ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಬಿ.ಮುನೇಗೌಡ, ನನ್ನ ಹಿತ ಶತ್ರುಗಳು, ಒಳ ಶತ್ರುಗಳು, ಹಿಂದೆ-ಮುಂದೆ ಮಾತಾಡುವ ಶತ್ರುಗಳು ಸೇರಿದಂತೆ ಇತರರು ನನ್ನನ್ನು ಸೋಲಿಸಲು ಎಷ್ಟೇ ಕುತಂತ್ರ, ಷಡ್ಯಂತ್ರ ಮಾಡಿದ್ರೂ ಸಹ ಪ್ರಮಾಣಿಕತೆ, ಸತ್ಯ ಗೆದ್ದಿದೆ. ಇದಕ್ಕೆ ಸಹಕರಿಸಿದ ಎಲ್ಲರಿಗೂ ನನ್ನ ಧನ್ಯವಾದಗಳು ಎಂದು ಬಮೂಲ್ ಚುನಾವಣೆ ಗೆದ್ದ ಬಳಿಕ ಮೊದಲ ಬಾರಿಗೆ ಬಿ.ಸಿ ಆನಂದ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಗೆಲುವು ಸಾಧಿಸುವುದಕ್ಕೆ ಶಾಸಕ ಧೀರಜ್ ಮುನಿರಾಜ್ ಸಾರಥ್ಯ ವಹಿಸಿದ್ದರು. ಈ ಚುನಾವಣೆ ಸಾವು-ಬದುಕಿನ ನಡುವೆ ನಡೆದಂತಹ ಚುನಾವಣೆ, ನನಗೆ ಹಿತ ಶತ್ರುಗಳ ಕಾಟ ಹೆಚ್ಚಾಗಿತ್ತು. ನನ್ನ ಈ ಗೆಲುವಿಗೆ ಕಾರಣರಾದ ಡೈರಿ ಅಧ್ಯಕ್ಷರುಗಳು, ಹಾಲು ಉತ್ಪಾದಕರಿಗೆ, ಕಾರ್ಯದರ್ಶಿಗಳಿಗೆ ಸ್ನೇಹಿತರಿಗೆ ಧನ್ಯವಾದಗಳು, ನಾನು ಕಾಯಾ,ವಾಚಾ, ಮನಸಾ ಕೆಲಸ ಮಾಡಿ ರೈತರಪರ ನಿಂತು ರೈತನ ಮನೆ ಮಗನಾಗಿ ಕೆಲಸ ಮಾಡುತ್ತೇನೆ ಎಂದರು.
ಒಟ್ಟು 201 ಮತಗಳಲ್ಲಿ 156ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದ್ದಾರೆ. ಇವರ ಪ್ರತಿಸ್ಪರ್ಧಿ ಜೆಡಿಎಸ್ ಅಭ್ಯರ್ಥಿ ಹಸ್ಕೂರ್ ಟಿ.ಆನಂದ್ ಅವರು ಕೇವಲ 40 ಮತಗಳನ್ನು ಪಡೆದು ಪರಾಭಾವಗೊಂಡಿದ್ದಾರೆ. ಇನ್ನುಳಿದ 5 ಮತಗಳು ಅಸಿಂಧುಗೊಂಡಿವೆ..
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…