ಹಾಲು ಉತ್ಪಾದಕರಿಂದ ಕೇವಲ ಹಾಲನ್ನು ಕೊಳ್ಳುವ ವ್ಯವಹಾರ ಮಾತ್ರ ಮಾಡದೆ ಅವರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಬಮೂಲ್ ಮತ್ತು ಕೆಎಂಎಫ್ ರೂಪಿಸಿದ್ದು ಅವುಗಳನ್ನು ಸದ್ಭಳಕೆ ಮಾಡಿಕೊಂಡು ರೈತರು ಆರ್ಥಿಕವಾಗಿ ಸದೃಢರಾಗಬೇಕೆಂದು ಕೆಎಂಎಫ್ ಮತ್ತು ಬಮೂಲ್ ನಿರ್ದೇಶಕ ಬಿಸಿ ಆನಂದ್ ಕುಮಾರ್ ತಿಳಿಸಿದರು.
ನಗರದ ಡಾ.ಬಾಬು ಜಗ ಜೀವನ್ ರಾಂ ಭವನದಲ್ಲಿ ಬೆಂಗಳೂರು ಹಾಲು ಒಕ್ಕೂಟ ಹಾಗೂ ಬಮೂಲ್ ಕಲ್ಯಾಣ ಟ್ರಸ್ಟ್ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬಮೂಲ್
ರೈತರೊಂದಿಗೆ ಕೇವಲ ಹಾಲು ಕೊಳ್ಳುವ ವ್ಯಾಪಾರ ಮಾಡದೆ ಬಂದ ಲಾಭವನ್ನು ರೈತರಿಗೆ ನೀಡಲಾಗುತ್ತದೆ, ಹಾಗೆಯೇ ಪ್ರತಿಭಾ ಪುರಸ್ಕಾರ, ವಿಮಾ ಯೋಜನೆ, ಹೈನುಗಾರಿಕೆ ಯಂತ್ರಗಳಿಗೆ ಸಹಾಯಧನ, ತರಬೇತಿ ಹೀಗೆ ಹಲವಾರು ಯೋಜನೆಗಳಿಗೆ ಬಮೂಲ್ ಅನುದಾನ ಒದಗಿಸುತ್ತಿದೆ ಎಂದರು.
ಎಂಪಿಸಿಎಸ್ ಸಂಘದ ಕಾರ್ಯದರ್ಶಿಗಳು ಹಾಗೂ ಸಿಬ್ಬಂದಿಗಳು ಬಮೂಲ್ನಿಂದ ಸಿಗುವ ಸವಲತ್ತುಗಳ ಬಗ್ಗೆ ರೈತರಿಗೆ ತಿಳಿಸಿ, ಅಗತ್ಯವಿದ್ದವರಿಗೆ ಅವುಗಳನ್ನು ತಲುಪಿಸುವ ಕೆಲಸ ಮಾಡಬೇಕು, ಯಾರೂ ಈ ಯೋಜನೆಗಳಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದರು.
ಶಾಸಕ ವೆಂಕಟರಮಣಯ್ಯ ಮಾತನಾಡಿ ಹೈನುಗಾರಿಕೆಗೆ ಕಾಂಗ್ರೆಸ್ ಸರಕಾರ ಹೆಚ್ಚಿನ ಪ್ರೋತ್ಸಾಹ ನೀಡಿತ್ತು. ಬೆಲೆ ಏರಿಕೆ ಯಿಂದಾಗಿ ಹೈನುಗಾರಿಕೆಯಿಂದ ರೈತರು ವಿಮುಖರಾಗುತ್ತಿರುವುದು ದುರಂತ. ಕಾಂಗ್ರೆಸ್ ಸರಕಾರ ರೈತರ ಬಳಕೆಯ ಅನೇಕ ವಸ್ತುಗಳಿಗೆ ತೆರಿಗೆ ವಿಧಿಸಿರಲಿಲ್ಲ. ಈಗ ಹಿಂಡಿ-ಬೂಸ ದಿಂದ ಪ್ರತಿಯೊಂದಕ್ಕೂ ತೆರಿಗೆ ವಿಧಿಸಿ ರೈತರನ್ನು ಬೀದಿಗೆ ತರುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಟಿಎಪಿಎಂಸಿಎಸ್ ಅಧ್ಯಕ್ಷ ಅಂಜನೇಗೌಡ, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಲಕ್ಷ್ಮೀನಾರಾಯಣ, ಮುಖಂಡರಾದ ರಾಮಕೃಷ್ಣ, ಕಸವನಹಳ್ಳಿ ಅಂಬರೀಶ್, ವೆಂಕಟೇಶ್ ಮತ್ತಿತರರು ಇದ್ದರು.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…