ಬಮೂಲ್ ನಿರ್ದೇಶಕರ ಚುನಾವಣೆ: ಹುಸ್ಕೂರ್ ಆನಂದ್ ಯಾರು ಅಂತಾನೇ ಗೊತ್ತಿಲ್ಲ: ಹಾಗಾದರೆ ಶಾಸಕ ಧೀರಜ್ ಮುನಿರಾಜ್ ಅವರ ನಿಲುವು ಯಾರ ಪರ ಇದೆ…?

ಬಮೂಲ್ ನಿರ್ದೇಶಕರ ಚುನಾವಣೆಗೆ ದೊಡ್ಡಬಳ್ಳಾಪುರದಲ್ಲಿ ತೆರೆಮರೆಯಲ್ಲಿ‌ ಆಯಾ ಪಕ್ಷಗಳಲ್ಲಿ ಸಕಲ‌ ಸಿದ್ಧತೆ ನಡೆಸಲಾಗುತ್ತಿದೆ. ಬಿಜೆಪಿಯಿಂದ ಹಾಲಿ‌ ನಿರ್ದೇಶಕ ಬಿ.ಸಿ ಆನಂದ್, ಜೆಡಿಎಸ್ ನಿಂದ ಹುಸ್ಕೂರು ಆನಂದ್, ಕಾಂಗ್ರೆಸ್ ನಿಂದ ಮಾಜಿ ಎಂಎಲ್ಎ ಟಿ.ವೆಂಕಟರಮಣಯ್ಯ ಸಹೋದರ ರಾಮಣ್ಣ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ ಎಂದು ಸಾರ್ವಜನಿಕ ವಲಯದಲ್ಲಿ ಗುಸುಗುಸು ಚರ್ಚೆಯಾಗುತ್ತಿದೆ.

ಎಂಪಿ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಲಾಗಿತ್ತು. ಇದೀಗ ಬಮೂಲ್ ನಿರ್ದೇಶಕರ ಚುನಾವಣೆಗೆ ದೊಡ್ಡಬಳ್ಳಾಪುರದಲ್ಲಿ‌ ಮೈತ್ರಿ ಮರೆತು ಜೆಡಿಎಸ್ ನಿಂದ ಹುಸ್ಕೂರು ಆನಂದ್ ಹಾಗೂ ಬಿಜೆಪಿಯಿಂದ ಬಿ.ಸಿ ಆನಂದ್ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ಹಿನ್ನೆಲೆ ಶಾಸಕ ಧೀರಜ್ ಮುನಿರಾಜ್ ಅವರ ನಿಲುವು ಯಾರ ಪರ ಇದೆ…? ಎಂಬ ಪ್ರಶ್ನೆಗೆ ಶಾಸಕರೇ ಉತ್ತರಿಸಿದ್ದಾರೆ, ಹುಸ್ಕೂರು ಆನಂದ್ ಅವರು ಯಾರು ಅಂತಾ ಗೊತ್ತಿಲ್ಲ, ಅವರು ವಾರದ ಹಿಂದೆ ಹಾಲಿನ ಡೈರಿ ಅಧ್ಯಕ್ಷ್ಯರಾದರು‌ ಎಂದು ಮೂರನೇ ವ್ಯಕ್ತಿಯಿಂದ ಗೊತ್ತಾಗಿದೆ. ಬಿಸಿ ಆನಂದಣ್ಣ ನನಗೆ ಎಂಎಲ್ಎ ಎಲೆಕ್ಷನ್ ನಿಂದ ಪರಿಚಯ, ಎಂಎಲ್ಎ ಹಾಗೂ ಎಂಪಿ ಚುನಾವಣೆ ಗೆಲ್ಲಲು ಅವರು ನಮಗೆ ಸಹಕರಿಸಿದ್ದಾರೆ. ಆದ್ದರಿಂದ ನಾವು ಅವರ ಪರ ಇರುತ್ತೇವೆ. ನಮ್ಮ ಕೈಲಾದಷ್ಟು ಸಹಕಾರ ನೀಡುತ್ತೇವೆ. ಇದರಲ್ಲಿ ಏನು ತಪ್ಪಿದೆ ಎಂದು ಹೇಳಿದ್ದಾರೆ.

ಆದರೆ, ಎಂಎಲ್ಎ ಹಾಗೂ ಎಂಪಿ ಚುನಾವಣೆ ಆದ ನಂತರ ಹುಸ್ಕೂರು ಆನಂದ್ ಅವರನ್ನ ಒಂದು ಎರೆಡು ಬಾರಿ ಭೇಟಿ ಆಗಿರಬಹುದು ಅಷ್ಟೇ, ಅವರಿಗೂ ನನಗೂ ಅಷ್ಟೋಂದು ಆತ್ಮಿಯತೆ ಇಲ್ಲ. ಡೈರಿ ನಿರ್ದೇಶಕ ಬಿ.ಸಿ.ಆನಂದಣ್ಣ ನಮ್ಮ ಪಾರ್ಟಿಗೆ ಬಂದು ಸೇರಿದ್ದಾರೆ. ಬಮೂಲ್ ಚುನಾವಣೆಯ ಲೆಕ್ಕಾಚಾರವನ್ನು ವರಿಷ್ಠರು ಮಾಡಲಿದ್ದಾರೆ. ನಾನು ಕೇವಲ ಒಬ್ಬ ಸಾಮಾನ್ಯ ಶಾಸಕ‌ ಮಾತ್ರ, ನನ್ನ ಪರವಾಗಿ, ಪಾರ್ಟಿ ಪರವಾಗಿ ಕೆಲಸ ಮಾಡಿದವರ ಜೊತೆ ನಿಂತು ಅವರ ಪರ ಕೆಲಸ‌ ಮಾಡುತ್ತೇನೆ. ನಾನು ಯಾರ‌ ನಡುವೆಯೂ ಅಂತರ ಕಾಯ್ದುಕೊಂಡಿಲ್ಲ. ನಮ್ಮ ಬಳಿಯೇ ಡೈರಿ ನಿರ್ದೇಶಕರು ಇದ್ದಾಗ ನಾವು ಬೇರೆಯವರ ಬಳಿ ನಾವು ಏಕೆ ಹೋಗಬೇಕು, ನನಗೆ ಅಂತಾ ಕೆಟ್ಟು ಬುದ್ದಿ ಇಲ್ಲ. ಬಿ.ಸಿ.ಆನಂದ್ ಅವರ ಬಗ್ಗೆ ಜನರಲ್ಲಿ ಒಳ್ಳೆ ಅಭಿಪ್ರಾಯವಿದೆ. ಅವರನ್ನು ಗೆಲ್ಲಿಸಿಕೊಂಡು ಬಂದೇ ಬರುತ್ತೇವೆ ಎಂದು ಹೇಳಿದರು.

Ramesh Babu

Journalist

Recent Posts

ಯುಗಾದಿ, ರಂಜಾನ್ ಹಬ್ಬ ವಿಶೇಷ: ಜೂಜಾಟ ಸೇರಿದಂತೆ ಅಕ್ರಮ ಚಟುವಟಿಕೆ ತಡೆಗೆ ಪೊಲೀಸ್ ಇಲಾಖೆ ಕಸರತ್ತು: ಬೆಳ್ಳಂಬೆಳಗ್ಗೆ ರೌಡಿ ಪರೇಡ್: 70ಕ್ಕೂ ಹೆಚ್ಚು ರೌಡಿಗಳಿಗೆ ಬೆವರಿಳಿಸಿದ ಡಿವೈಎಸ್ ಪಿ ಪಾಂಡುರಂಗ

ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸಪ್ಲೆ, ಕಾಲೇಜುಗಳ ಬಳಿ ಸುಖಾ ಸುಮ್ಮನೆ ಓಡಾಟ, ಏರಿಯಾಗಳಲ್ಲಿ ಹವಾ ಮೇಂಟೈನ್ ಮಾಡೋದು, ಅಫ್ತಾ ವಸೂಲಿ…

29 minutes ago

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

9 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

1 day ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

1 day ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

2 days ago