ಹಾಲು ಉತ್ಪಾದಕರಿಂದ ಕೇವಲ ಹಾಲನ್ನು ಕೊಳ್ಳುವ ವ್ಯವಹಾರ ಮಾತ್ರ ಮಾಡದೆ ಅವರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಬಮೂಲ್ ಮತ್ತು ಕೆಎಂಎಫ್ ರೂಪಿಸಿದ್ದು ಅವುಗಳನ್ನು ಸದ್ಭಳಕೆ ಮಾಡಿಕೊಂಡು ರೈತರು ಆರ್ಥಿಕವಾಗಿ ಸದೃಢರಾಗಬೇಕೆಂದು ಕೆಎಂಎಫ್ ಮತ್ತು ಬಮೂಲ್ ನಿರ್ದೇಶಕ ಬಿಸಿ ಆನಂದ್ ಕುಮಾರ್ ತಿಳಿಸಿದರು.
ನಗರದ ಡಾ.ಬಾಬು ಜಗ ಜೀವನ್ ರಾಂ ಭವನದಲ್ಲಿ ಬೆಂಗಳೂರು ಹಾಲು ಒಕ್ಕೂಟ ಹಾಗೂ ಬಮೂಲ್ ಕಲ್ಯಾಣ ಟ್ರಸ್ಟ್ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬಮೂಲ್
ರೈತರೊಂದಿಗೆ ಕೇವಲ ಹಾಲು ಕೊಳ್ಳುವ ವ್ಯಾಪಾರ ಮಾಡದೆ ಬಂದ ಲಾಭವನ್ನು ರೈತರಿಗೆ ನೀಡಲಾಗುತ್ತದೆ, ಹಾಗೆಯೇ ಪ್ರತಿಭಾ ಪುರಸ್ಕಾರ, ವಿಮಾ ಯೋಜನೆ, ಹೈನುಗಾರಿಕೆ ಯಂತ್ರಗಳಿಗೆ ಸಹಾಯಧನ, ತರಬೇತಿ ಹೀಗೆ ಹಲವಾರು ಯೋಜನೆಗಳಿಗೆ ಬಮೂಲ್ ಅನುದಾನ ಒದಗಿಸುತ್ತಿದೆ ಎಂದರು.
ಎಂಪಿಸಿಎಸ್ ಸಂಘದ ಕಾರ್ಯದರ್ಶಿಗಳು ಹಾಗೂ ಸಿಬ್ಬಂದಿಗಳು ಬಮೂಲ್ನಿಂದ ಸಿಗುವ ಸವಲತ್ತುಗಳ ಬಗ್ಗೆ ರೈತರಿಗೆ ತಿಳಿಸಿ, ಅಗತ್ಯವಿದ್ದವರಿಗೆ ಅವುಗಳನ್ನು ತಲುಪಿಸುವ ಕೆಲಸ ಮಾಡಬೇಕು, ಯಾರೂ ಈ ಯೋಜನೆಗಳಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದರು.
ಶಾಸಕ ವೆಂಕಟರಮಣಯ್ಯ ಮಾತನಾಡಿ ಹೈನುಗಾರಿಕೆಗೆ ಕಾಂಗ್ರೆಸ್ ಸರಕಾರ ಹೆಚ್ಚಿನ ಪ್ರೋತ್ಸಾಹ ನೀಡಿತ್ತು. ಬೆಲೆ ಏರಿಕೆ ಯಿಂದಾಗಿ ಹೈನುಗಾರಿಕೆಯಿಂದ ರೈತರು ವಿಮುಖರಾಗುತ್ತಿರುವುದು ದುರಂತ. ಕಾಂಗ್ರೆಸ್ ಸರಕಾರ ರೈತರ ಬಳಕೆಯ ಅನೇಕ ವಸ್ತುಗಳಿಗೆ ತೆರಿಗೆ ವಿಧಿಸಿರಲಿಲ್ಲ. ಈಗ ಹಿಂಡಿ-ಬೂಸ ದಿಂದ ಪ್ರತಿಯೊಂದಕ್ಕೂ ತೆರಿಗೆ ವಿಧಿಸಿ ರೈತರನ್ನು ಬೀದಿಗೆ ತರುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಟಿಎಪಿಎಂಸಿಎಸ್ ಅಧ್ಯಕ್ಷ ಅಂಜನೇಗೌಡ, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಲಕ್ಷ್ಮೀನಾರಾಯಣ, ಮುಖಂಡರಾದ ರಾಮಕೃಷ್ಣ, ಕಸವನಹಳ್ಳಿ ಅಂಬರೀಶ್, ವೆಂಕಟೇಶ್ ಮತ್ತಿತರರು ಇದ್ದರು.
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…
ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್ಕುಮಾರ್ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…
ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…