ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಬಿ.ಮುನೇಗೌಡ, ನನ್ನ ಹಿತ ಶತ್ರುಗಳು, ಒಳ ಶತ್ರುಗಳು, ಹಿಂದೆ-ಮುಂದೆ ಮಾತಾಡುವ ಶತ್ರುಗಳು ಸೇರಿದಂತೆ ಇತರರು ನನ್ನನ್ನು ಸೋಲಿಸಲು ಎಷ್ಟೇ ಕುತಂತ್ರ, ಷಡ್ಯಂತ್ರ ಮಾಡಿದ್ರೂ ಸಹ ಪ್ರಮಾಣಿಕತೆ, ಸತ್ಯ ಗೆದ್ದಿದೆ. ಇದಕ್ಕೆ ಸಹಕರಿಸಿದ ಎಲ್ಲರಿಗೂ ನನ್ನ ಧನ್ಯವಾದಗಳು ಎಂದು ಬಮೂಲ್ ಚುನಾವಣೆ ಗೆದ್ದ ಬಳಿಕ ಮೊದಲ ಬಾರಿಗೆ ಬಿ.ಸಿ ಆನಂದ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಗೆಲುವು ಸಾಧಿಸುವುದಕ್ಕೆ ಶಾಸಕ ಧೀರಜ್ ಮುನಿರಾಜ್ ಸಾರಥ್ಯ ವಹಿಸಿದ್ದರು. ಈ ಚುನಾವಣೆ ಸಾವು-ಬದುಕಿನ ನಡುವೆ ನಡೆದಂತಹ ಚುನಾವಣೆ, ನನಗೆ ಹಿತ ಶತ್ರುಗಳ ಕಾಟ ಹೆಚ್ಚಾಗಿತ್ತು. ನನ್ನ ಈ ಗೆಲುವಿಗೆ ಕಾರಣರಾದ ಡೈರಿ ಅಧ್ಯಕ್ಷರುಗಳು, ಹಾಲು ಉತ್ಪಾದಕರಿಗೆ, ಕಾರ್ಯದರ್ಶಿಗಳಿಗೆ ಸ್ನೇಹಿತರಿಗೆ ಧನ್ಯವಾದಗಳು, ನಾನು ಕಾಯಾ,ವಾಚಾ, ಮನಸಾ ಕೆಲಸ ಮಾಡಿ ರೈತರಪರ ನಿಂತು ರೈತನ ಮನೆ ಮಗನಾಗಿ ಕೆಲಸ ಮಾಡುತ್ತೇನೆ ಎಂದರು.
ಒಟ್ಟು 201 ಮತಗಳಲ್ಲಿ 156ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದ್ದಾರೆ. ಇವರ ಪ್ರತಿಸ್ಪರ್ಧಿ ಜೆಡಿಎಸ್ ಅಭ್ಯರ್ಥಿ ಹಸ್ಕೂರ್ ಟಿ.ಆನಂದ್ ಅವರು ಕೇವಲ 40 ಮತಗಳನ್ನು ಪಡೆದು ಪರಾಭಾವಗೊಂಡಿದ್ದಾರೆ. ಇನ್ನುಳಿದ 5 ಮತಗಳು ಅಸಿಂಧುಗೊಂಡಿವೆ..
ರಾಜಕೀಯ ಪಕ್ಷಗಳ ಭಿನ್ನಮತದ ಸುತ್ತ, ಅಧಿಕಾರ ಕುರ್ಚಿಯ ಹಾವು ಏಣಿ ಆಟದ ಸುತ್ತ, ಸ್ವಾಮೀಜಿಗಳ ಪೀಠದ ಸುತ್ತ, ಧರ್ಮಸ್ಥಳದ ನಿಗೂಢ…
ನಾಳೆ (ಜು.29) ರಂದು ದೊಡ್ಡಬಳ್ಳಾಪುರ ತಾಲೂಕಿನ ಪವಿತ್ರ ಹಾಗೂ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು…
ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ…
ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದ ಗ್ರಾಮ…
ಜೂನ್ 4 ರಂದು ಐಪಿಎಲ್ ಟ್ರೋಫಿ ಗೆದ್ದ ಆರ್ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ…
ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…