ಬಮೂಲ್ ಮತ್ತು ಬಮೂಲ್ ಕಲ್ಯಾಣ ಟ್ರಸ್ಟ್ ವತಿಯಿಂದ ಪ್ರತಿಭಾ ಪುರಸ್ಕಾರ; ವಿದ್ಯಾರ್ಥಿಗಳಿಗೆ ರೂ. 12 ಲಕ್ಷ 72 ಸಾವಿರ ಪ್ರೋತ್ಸಾಹಧನ ವಿತರಣೆ

ಹಾಲು ಉತ್ಪಾದಕರಿಂದ ಕೇವಲ ಹಾಲನ್ನು ಕೊಳ್ಳುವ ವ್ಯವಹಾರ ಮಾತ್ರ ಮಾಡದೆ ಅವರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಬಮೂಲ್‌ ಮತ್ತು ಕೆಎಂಎಫ್ ರೂಪಿಸಿದ್ದು ಅವುಗಳನ್ನು ಸದ್ಭಳಕೆ ಮಾಡಿಕೊಂಡು ರೈತರು ಆರ್ಥಿಕವಾಗಿ ಸದೃಢರಾಗಬೇಕೆಂದು ಕೆಎಂಎಫ್ ಮತ್ತು ಬಮೂಲ್ ನಿರ್ದೇಶಕ ಬಿಸಿ ಆನಂದ್ ಕುಮಾರ್ ತಿಳಿಸಿದರು.

ನಗರದ ಡಾ.ಬಾಬು ಜಗ ಜೀವನ್ ರಾಂ ಭವನದಲ್ಲಿ ಬೆಂಗಳೂರು ಹಾಲು ಒಕ್ಕೂಟ ಹಾಗೂ ಬಮೂಲ್ ಕಲ್ಯಾಣ ಟ್ರಸ್ಟ್ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬಮೂಲ್
ರೈತರೊಂದಿಗೆ ಕೇವಲ ಹಾಲು ಕೊಳ್ಳುವ ವ್ಯಾಪಾರ ಮಾಡದೆ ಬಂದ ಲಾಭವನ್ನು ರೈತರಿಗೆ ನೀಡಲಾಗುತ್ತದೆ, ಹಾಗೆಯೇ ಪ್ರತಿಭಾ ಪುರಸ್ಕಾರ, ವಿಮಾ ಯೋಜನೆ, ಹೈನುಗಾರಿಕೆ ಯಂತ್ರಗಳಿಗೆ ಸಹಾಯಧನ, ತರಬೇತಿ ಹೀಗೆ ಹಲವಾರು ಯೋಜನೆಗಳಿಗೆ ಬಮೂಲ್‌ ಅನುದಾನ ಒದಗಿಸುತ್ತಿದೆ ಎಂದರು.

‌ಎಂಪಿಸಿಎಸ್ ಸಂಘದ ಕಾರ್ಯದರ್ಶಿಗಳು ಹಾಗೂ ಸಿಬ್ಬಂದಿಗಳು ಬಮೂಲ್‌ನಿಂದ ಸಿಗುವ ಸವಲತ್ತುಗಳ ಬಗ್ಗೆ ರೈತರಿಗೆ ತಿಳಿಸಿ, ಅಗತ್ಯವಿದ್ದವರಿಗೆ ಅವುಗಳನ್ನು ತಲುಪಿಸುವ ಕೆಲಸ ಮಾಡಬೇಕು, ಯಾರೂ ಈ ಯೋಜನೆಗಳಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದರು.

ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಜೀವನದಲ್ಲಿ ರ್ಯಾಂಕ್, ಗೋಲ್ಡ್ ಮೆಡಲ್ ಗಳನ್ನು ಪಡೆಯದೆ ಇದ್ದರೂ ಪರವಾಗಿಲ್ಲ, ತಂದೆ ತಾಯಿಗಳಿಗೆ ಗೌರವ ಬರುವಂತ ಕೆಲಸ ಮಾಡಿ. ವಿದ್ಯೆ ಜೊತೆಗೆ ವಿನಯವನ್ನು ಕಲಿಯಬೇಕು. ನಿಮ್ಮ ನಡೆ-ನುಡಿ ಶುದ್ಧವಾಗಿರಬೇಕು. ವಿದ್ಯಾರ್ಥಿಗಳು ಉತ್ತಮ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ಶ್ರಮಿಸಬೇಕೆ ವಿನಃ ದುಶ್ಚಟಗಳಿಗೆ ದಾಸರಾಗಿ ತಪ್ಪು ದಾರಿ ತುಳಿಯಬಾರದು ಬಿಸಿ ಆನಂದ್ ಕುಮಾರ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು

ಶಾಸಕ ವೆಂಕಟರಮಣಯ್ಯ ಮಾತನಾಡಿ ಹೈನುಗಾರಿಕೆಗೆ ಕಾಂಗ್ರೆಸ್ ಸರಕಾರ ಹೆಚ್ಚಿನ ಪ್ರೋತ್ಸಾಹ ನೀಡಿತ್ತು. ಬೆಲೆ ಏರಿಕೆ ಯಿಂದಾಗಿ ಹೈನುಗಾರಿಕೆಯಿಂದ ರೈತರು ವಿಮುಖರಾಗುತ್ತಿರುವುದು ದುರಂತ. ಕಾಂಗ್ರೆಸ್ ಸರಕಾರ ರೈತರ ಬಳಕೆಯ ಅನೇಕ ವಸ್ತುಗಳಿಗೆ ತೆರಿಗೆ ವಿಧಿಸಿರಲಿಲ್ಲ. ಈಗ ಹಿಂಡಿ-ಬೂಸ ದಿಂದ ಪ್ರತಿಯೊಂದಕ್ಕೂ ತೆರಿಗೆ ವಿಧಿಸಿ ರೈತರನ್ನು ಬೀದಿಗೆ ತರುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೆಎಂಎಫ್ ನಿರ್ದೇಶಕ ಬಿಸಿ ಆನಂದ್ ಕುಮಾರ್ ಅವರು ವೈಯಕ್ತಿಕವಾಗಿ 135 ವಿದ್ಯಾರ್ಥಿಗಳಿಗೆ ತಲಾ ಎರಡು ಸಾವಿರ ರೂ.ಗಳನ್ನು ಪ್ರೋತ್ಸಾಹಧನವಾಗಿ ವಿತರಣೆ ಜೊತೆಗೆ ಟ್ರಸ್ಟ್ ವತಿಯಿಂದ ವಿವಿಧ ವಿದ್ಯಾರ್ಥಿಗಳಿಗೆ ಒಟ್ಟು 12 ಲಕ್ಷ 72 ಸಾವಿರ ರೂ.ಗಳನ್ನು ಪ್ರತಿಭಾ ಪುರಸ್ಕಾರ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಟಿಎಪಿಎಂಸಿಎಸ್ ಅಧ್ಯಕ್ಷ ಅಂಜನೇಗೌಡ, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಲಕ್ಷ್ಮೀನಾರಾಯಣ, ಮುಖಂಡರಾದ ರಾಮಕೃಷ್ಣ, ಕಸವನಹಳ್ಳಿ ಅಂಬರೀಶ್, ವೆಂಕಟೇಶ್ ಮತ್ತಿತರರು ಇದ್ದರು.

Ramesh Babu

Journalist

Recent Posts

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

3 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

10 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

11 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

24 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

24 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

24 hours ago