ಬಮೂಲ್ ನಿರ್ದೇಶಕರ ಚುನಾವಣೆ: ಹುಸ್ಕೂರ್ ಆನಂದ್ ಯಾರು ಅಂತಾನೇ ಗೊತ್ತಿಲ್ಲ: ಹಾಗಾದರೆ ಶಾಸಕ ಧೀರಜ್ ಮುನಿರಾಜ್ ಅವರ ನಿಲುವು ಯಾರ ಪರ ಇದೆ…?

ಬಮೂಲ್ ನಿರ್ದೇಶಕರ ಚುನಾವಣೆಗೆ ದೊಡ್ಡಬಳ್ಳಾಪುರದಲ್ಲಿ ತೆರೆಮರೆಯಲ್ಲಿ‌ ಆಯಾ ಪಕ್ಷಗಳಲ್ಲಿ ಸಕಲ‌ ಸಿದ್ಧತೆ ನಡೆಸಲಾಗುತ್ತಿದೆ. ಬಿಜೆಪಿಯಿಂದ ಹಾಲಿ‌ ನಿರ್ದೇಶಕ ಬಿ.ಸಿ ಆನಂದ್, ಜೆಡಿಎಸ್ ನಿಂದ ಹುಸ್ಕೂರು ಆನಂದ್, ಕಾಂಗ್ರೆಸ್ ನಿಂದ ಮಾಜಿ ಎಂಎಲ್ಎ ಟಿ.ವೆಂಕಟರಮಣಯ್ಯ ಸಹೋದರ ರಾಮಣ್ಣ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ ಎಂದು ಸಾರ್ವಜನಿಕ ವಲಯದಲ್ಲಿ ಗುಸುಗುಸು ಚರ್ಚೆಯಾಗುತ್ತಿದೆ.

ಎಂಪಿ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಲಾಗಿತ್ತು. ಇದೀಗ ಬಮೂಲ್ ನಿರ್ದೇಶಕರ ಚುನಾವಣೆಗೆ ದೊಡ್ಡಬಳ್ಳಾಪುರದಲ್ಲಿ‌ ಮೈತ್ರಿ ಮರೆತು ಜೆಡಿಎಸ್ ನಿಂದ ಹುಸ್ಕೂರು ಆನಂದ್ ಹಾಗೂ ಬಿಜೆಪಿಯಿಂದ ಬಿ.ಸಿ ಆನಂದ್ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ಹಿನ್ನೆಲೆ ಶಾಸಕ ಧೀರಜ್ ಮುನಿರಾಜ್ ಅವರ ನಿಲುವು ಯಾರ ಪರ ಇದೆ…? ಎಂಬ ಪ್ರಶ್ನೆಗೆ ಶಾಸಕರೇ ಉತ್ತರಿಸಿದ್ದಾರೆ, ಹುಸ್ಕೂರು ಆನಂದ್ ಅವರು ಯಾರು ಅಂತಾ ಗೊತ್ತಿಲ್ಲ, ಅವರು ವಾರದ ಹಿಂದೆ ಹಾಲಿನ ಡೈರಿ ಅಧ್ಯಕ್ಷ್ಯರಾದರು‌ ಎಂದು ಮೂರನೇ ವ್ಯಕ್ತಿಯಿಂದ ಗೊತ್ತಾಗಿದೆ. ಬಿಸಿ ಆನಂದಣ್ಣ ನನಗೆ ಎಂಎಲ್ಎ ಎಲೆಕ್ಷನ್ ನಿಂದ ಪರಿಚಯ, ಎಂಎಲ್ಎ ಹಾಗೂ ಎಂಪಿ ಚುನಾವಣೆ ಗೆಲ್ಲಲು ಅವರು ನಮಗೆ ಸಹಕರಿಸಿದ್ದಾರೆ. ಆದ್ದರಿಂದ ನಾವು ಅವರ ಪರ ಇರುತ್ತೇವೆ. ನಮ್ಮ ಕೈಲಾದಷ್ಟು ಸಹಕಾರ ನೀಡುತ್ತೇವೆ. ಇದರಲ್ಲಿ ಏನು ತಪ್ಪಿದೆ ಎಂದು ಹೇಳಿದ್ದಾರೆ.

ಆದರೆ, ಎಂಎಲ್ಎ ಹಾಗೂ ಎಂಪಿ ಚುನಾವಣೆ ಆದ ನಂತರ ಹುಸ್ಕೂರು ಆನಂದ್ ಅವರನ್ನ ಒಂದು ಎರೆಡು ಬಾರಿ ಭೇಟಿ ಆಗಿರಬಹುದು ಅಷ್ಟೇ, ಅವರಿಗೂ ನನಗೂ ಅಷ್ಟೋಂದು ಆತ್ಮಿಯತೆ ಇಲ್ಲ. ಡೈರಿ ನಿರ್ದೇಶಕ ಬಿ.ಸಿ.ಆನಂದಣ್ಣ ನಮ್ಮ ಪಾರ್ಟಿಗೆ ಬಂದು ಸೇರಿದ್ದಾರೆ. ಬಮೂಲ್ ಚುನಾವಣೆಯ ಲೆಕ್ಕಾಚಾರವನ್ನು ವರಿಷ್ಠರು ಮಾಡಲಿದ್ದಾರೆ. ನಾನು ಕೇವಲ ಒಬ್ಬ ಸಾಮಾನ್ಯ ಶಾಸಕ‌ ಮಾತ್ರ, ನನ್ನ ಪರವಾಗಿ, ಪಾರ್ಟಿ ಪರವಾಗಿ ಕೆಲಸ ಮಾಡಿದವರ ಜೊತೆ ನಿಂತು ಅವರ ಪರ ಕೆಲಸ‌ ಮಾಡುತ್ತೇನೆ. ನಾನು ಯಾರ‌ ನಡುವೆಯೂ ಅಂತರ ಕಾಯ್ದುಕೊಂಡಿಲ್ಲ. ನಮ್ಮ ಬಳಿಯೇ ಡೈರಿ ನಿರ್ದೇಶಕರು ಇದ್ದಾಗ ನಾವು ಬೇರೆಯವರ ಬಳಿ ನಾವು ಏಕೆ ಹೋಗಬೇಕು, ನನಗೆ ಅಂತಾ ಕೆಟ್ಟು ಬುದ್ದಿ ಇಲ್ಲ. ಬಿ.ಸಿ.ಆನಂದ್ ಅವರ ಬಗ್ಗೆ ಜನರಲ್ಲಿ ಒಳ್ಳೆ ಅಭಿಪ್ರಾಯವಿದೆ. ಅವರನ್ನು ಗೆಲ್ಲಿಸಿಕೊಂಡು ಬಂದೇ ಬರುತ್ತೇವೆ ಎಂದು ಹೇಳಿದರು.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

5 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

17 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

18 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

19 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

19 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

1 day ago