ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಬಿ.ಮುನೇಗೌಡ, ನನ್ನ ಹಿತ ಶತ್ರುಗಳು, ಒಳ ಶತ್ರುಗಳು, ಹಿಂದೆ-ಮುಂದೆ ಮಾತಾಡುವ ಶತ್ರುಗಳು ಸೇರಿದಂತೆ ಇತರರು ನನ್ನನ್ನು ಸೋಲಿಸಲು ಎಷ್ಟೇ ಕುತಂತ್ರ, ಷಡ್ಯಂತ್ರ ಮಾಡಿದ್ರೂ ಸಹ ಪ್ರಮಾಣಿಕತೆ, ಸತ್ಯ ಗೆದ್ದಿದೆ. ಇದಕ್ಕೆ ಸಹಕರಿಸಿದ ಎಲ್ಲರಿಗೂ ನನ್ನ ಧನ್ಯವಾದಗಳು ಎಂದು ಬಮೂಲ್ ಚುನಾವಣೆ ಗೆದ್ದ ಬಳಿಕ ಮೊದಲ ಬಾರಿಗೆ ಬಿ.ಸಿ ಆನಂದ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಗೆಲುವು ಸಾಧಿಸುವುದಕ್ಕೆ ಶಾಸಕ ಧೀರಜ್ ಮುನಿರಾಜ್ ಸಾರಥ್ಯ ವಹಿಸಿದ್ದರು. ಈ ಚುನಾವಣೆ ಸಾವು-ಬದುಕಿನ ನಡುವೆ ನಡೆದಂತಹ ಚುನಾವಣೆ, ನನಗೆ ಹಿತ ಶತ್ರುಗಳ ಕಾಟ ಹೆಚ್ಚಾಗಿತ್ತು. ನನ್ನ ಈ ಗೆಲುವಿಗೆ ಕಾರಣರಾದ ಡೈರಿ ಅಧ್ಯಕ್ಷರುಗಳು, ಹಾಲು ಉತ್ಪಾದಕರಿಗೆ, ಕಾರ್ಯದರ್ಶಿಗಳಿಗೆ ಸ್ನೇಹಿತರಿಗೆ ಧನ್ಯವಾದಗಳು, ನಾನು ಕಾಯಾ,ವಾಚಾ, ಮನಸಾ ಕೆಲಸ ಮಾಡಿ ರೈತರಪರ ನಿಂತು ರೈತನ ಮನೆ ಮಗನಾಗಿ ಕೆಲಸ ಮಾಡುತ್ತೇನೆ ಎಂದರು.
ಒಟ್ಟು 201 ಮತಗಳಲ್ಲಿ 156ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದ್ದಾರೆ. ಇವರ ಪ್ರತಿಸ್ಪರ್ಧಿ ಜೆಡಿಎಸ್ ಅಭ್ಯರ್ಥಿ ಹಸ್ಕೂರ್ ಟಿ.ಆನಂದ್ ಅವರು ಕೇವಲ 40 ಮತಗಳನ್ನು ಪಡೆದು ಪರಾಭಾವಗೊಂಡಿದ್ದಾರೆ. ಇನ್ನುಳಿದ 5 ಮತಗಳು ಅಸಿಂಧುಗೊಂಡಿವೆ..
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…