ಹಾಲು ಉತ್ಪಾದಕರಿಂದ ಕೇವಲ ಹಾಲನ್ನು ಕೊಳ್ಳುವ ವ್ಯವಹಾರ ಮಾತ್ರ ಮಾಡದೆ ಅವರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಬಮೂಲ್ ಮತ್ತು ಕೆಎಂಎಫ್ ರೂಪಿಸಿದ್ದು ಅವುಗಳನ್ನು ಸದ್ಭಳಕೆ ಮಾಡಿಕೊಂಡು ರೈತರು ಆರ್ಥಿಕವಾಗಿ ಸದೃಢರಾಗಬೇಕೆಂದು ಕೆಎಂಎಫ್ ಮತ್ತು ಬಮೂಲ್ ನಿರ್ದೇಶಕ ಬಿಸಿ ಆನಂದ್ ಕುಮಾರ್ ತಿಳಿಸಿದರು.
ನಗರದ ಡಾ.ಬಾಬು ಜಗ ಜೀವನ್ ರಾಂ ಭವನದಲ್ಲಿ ಬೆಂಗಳೂರು ಹಾಲು ಒಕ್ಕೂಟ ಹಾಗೂ ಬಮೂಲ್ ಕಲ್ಯಾಣ ಟ್ರಸ್ಟ್ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬಮೂಲ್
ರೈತರೊಂದಿಗೆ ಕೇವಲ ಹಾಲು ಕೊಳ್ಳುವ ವ್ಯಾಪಾರ ಮಾಡದೆ ಬಂದ ಲಾಭವನ್ನು ರೈತರಿಗೆ ನೀಡಲಾಗುತ್ತದೆ, ಹಾಗೆಯೇ ಪ್ರತಿಭಾ ಪುರಸ್ಕಾರ, ವಿಮಾ ಯೋಜನೆ, ಹೈನುಗಾರಿಕೆ ಯಂತ್ರಗಳಿಗೆ ಸಹಾಯಧನ, ತರಬೇತಿ ಹೀಗೆ ಹಲವಾರು ಯೋಜನೆಗಳಿಗೆ ಬಮೂಲ್ ಅನುದಾನ ಒದಗಿಸುತ್ತಿದೆ ಎಂದರು.
ಎಂಪಿಸಿಎಸ್ ಸಂಘದ ಕಾರ್ಯದರ್ಶಿಗಳು ಹಾಗೂ ಸಿಬ್ಬಂದಿಗಳು ಬಮೂಲ್ನಿಂದ ಸಿಗುವ ಸವಲತ್ತುಗಳ ಬಗ್ಗೆ ರೈತರಿಗೆ ತಿಳಿಸಿ, ಅಗತ್ಯವಿದ್ದವರಿಗೆ ಅವುಗಳನ್ನು ತಲುಪಿಸುವ ಕೆಲಸ ಮಾಡಬೇಕು, ಯಾರೂ ಈ ಯೋಜನೆಗಳಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದರು.
ಶಾಸಕ ವೆಂಕಟರಮಣಯ್ಯ ಮಾತನಾಡಿ ಹೈನುಗಾರಿಕೆಗೆ ಕಾಂಗ್ರೆಸ್ ಸರಕಾರ ಹೆಚ್ಚಿನ ಪ್ರೋತ್ಸಾಹ ನೀಡಿತ್ತು. ಬೆಲೆ ಏರಿಕೆ ಯಿಂದಾಗಿ ಹೈನುಗಾರಿಕೆಯಿಂದ ರೈತರು ವಿಮುಖರಾಗುತ್ತಿರುವುದು ದುರಂತ. ಕಾಂಗ್ರೆಸ್ ಸರಕಾರ ರೈತರ ಬಳಕೆಯ ಅನೇಕ ವಸ್ತುಗಳಿಗೆ ತೆರಿಗೆ ವಿಧಿಸಿರಲಿಲ್ಲ. ಈಗ ಹಿಂಡಿ-ಬೂಸ ದಿಂದ ಪ್ರತಿಯೊಂದಕ್ಕೂ ತೆರಿಗೆ ವಿಧಿಸಿ ರೈತರನ್ನು ಬೀದಿಗೆ ತರುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಟಿಎಪಿಎಂಸಿಎಸ್ ಅಧ್ಯಕ್ಷ ಅಂಜನೇಗೌಡ, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಲಕ್ಷ್ಮೀನಾರಾಯಣ, ಮುಖಂಡರಾದ ರಾಮಕೃಷ್ಣ, ಕಸವನಹಳ್ಳಿ ಅಂಬರೀಶ್, ವೆಂಕಟೇಶ್ ಮತ್ತಿತರರು ಇದ್ದರು.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…