ಬಮೂಲ್ ಫಲಿತಾಂಶ: ಈ ಚುನಾವಣೆ ಸಾವು-ಬದುಕಿನ ನಡುವೆ ನಡೆದಂತಹ ಚುನಾವಣೆ- ನನಗೆ ಹಿತ, ಒಳ ಶತ್ರುಗಳ ಕಾಟ ಹೆಚ್ಚಾಗಿತ್ತು- ಕೊನೆಗೆ ಪ್ರಮಾಣಿಕತೆ, ಸತ್ಯ ಗೆದ್ದಿದೆ- ಬಿ.ಸಿ.ಆನಂದ್

ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಬಿ.ಮುನೇಗೌಡ, ನನ್ನ ಹಿತ ಶತ್ರುಗಳು, ಒಳ ಶತ್ರುಗಳು, ಹಿಂದೆ-ಮುಂದೆ ಮಾತಾಡುವ ಶತ್ರುಗಳು ಸೇರಿದಂತೆ ಇತರರು ನನ್ನನ್ನು ಸೋಲಿಸಲು ಎಷ್ಟೇ ಕುತಂತ್ರ, ಷಡ್ಯಂತ್ರ ಮಾಡಿದ್ರೂ ಸಹ ಪ್ರಮಾಣಿಕತೆ, ಸತ್ಯ ಗೆದ್ದಿದೆ. ಇದಕ್ಕೆ ಸಹಕರಿಸಿದ ಎಲ್ಲರಿಗೂ ನನ್ನ ಧನ್ಯವಾದಗಳು ಎಂದು ಬಮೂಲ್ ಚುನಾವಣೆ ಗೆದ್ದ ಬಳಿಕ ಮೊದಲ ಬಾರಿಗೆ ಬಿ.ಸಿ ಆನಂದ್ ಪ್ರತಿಕ್ರಿಯೆ ನೀಡಿದ್ದಾರೆ.

ಈ ಗೆಲುವು ಸಾಧಿಸುವುದಕ್ಕೆ ಶಾಸಕ ಧೀರಜ್ ಮುನಿರಾಜ್ ಸಾರಥ್ಯ ವಹಿಸಿದ್ದರು.‌ ಈ ಚುನಾವಣೆ ಸಾವು-ಬದುಕಿನ ನಡುವೆ ನಡೆದಂತಹ ಚುನಾವಣೆ, ನನಗೆ ಹಿತ ಶತ್ರುಗಳ ಕಾಟ ಹೆಚ್ಚಾಗಿತ್ತು. ನನ್ನ ಈ ಗೆಲುವಿಗೆ ಕಾರಣರಾದ ಡೈರಿ ಅಧ್ಯಕ್ಷರುಗಳು, ಹಾಲು ಉತ್ಪಾದಕರಿಗೆ, ಕಾರ್ಯದರ್ಶಿಗಳಿಗೆ ಸ್ನೇಹಿತರಿಗೆ ಧನ್ಯವಾದಗಳು, ನಾನು ಕಾಯಾ,ವಾಚಾ, ಮನಸಾ ಕೆಲಸ ಮಾಡಿ ರೈತರ‌ಪರ ನಿಂತು ರೈತನ ಮನೆ ಮಗನಾಗಿ ಕೆಲಸ ಮಾಡುತ್ತೇನೆ ಎಂದರು.

ಒಟ್ಟು 201 ಮತಗಳಲ್ಲಿ 156ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದ್ದಾರೆ. ಇವರ ಪ್ರತಿಸ್ಪರ್ಧಿ ಜೆಡಿಎಸ್ ಅಭ್ಯರ್ಥಿ ಹಸ್ಕೂರ್ ಟಿ.ಆನಂದ್ ಅವರು ಕೇವಲ 40 ಮತಗಳನ್ನು ಪಡೆದು ಪರಾಭಾವಗೊಂಡಿದ್ದಾರೆ. ಇನ್ನುಳಿದ 5 ಮತಗಳು ಅಸಿಂಧುಗೊಂಡಿವೆ..

Ramesh Babu

Journalist

Recent Posts

ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳ ವಿವೇಚನೆ ಮತ್ತು ಜವಾಬ್ದಾರಿ‌……..

ರಾಜಕೀಯ ಪಕ್ಷಗಳ ಭಿನ್ನಮತದ ಸುತ್ತ, ಅಧಿಕಾರ ಕುರ್ಚಿಯ ಹಾವು ಏಣಿ ಆಟದ ಸುತ್ತ, ಸ್ವಾಮೀಜಿಗಳ ಪೀಠದ ಸುತ್ತ, ಧರ್ಮಸ್ಥಳದ ನಿಗೂಢ…

6 hours ago

ನಾಳೆ (ಜು.29) ರಂದು ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ: ಭಕ್ತರಿಗೆ ವಿಶೇಷ ಆಹ್ವಾನ: ವಿಶೇಷ ಪೂಜೆ, ಭಕ್ತರಿಗೆ ಭೋಜನೆ ವ್ಯವಸ್ಥೆ

ನಾಳೆ (ಜು.29) ರಂದು ದೊಡ್ಡಬಳ್ಳಾಪುರ ತಾಲೂಕಿನ ಪವಿತ್ರ ಹಾಗೂ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು…

18 hours ago

“ಉತ್ತರ ಕರ್ನಾಟಕದ ಗ್ರಾಮೀಣ ನಾಗರ ಪಂಚಮಿ: ಹೆಣ್ಮಕ್ಕಳ ಜೋಕಾಲಿ ಸಂಭ್ರಮ”

ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ…

18 hours ago

ಗ್ರಾಪಂ ನೌಕರರ ಬೇಡಿಕೆಗಳ ಈಡೇರಿಕೆಗೆ ಜಿಪಂ ಮುಂದೆ ಪ್ರತಿಭಟನೆ

ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದ ಗ್ರಾಮ…

19 hours ago

RCB ಕಾಲ್ತುಳಿತ ಪ್ರಕರಣ: ಪೊಲಿಸ್ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆದ ರಾಜ್ಯ ಸರ್ಕಾರ: ಅಚ್ಚರಿ ಹಾಗೂ ಚರ್ಚೆಗೆ ಗ್ರಾಸವಾದ ಸರ್ಕಾರದ ನಡೆ

ಜೂನ್ 4 ರಂದು ಐಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ…

20 hours ago

ದೇವಸ್ಥಾನದಲ್ಲಿ ಕಳ್ಳನ ಕೈಚಳಕ: ಬೈಕ್ ಸಮೇತ ಕಳ್ಳನ ಬಂಧನ

ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…

23 hours ago