ಬಮೂಲ್ ನಿರ್ದೇಶಕರ ಚುನಾವಣೆ: ಹುಸ್ಕೂರ್ ಆನಂದ್ ಯಾರು ಅಂತಾನೇ ಗೊತ್ತಿಲ್ಲ: ಹಾಗಾದರೆ ಶಾಸಕ ಧೀರಜ್ ಮುನಿರಾಜ್ ಅವರ ನಿಲುವು ಯಾರ ಪರ ಇದೆ…?

ಬಮೂಲ್ ನಿರ್ದೇಶಕರ ಚುನಾವಣೆಗೆ ದೊಡ್ಡಬಳ್ಳಾಪುರದಲ್ಲಿ ತೆರೆಮರೆಯಲ್ಲಿ‌ ಆಯಾ ಪಕ್ಷಗಳಲ್ಲಿ ಸಕಲ‌ ಸಿದ್ಧತೆ ನಡೆಸಲಾಗುತ್ತಿದೆ. ಬಿಜೆಪಿಯಿಂದ ಹಾಲಿ‌ ನಿರ್ದೇಶಕ ಬಿ.ಸಿ ಆನಂದ್, ಜೆಡಿಎಸ್ ನಿಂದ ಹುಸ್ಕೂರು ಆನಂದ್, ಕಾಂಗ್ರೆಸ್ ನಿಂದ ಮಾಜಿ ಎಂಎಲ್ಎ ಟಿ.ವೆಂಕಟರಮಣಯ್ಯ ಸಹೋದರ ರಾಮಣ್ಣ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ ಎಂದು ಸಾರ್ವಜನಿಕ ವಲಯದಲ್ಲಿ ಗುಸುಗುಸು ಚರ್ಚೆಯಾಗುತ್ತಿದೆ.

ಎಂಪಿ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಲಾಗಿತ್ತು. ಇದೀಗ ಬಮೂಲ್ ನಿರ್ದೇಶಕರ ಚುನಾವಣೆಗೆ ದೊಡ್ಡಬಳ್ಳಾಪುರದಲ್ಲಿ‌ ಮೈತ್ರಿ ಮರೆತು ಜೆಡಿಎಸ್ ನಿಂದ ಹುಸ್ಕೂರು ಆನಂದ್ ಹಾಗೂ ಬಿಜೆಪಿಯಿಂದ ಬಿ.ಸಿ ಆನಂದ್ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ಹಿನ್ನೆಲೆ ಶಾಸಕ ಧೀರಜ್ ಮುನಿರಾಜ್ ಅವರ ನಿಲುವು ಯಾರ ಪರ ಇದೆ…? ಎಂಬ ಪ್ರಶ್ನೆಗೆ ಶಾಸಕರೇ ಉತ್ತರಿಸಿದ್ದಾರೆ, ಹುಸ್ಕೂರು ಆನಂದ್ ಅವರು ಯಾರು ಅಂತಾ ಗೊತ್ತಿಲ್ಲ, ಅವರು ವಾರದ ಹಿಂದೆ ಹಾಲಿನ ಡೈರಿ ಅಧ್ಯಕ್ಷ್ಯರಾದರು‌ ಎಂದು ಮೂರನೇ ವ್ಯಕ್ತಿಯಿಂದ ಗೊತ್ತಾಗಿದೆ. ಬಿಸಿ ಆನಂದಣ್ಣ ನನಗೆ ಎಂಎಲ್ಎ ಎಲೆಕ್ಷನ್ ನಿಂದ ಪರಿಚಯ, ಎಂಎಲ್ಎ ಹಾಗೂ ಎಂಪಿ ಚುನಾವಣೆ ಗೆಲ್ಲಲು ಅವರು ನಮಗೆ ಸಹಕರಿಸಿದ್ದಾರೆ. ಆದ್ದರಿಂದ ನಾವು ಅವರ ಪರ ಇರುತ್ತೇವೆ. ನಮ್ಮ ಕೈಲಾದಷ್ಟು ಸಹಕಾರ ನೀಡುತ್ತೇವೆ. ಇದರಲ್ಲಿ ಏನು ತಪ್ಪಿದೆ ಎಂದು ಹೇಳಿದ್ದಾರೆ.

ಆದರೆ, ಎಂಎಲ್ಎ ಹಾಗೂ ಎಂಪಿ ಚುನಾವಣೆ ಆದ ನಂತರ ಹುಸ್ಕೂರು ಆನಂದ್ ಅವರನ್ನ ಒಂದು ಎರೆಡು ಬಾರಿ ಭೇಟಿ ಆಗಿರಬಹುದು ಅಷ್ಟೇ, ಅವರಿಗೂ ನನಗೂ ಅಷ್ಟೋಂದು ಆತ್ಮಿಯತೆ ಇಲ್ಲ. ಡೈರಿ ನಿರ್ದೇಶಕ ಬಿ.ಸಿ.ಆನಂದಣ್ಣ ನಮ್ಮ ಪಾರ್ಟಿಗೆ ಬಂದು ಸೇರಿದ್ದಾರೆ. ಬಮೂಲ್ ಚುನಾವಣೆಯ ಲೆಕ್ಕಾಚಾರವನ್ನು ವರಿಷ್ಠರು ಮಾಡಲಿದ್ದಾರೆ. ನಾನು ಕೇವಲ ಒಬ್ಬ ಸಾಮಾನ್ಯ ಶಾಸಕ‌ ಮಾತ್ರ, ನನ್ನ ಪರವಾಗಿ, ಪಾರ್ಟಿ ಪರವಾಗಿ ಕೆಲಸ ಮಾಡಿದವರ ಜೊತೆ ನಿಂತು ಅವರ ಪರ ಕೆಲಸ‌ ಮಾಡುತ್ತೇನೆ. ನಾನು ಯಾರ‌ ನಡುವೆಯೂ ಅಂತರ ಕಾಯ್ದುಕೊಂಡಿಲ್ಲ. ನಮ್ಮ ಬಳಿಯೇ ಡೈರಿ ನಿರ್ದೇಶಕರು ಇದ್ದಾಗ ನಾವು ಬೇರೆಯವರ ಬಳಿ ನಾವು ಏಕೆ ಹೋಗಬೇಕು, ನನಗೆ ಅಂತಾ ಕೆಟ್ಟು ಬುದ್ದಿ ಇಲ್ಲ. ಬಿ.ಸಿ.ಆನಂದ್ ಅವರ ಬಗ್ಗೆ ಜನರಲ್ಲಿ ಒಳ್ಳೆ ಅಭಿಪ್ರಾಯವಿದೆ. ಅವರನ್ನು ಗೆಲ್ಲಿಸಿಕೊಂಡು ಬಂದೇ ಬರುತ್ತೇವೆ ಎಂದು ಹೇಳಿದರು.

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

6 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

6 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

7 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

12 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

18 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago