ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಬಿ.ಮುನೇಗೌಡ, ನನ್ನ ಹಿತ ಶತ್ರುಗಳು, ಒಳ ಶತ್ರುಗಳು, ಹಿಂದೆ-ಮುಂದೆ ಮಾತಾಡುವ ಶತ್ರುಗಳು ಸೇರಿದಂತೆ ಇತರರು ನನ್ನನ್ನು ಸೋಲಿಸಲು ಎಷ್ಟೇ ಕುತಂತ್ರ, ಷಡ್ಯಂತ್ರ ಮಾಡಿದ್ರೂ ಸಹ ಪ್ರಮಾಣಿಕತೆ, ಸತ್ಯ ಗೆದ್ದಿದೆ. ಇದಕ್ಕೆ ಸಹಕರಿಸಿದ ಎಲ್ಲರಿಗೂ ನನ್ನ ಧನ್ಯವಾದಗಳು ಎಂದು ಬಮೂಲ್ ಚುನಾವಣೆ ಗೆದ್ದ ಬಳಿಕ ಮೊದಲ ಬಾರಿಗೆ ಬಿ.ಸಿ ಆನಂದ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಗೆಲುವು ಸಾಧಿಸುವುದಕ್ಕೆ ಶಾಸಕ ಧೀರಜ್ ಮುನಿರಾಜ್ ಸಾರಥ್ಯ ವಹಿಸಿದ್ದರು. ಈ ಚುನಾವಣೆ ಸಾವು-ಬದುಕಿನ ನಡುವೆ ನಡೆದಂತಹ ಚುನಾವಣೆ, ನನಗೆ ಹಿತ ಶತ್ರುಗಳ ಕಾಟ ಹೆಚ್ಚಾಗಿತ್ತು. ನನ್ನ ಈ ಗೆಲುವಿಗೆ ಕಾರಣರಾದ ಡೈರಿ ಅಧ್ಯಕ್ಷರುಗಳು, ಹಾಲು ಉತ್ಪಾದಕರಿಗೆ, ಕಾರ್ಯದರ್ಶಿಗಳಿಗೆ ಸ್ನೇಹಿತರಿಗೆ ಧನ್ಯವಾದಗಳು, ನಾನು ಕಾಯಾ,ವಾಚಾ, ಮನಸಾ ಕೆಲಸ ಮಾಡಿ ರೈತರಪರ ನಿಂತು ರೈತನ ಮನೆ ಮಗನಾಗಿ ಕೆಲಸ ಮಾಡುತ್ತೇನೆ ಎಂದರು.
ಒಟ್ಟು 201 ಮತಗಳಲ್ಲಿ 156ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದ್ದಾರೆ. ಇವರ ಪ್ರತಿಸ್ಪರ್ಧಿ ಜೆಡಿಎಸ್ ಅಭ್ಯರ್ಥಿ ಹಸ್ಕೂರ್ ಟಿ.ಆನಂದ್ ಅವರು ಕೇವಲ 40 ಮತಗಳನ್ನು ಪಡೆದು ಪರಾಭಾವಗೊಂಡಿದ್ದಾರೆ. ಇನ್ನುಳಿದ 5 ಮತಗಳು ಅಸಿಂಧುಗೊಂಡಿವೆ..
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…