ಬಮೂಲ್ ಮತ್ತು ಬಮೂಲ್ ಕಲ್ಯಾಣ ಟ್ರಸ್ಟ್ ವತಿಯಿಂದ ಪ್ರತಿಭಾ ಪುರಸ್ಕಾರ; ವಿದ್ಯಾರ್ಥಿಗಳಿಗೆ ರೂ. 12 ಲಕ್ಷ 72 ಸಾವಿರ ಪ್ರೋತ್ಸಾಹಧನ ವಿತರಣೆ

ಹಾಲು ಉತ್ಪಾದಕರಿಂದ ಕೇವಲ ಹಾಲನ್ನು ಕೊಳ್ಳುವ ವ್ಯವಹಾರ ಮಾತ್ರ ಮಾಡದೆ ಅವರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಬಮೂಲ್‌ ಮತ್ತು ಕೆಎಂಎಫ್ ರೂಪಿಸಿದ್ದು ಅವುಗಳನ್ನು ಸದ್ಭಳಕೆ ಮಾಡಿಕೊಂಡು ರೈತರು ಆರ್ಥಿಕವಾಗಿ ಸದೃಢರಾಗಬೇಕೆಂದು ಕೆಎಂಎಫ್ ಮತ್ತು ಬಮೂಲ್ ನಿರ್ದೇಶಕ ಬಿಸಿ ಆನಂದ್ ಕುಮಾರ್ ತಿಳಿಸಿದರು.

ನಗರದ ಡಾ.ಬಾಬು ಜಗ ಜೀವನ್ ರಾಂ ಭವನದಲ್ಲಿ ಬೆಂಗಳೂರು ಹಾಲು ಒಕ್ಕೂಟ ಹಾಗೂ ಬಮೂಲ್ ಕಲ್ಯಾಣ ಟ್ರಸ್ಟ್ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬಮೂಲ್
ರೈತರೊಂದಿಗೆ ಕೇವಲ ಹಾಲು ಕೊಳ್ಳುವ ವ್ಯಾಪಾರ ಮಾಡದೆ ಬಂದ ಲಾಭವನ್ನು ರೈತರಿಗೆ ನೀಡಲಾಗುತ್ತದೆ, ಹಾಗೆಯೇ ಪ್ರತಿಭಾ ಪುರಸ್ಕಾರ, ವಿಮಾ ಯೋಜನೆ, ಹೈನುಗಾರಿಕೆ ಯಂತ್ರಗಳಿಗೆ ಸಹಾಯಧನ, ತರಬೇತಿ ಹೀಗೆ ಹಲವಾರು ಯೋಜನೆಗಳಿಗೆ ಬಮೂಲ್‌ ಅನುದಾನ ಒದಗಿಸುತ್ತಿದೆ ಎಂದರು.

‌ಎಂಪಿಸಿಎಸ್ ಸಂಘದ ಕಾರ್ಯದರ್ಶಿಗಳು ಹಾಗೂ ಸಿಬ್ಬಂದಿಗಳು ಬಮೂಲ್‌ನಿಂದ ಸಿಗುವ ಸವಲತ್ತುಗಳ ಬಗ್ಗೆ ರೈತರಿಗೆ ತಿಳಿಸಿ, ಅಗತ್ಯವಿದ್ದವರಿಗೆ ಅವುಗಳನ್ನು ತಲುಪಿಸುವ ಕೆಲಸ ಮಾಡಬೇಕು, ಯಾರೂ ಈ ಯೋಜನೆಗಳಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದರು.

ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಜೀವನದಲ್ಲಿ ರ್ಯಾಂಕ್, ಗೋಲ್ಡ್ ಮೆಡಲ್ ಗಳನ್ನು ಪಡೆಯದೆ ಇದ್ದರೂ ಪರವಾಗಿಲ್ಲ, ತಂದೆ ತಾಯಿಗಳಿಗೆ ಗೌರವ ಬರುವಂತ ಕೆಲಸ ಮಾಡಿ. ವಿದ್ಯೆ ಜೊತೆಗೆ ವಿನಯವನ್ನು ಕಲಿಯಬೇಕು. ನಿಮ್ಮ ನಡೆ-ನುಡಿ ಶುದ್ಧವಾಗಿರಬೇಕು. ವಿದ್ಯಾರ್ಥಿಗಳು ಉತ್ತಮ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ಶ್ರಮಿಸಬೇಕೆ ವಿನಃ ದುಶ್ಚಟಗಳಿಗೆ ದಾಸರಾಗಿ ತಪ್ಪು ದಾರಿ ತುಳಿಯಬಾರದು ಬಿಸಿ ಆನಂದ್ ಕುಮಾರ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು

ಶಾಸಕ ವೆಂಕಟರಮಣಯ್ಯ ಮಾತನಾಡಿ ಹೈನುಗಾರಿಕೆಗೆ ಕಾಂಗ್ರೆಸ್ ಸರಕಾರ ಹೆಚ್ಚಿನ ಪ್ರೋತ್ಸಾಹ ನೀಡಿತ್ತು. ಬೆಲೆ ಏರಿಕೆ ಯಿಂದಾಗಿ ಹೈನುಗಾರಿಕೆಯಿಂದ ರೈತರು ವಿಮುಖರಾಗುತ್ತಿರುವುದು ದುರಂತ. ಕಾಂಗ್ರೆಸ್ ಸರಕಾರ ರೈತರ ಬಳಕೆಯ ಅನೇಕ ವಸ್ತುಗಳಿಗೆ ತೆರಿಗೆ ವಿಧಿಸಿರಲಿಲ್ಲ. ಈಗ ಹಿಂಡಿ-ಬೂಸ ದಿಂದ ಪ್ರತಿಯೊಂದಕ್ಕೂ ತೆರಿಗೆ ವಿಧಿಸಿ ರೈತರನ್ನು ಬೀದಿಗೆ ತರುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೆಎಂಎಫ್ ನಿರ್ದೇಶಕ ಬಿಸಿ ಆನಂದ್ ಕುಮಾರ್ ಅವರು ವೈಯಕ್ತಿಕವಾಗಿ 135 ವಿದ್ಯಾರ್ಥಿಗಳಿಗೆ ತಲಾ ಎರಡು ಸಾವಿರ ರೂ.ಗಳನ್ನು ಪ್ರೋತ್ಸಾಹಧನವಾಗಿ ವಿತರಣೆ ಜೊತೆಗೆ ಟ್ರಸ್ಟ್ ವತಿಯಿಂದ ವಿವಿಧ ವಿದ್ಯಾರ್ಥಿಗಳಿಗೆ ಒಟ್ಟು 12 ಲಕ್ಷ 72 ಸಾವಿರ ರೂ.ಗಳನ್ನು ಪ್ರತಿಭಾ ಪುರಸ್ಕಾರ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಟಿಎಪಿಎಂಸಿಎಸ್ ಅಧ್ಯಕ್ಷ ಅಂಜನೇಗೌಡ, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಲಕ್ಷ್ಮೀನಾರಾಯಣ, ಮುಖಂಡರಾದ ರಾಮಕೃಷ್ಣ, ಕಸವನಹಳ್ಳಿ ಅಂಬರೀಶ್, ವೆಂಕಟೇಶ್ ಮತ್ತಿತರರು ಇದ್ದರು.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

9 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

10 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

17 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

17 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

23 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago