಗೌಡರು ಏನಂದರು….?

ದೊಡ್ಡಬಳ್ಳಾಪುರ: ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್(ಪಿಎಲ್ಡಿ) ನಿಯಮಿತದ ಚುನಾವಣೆಯ ಅಂತಿಮ ಫಲಿತಾಂಶ ನ್ಯಾಯಾಲಯದ ಆದೇಶದ ಮೇರೆಗೆ ಪ್ರಕಟವಾಗಿದ್ದು,

ಚುನಾವಣೆ ಫಲಿತಾಂಶ ಪ್ರಕಟವಾಗುತ್ತಲೇ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳು ಕಣ್ಣು ನೆಟ್ಟಿದ್ದು, ಚರ್ಚೆ ತೀವ್ರಗೊಂಡಿದೆ.

ಈ ಕುರಿತಾಗಿ “ಪಬ್ಲಿಕ್ ಮಿರ್ಚಿ” ಯೊಂದಿಗೆ ದೊಡ್ಡಬಳ್ಳಾಪುರ ಯೋಜನಾ ಆಯೋಗದ ಅಧ್ಯಕ್ಷ ಚುಂಚೇಗೌಡ ಮಾತನಾಡಿ, ಎಲ್ಲಾ ಪಕ್ಷದಿಂದ ಐದೈದು ಮಂದಿ ಗೆದ್ದಿದ್ದಾರೆ. ಯಾರು ಅನ್ಯಾವಾಗದೇ 20ತಿಂಗಳಂತೆ ಒಬ್ಬೊಬ್ಬರು ಅಧಿಕಾರವನ್ನು ಹಂಚಿಕೊಂಡು ಸಹಕಾರದಿಂದ ಇರೋಣ ಎಂದು ಮಾತನಾಡಿಕೊಂಡಿದ್ದೇವೆ. ಈ ನಿರ್ಧಾರವನ್ನು ಯಾರೂ ಒಪ್ಪದ ಪಕ್ಷದಲ್ಲಿ ನಾವು ಬೇರೆ ತೀರ್ಮಾನ ತೆಗೆದುಕೊಳ್ಳುತ್ತೇವೆ. ಶತಾಯಗತಾಯ ಪಿಎಲ್ ಡಿ‌ ಬ್ಯಾಂಕ್ ಗೆ ಕಾಂಗ್ರೆಸ್ ನಿಂದಲೇ ಅಧ್ಯಕ್ಷರನ್ನಾಗಿ ಮಾಡಲು ಪ್ರಯತ್ನ ಮಾಡುತ್ತೇವೆ ಎಂದರು‌.

ಬಮೂಲ್ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಿಂದ ಮೂರ್ನಾಲ್ಕು ಮಂದಿ ಆಕಾಂಕ್ಷಿಗಳಿದ್ದಾರೆ. ಕಾಂಗ್ರೆಸ್ ಮುಖಂಡ ಹಾಗೂ ಭೂ ಮಂಜೂರಾತಿ‌ ಸಮಿತಿ ಸದಸ್ಯ ಗಂಗಸಂದ್ರ ಜಿ.ಕೆ.ಶ್ರೀಧರ್, ರಾಮಣ್ಣ, ಕಲ್ಲುದೇವನಹಳ್ಳಿ ಮರೀಗೌಡ, ಸಕ್ಕರೆಗೊಲ್ಲಹಳ್ಳಿ ರುದ್ರಮೂರ್ತಿ, ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಂಡರೆ ಹುಸ್ಕೂರ್ ಆನಂದ್ ಆಕಾಂಕ್ಷಿಗಳಾಗಿದ್ದರೆ. ಈ ಹಿನ್ನೆಲೆ ಇದೇ ಭಾನುವಾರ ಸಭೆ ಕರೆದಿದ್ದೇವೆ. ಅಂದು ಒಬ್ಬರನ್ನು ಅಂತಿಮ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡುತ್ತೇವೆ. ಜೆಡಿಎಸ್ ಪಕ್ಷದವರು ಬಿಜೆಪಿ ಜೊತೆ ಬಿಟ್ಟು ನಮ್ಮ ಕಾಂಗ್ರೆಸ್ ಜೊತೆ ಬಂದು ಮೈತ್ರಿ ಮಾಡಿಕೊಳ್ಳುವುದಕ್ಕೆ ಬಂದರೆ ನಾವು ಸ್ವಾಗತಿಸುತ್ತೇವೆ ಎಂದರು.

Ramesh Babu

Journalist

Recent Posts

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

2 hours ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

8 hours ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

9 hours ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

20 hours ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ

ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

20 hours ago

ಹೊರಗುತ್ತಿಗೆ ನೇಮಕಾತಿಯಲ್ಲೂ ಎಸ್‌ಸಿ, ಎಸ್‌ಟಿಗೆ ಮೀಸಲಾತಿ ಕಡ್ಡಾಯ- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ SCSP-TSP ಅನುದಾನವನ್ನು ಸಮರ್ಪಕವಾಗಿ ಬಳಸದ ಇಲಾಖೆಗಳ ಮುಂದಿನ ಹಣಕಾಸು…

20 hours ago