ಬಮೂಲ್ ಮತ್ತು ಬಮೂಲ್ ಕಲ್ಯಾಣ ಟ್ರಸ್ಟ್ ವತಿಯಿಂದ ಪ್ರತಿಭಾ ಪುರಸ್ಕಾರ; ವಿದ್ಯಾರ್ಥಿಗಳಿಗೆ ರೂ. 12 ಲಕ್ಷ 72 ಸಾವಿರ ಪ್ರೋತ್ಸಾಹಧನ ವಿತರಣೆ

ಹಾಲು ಉತ್ಪಾದಕರಿಂದ ಕೇವಲ ಹಾಲನ್ನು ಕೊಳ್ಳುವ ವ್ಯವಹಾರ ಮಾತ್ರ ಮಾಡದೆ ಅವರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಬಮೂಲ್‌ ಮತ್ತು ಕೆಎಂಎಫ್ ರೂಪಿಸಿದ್ದು ಅವುಗಳನ್ನು ಸದ್ಭಳಕೆ ಮಾಡಿಕೊಂಡು ರೈತರು ಆರ್ಥಿಕವಾಗಿ ಸದೃಢರಾಗಬೇಕೆಂದು ಕೆಎಂಎಫ್ ಮತ್ತು ಬಮೂಲ್ ನಿರ್ದೇಶಕ ಬಿಸಿ ಆನಂದ್ ಕುಮಾರ್ ತಿಳಿಸಿದರು.

ನಗರದ ಡಾ.ಬಾಬು ಜಗ ಜೀವನ್ ರಾಂ ಭವನದಲ್ಲಿ ಬೆಂಗಳೂರು ಹಾಲು ಒಕ್ಕೂಟ ಹಾಗೂ ಬಮೂಲ್ ಕಲ್ಯಾಣ ಟ್ರಸ್ಟ್ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬಮೂಲ್
ರೈತರೊಂದಿಗೆ ಕೇವಲ ಹಾಲು ಕೊಳ್ಳುವ ವ್ಯಾಪಾರ ಮಾಡದೆ ಬಂದ ಲಾಭವನ್ನು ರೈತರಿಗೆ ನೀಡಲಾಗುತ್ತದೆ, ಹಾಗೆಯೇ ಪ್ರತಿಭಾ ಪುರಸ್ಕಾರ, ವಿಮಾ ಯೋಜನೆ, ಹೈನುಗಾರಿಕೆ ಯಂತ್ರಗಳಿಗೆ ಸಹಾಯಧನ, ತರಬೇತಿ ಹೀಗೆ ಹಲವಾರು ಯೋಜನೆಗಳಿಗೆ ಬಮೂಲ್‌ ಅನುದಾನ ಒದಗಿಸುತ್ತಿದೆ ಎಂದರು.

‌ಎಂಪಿಸಿಎಸ್ ಸಂಘದ ಕಾರ್ಯದರ್ಶಿಗಳು ಹಾಗೂ ಸಿಬ್ಬಂದಿಗಳು ಬಮೂಲ್‌ನಿಂದ ಸಿಗುವ ಸವಲತ್ತುಗಳ ಬಗ್ಗೆ ರೈತರಿಗೆ ತಿಳಿಸಿ, ಅಗತ್ಯವಿದ್ದವರಿಗೆ ಅವುಗಳನ್ನು ತಲುಪಿಸುವ ಕೆಲಸ ಮಾಡಬೇಕು, ಯಾರೂ ಈ ಯೋಜನೆಗಳಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದರು.

ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಜೀವನದಲ್ಲಿ ರ್ಯಾಂಕ್, ಗೋಲ್ಡ್ ಮೆಡಲ್ ಗಳನ್ನು ಪಡೆಯದೆ ಇದ್ದರೂ ಪರವಾಗಿಲ್ಲ, ತಂದೆ ತಾಯಿಗಳಿಗೆ ಗೌರವ ಬರುವಂತ ಕೆಲಸ ಮಾಡಿ. ವಿದ್ಯೆ ಜೊತೆಗೆ ವಿನಯವನ್ನು ಕಲಿಯಬೇಕು. ನಿಮ್ಮ ನಡೆ-ನುಡಿ ಶುದ್ಧವಾಗಿರಬೇಕು. ವಿದ್ಯಾರ್ಥಿಗಳು ಉತ್ತಮ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ಶ್ರಮಿಸಬೇಕೆ ವಿನಃ ದುಶ್ಚಟಗಳಿಗೆ ದಾಸರಾಗಿ ತಪ್ಪು ದಾರಿ ತುಳಿಯಬಾರದು ಬಿಸಿ ಆನಂದ್ ಕುಮಾರ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು

ಶಾಸಕ ವೆಂಕಟರಮಣಯ್ಯ ಮಾತನಾಡಿ ಹೈನುಗಾರಿಕೆಗೆ ಕಾಂಗ್ರೆಸ್ ಸರಕಾರ ಹೆಚ್ಚಿನ ಪ್ರೋತ್ಸಾಹ ನೀಡಿತ್ತು. ಬೆಲೆ ಏರಿಕೆ ಯಿಂದಾಗಿ ಹೈನುಗಾರಿಕೆಯಿಂದ ರೈತರು ವಿಮುಖರಾಗುತ್ತಿರುವುದು ದುರಂತ. ಕಾಂಗ್ರೆಸ್ ಸರಕಾರ ರೈತರ ಬಳಕೆಯ ಅನೇಕ ವಸ್ತುಗಳಿಗೆ ತೆರಿಗೆ ವಿಧಿಸಿರಲಿಲ್ಲ. ಈಗ ಹಿಂಡಿ-ಬೂಸ ದಿಂದ ಪ್ರತಿಯೊಂದಕ್ಕೂ ತೆರಿಗೆ ವಿಧಿಸಿ ರೈತರನ್ನು ಬೀದಿಗೆ ತರುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೆಎಂಎಫ್ ನಿರ್ದೇಶಕ ಬಿಸಿ ಆನಂದ್ ಕುಮಾರ್ ಅವರು ವೈಯಕ್ತಿಕವಾಗಿ 135 ವಿದ್ಯಾರ್ಥಿಗಳಿಗೆ ತಲಾ ಎರಡು ಸಾವಿರ ರೂ.ಗಳನ್ನು ಪ್ರೋತ್ಸಾಹಧನವಾಗಿ ವಿತರಣೆ ಜೊತೆಗೆ ಟ್ರಸ್ಟ್ ವತಿಯಿಂದ ವಿವಿಧ ವಿದ್ಯಾರ್ಥಿಗಳಿಗೆ ಒಟ್ಟು 12 ಲಕ್ಷ 72 ಸಾವಿರ ರೂ.ಗಳನ್ನು ಪ್ರತಿಭಾ ಪುರಸ್ಕಾರ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಟಿಎಪಿಎಂಸಿಎಸ್ ಅಧ್ಯಕ್ಷ ಅಂಜನೇಗೌಡ, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಲಕ್ಷ್ಮೀನಾರಾಯಣ, ಮುಖಂಡರಾದ ರಾಮಕೃಷ್ಣ, ಕಸವನಹಳ್ಳಿ ಅಂಬರೀಶ್, ವೆಂಕಟೇಶ್ ಮತ್ತಿತರರು ಇದ್ದರು.

Ramesh Babu

Journalist

Recent Posts

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

31 minutes ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

10 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

16 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

17 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago