ಹಾಲು ಉತ್ಪಾದಕರಿಂದ ಕೇವಲ ಹಾಲನ್ನು ಕೊಳ್ಳುವ ವ್ಯವಹಾರ ಮಾತ್ರ ಮಾಡದೆ ಅವರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಬಮೂಲ್ ಮತ್ತು ಕೆಎಂಎಫ್ ರೂಪಿಸಿದ್ದು ಅವುಗಳನ್ನು ಸದ್ಭಳಕೆ ಮಾಡಿಕೊಂಡು ರೈತರು ಆರ್ಥಿಕವಾಗಿ ಸದೃಢರಾಗಬೇಕೆಂದು ಕೆಎಂಎಫ್ ಮತ್ತು ಬಮೂಲ್ ನಿರ್ದೇಶಕ ಬಿಸಿ ಆನಂದ್ ಕುಮಾರ್ ತಿಳಿಸಿದರು.
ನಗರದ ಡಾ.ಬಾಬು ಜಗ ಜೀವನ್ ರಾಂ ಭವನದಲ್ಲಿ ಬೆಂಗಳೂರು ಹಾಲು ಒಕ್ಕೂಟ ಹಾಗೂ ಬಮೂಲ್ ಕಲ್ಯಾಣ ಟ್ರಸ್ಟ್ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬಮೂಲ್
ರೈತರೊಂದಿಗೆ ಕೇವಲ ಹಾಲು ಕೊಳ್ಳುವ ವ್ಯಾಪಾರ ಮಾಡದೆ ಬಂದ ಲಾಭವನ್ನು ರೈತರಿಗೆ ನೀಡಲಾಗುತ್ತದೆ, ಹಾಗೆಯೇ ಪ್ರತಿಭಾ ಪುರಸ್ಕಾರ, ವಿಮಾ ಯೋಜನೆ, ಹೈನುಗಾರಿಕೆ ಯಂತ್ರಗಳಿಗೆ ಸಹಾಯಧನ, ತರಬೇತಿ ಹೀಗೆ ಹಲವಾರು ಯೋಜನೆಗಳಿಗೆ ಬಮೂಲ್ ಅನುದಾನ ಒದಗಿಸುತ್ತಿದೆ ಎಂದರು.
ಎಂಪಿಸಿಎಸ್ ಸಂಘದ ಕಾರ್ಯದರ್ಶಿಗಳು ಹಾಗೂ ಸಿಬ್ಬಂದಿಗಳು ಬಮೂಲ್ನಿಂದ ಸಿಗುವ ಸವಲತ್ತುಗಳ ಬಗ್ಗೆ ರೈತರಿಗೆ ತಿಳಿಸಿ, ಅಗತ್ಯವಿದ್ದವರಿಗೆ ಅವುಗಳನ್ನು ತಲುಪಿಸುವ ಕೆಲಸ ಮಾಡಬೇಕು, ಯಾರೂ ಈ ಯೋಜನೆಗಳಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದರು.
ಶಾಸಕ ವೆಂಕಟರಮಣಯ್ಯ ಮಾತನಾಡಿ ಹೈನುಗಾರಿಕೆಗೆ ಕಾಂಗ್ರೆಸ್ ಸರಕಾರ ಹೆಚ್ಚಿನ ಪ್ರೋತ್ಸಾಹ ನೀಡಿತ್ತು. ಬೆಲೆ ಏರಿಕೆ ಯಿಂದಾಗಿ ಹೈನುಗಾರಿಕೆಯಿಂದ ರೈತರು ವಿಮುಖರಾಗುತ್ತಿರುವುದು ದುರಂತ. ಕಾಂಗ್ರೆಸ್ ಸರಕಾರ ರೈತರ ಬಳಕೆಯ ಅನೇಕ ವಸ್ತುಗಳಿಗೆ ತೆರಿಗೆ ವಿಧಿಸಿರಲಿಲ್ಲ. ಈಗ ಹಿಂಡಿ-ಬೂಸ ದಿಂದ ಪ್ರತಿಯೊಂದಕ್ಕೂ ತೆರಿಗೆ ವಿಧಿಸಿ ರೈತರನ್ನು ಬೀದಿಗೆ ತರುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಟಿಎಪಿಎಂಸಿಎಸ್ ಅಧ್ಯಕ್ಷ ಅಂಜನೇಗೌಡ, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಲಕ್ಷ್ಮೀನಾರಾಯಣ, ಮುಖಂಡರಾದ ರಾಮಕೃಷ್ಣ, ಕಸವನಹಳ್ಳಿ ಅಂಬರೀಶ್, ವೆಂಕಟೇಶ್ ಮತ್ತಿತರರು ಇದ್ದರು.
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…