ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಬಿ.ಮುನೇಗೌಡ, ನನ್ನ ಹಿತ ಶತ್ರುಗಳು, ಒಳ ಶತ್ರುಗಳು, ಹಿಂದೆ-ಮುಂದೆ ಮಾತಾಡುವ ಶತ್ರುಗಳು ಸೇರಿದಂತೆ ಇತರರು ನನ್ನನ್ನು ಸೋಲಿಸಲು ಎಷ್ಟೇ ಕುತಂತ್ರ, ಷಡ್ಯಂತ್ರ ಮಾಡಿದ್ರೂ ಸಹ ಪ್ರಮಾಣಿಕತೆ, ಸತ್ಯ ಗೆದ್ದಿದೆ. ಇದಕ್ಕೆ ಸಹಕರಿಸಿದ ಎಲ್ಲರಿಗೂ ನನ್ನ ಧನ್ಯವಾದಗಳು ಎಂದು ಬಮೂಲ್ ಚುನಾವಣೆ ಗೆದ್ದ ಬಳಿಕ ಮೊದಲ ಬಾರಿಗೆ ಬಿ.ಸಿ ಆನಂದ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಗೆಲುವು ಸಾಧಿಸುವುದಕ್ಕೆ ಶಾಸಕ ಧೀರಜ್ ಮುನಿರಾಜ್ ಸಾರಥ್ಯ ವಹಿಸಿದ್ದರು. ಈ ಚುನಾವಣೆ ಸಾವು-ಬದುಕಿನ ನಡುವೆ ನಡೆದಂತಹ ಚುನಾವಣೆ, ನನಗೆ ಹಿತ ಶತ್ರುಗಳ ಕಾಟ ಹೆಚ್ಚಾಗಿತ್ತು. ನನ್ನ ಈ ಗೆಲುವಿಗೆ ಕಾರಣರಾದ ಡೈರಿ ಅಧ್ಯಕ್ಷರುಗಳು, ಹಾಲು ಉತ್ಪಾದಕರಿಗೆ, ಕಾರ್ಯದರ್ಶಿಗಳಿಗೆ ಸ್ನೇಹಿತರಿಗೆ ಧನ್ಯವಾದಗಳು, ನಾನು ಕಾಯಾ,ವಾಚಾ, ಮನಸಾ ಕೆಲಸ ಮಾಡಿ ರೈತರಪರ ನಿಂತು ರೈತನ ಮನೆ ಮಗನಾಗಿ ಕೆಲಸ ಮಾಡುತ್ತೇನೆ ಎಂದರು.
ಒಟ್ಟು 201 ಮತಗಳಲ್ಲಿ 156ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದ್ದಾರೆ. ಇವರ ಪ್ರತಿಸ್ಪರ್ಧಿ ಜೆಡಿಎಸ್ ಅಭ್ಯರ್ಥಿ ಹಸ್ಕೂರ್ ಟಿ.ಆನಂದ್ ಅವರು ಕೇವಲ 40 ಮತಗಳನ್ನು ಪಡೆದು ಪರಾಭಾವಗೊಂಡಿದ್ದಾರೆ. ಇನ್ನುಳಿದ 5 ಮತಗಳು ಅಸಿಂಧುಗೊಂಡಿವೆ..
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…