ಬಮೂಲ್ ಮತ್ತು ಬಮೂಲ್ ಕಲ್ಯಾಣ ಟ್ರಸ್ಟ್ ವತಿಯಿಂದ ಪ್ರತಿಭಾ ಪುರಸ್ಕಾರ; ವಿದ್ಯಾರ್ಥಿಗಳಿಗೆ ರೂ. 12 ಲಕ್ಷ 72 ಸಾವಿರ ಪ್ರೋತ್ಸಾಹಧನ ವಿತರಣೆ

ಹಾಲು ಉತ್ಪಾದಕರಿಂದ ಕೇವಲ ಹಾಲನ್ನು ಕೊಳ್ಳುವ ವ್ಯವಹಾರ ಮಾತ್ರ ಮಾಡದೆ ಅವರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಬಮೂಲ್‌ ಮತ್ತು ಕೆಎಂಎಫ್ ರೂಪಿಸಿದ್ದು ಅವುಗಳನ್ನು ಸದ್ಭಳಕೆ ಮಾಡಿಕೊಂಡು ರೈತರು ಆರ್ಥಿಕವಾಗಿ ಸದೃಢರಾಗಬೇಕೆಂದು ಕೆಎಂಎಫ್ ಮತ್ತು ಬಮೂಲ್ ನಿರ್ದೇಶಕ ಬಿಸಿ ಆನಂದ್ ಕುಮಾರ್ ತಿಳಿಸಿದರು.

ನಗರದ ಡಾ.ಬಾಬು ಜಗ ಜೀವನ್ ರಾಂ ಭವನದಲ್ಲಿ ಬೆಂಗಳೂರು ಹಾಲು ಒಕ್ಕೂಟ ಹಾಗೂ ಬಮೂಲ್ ಕಲ್ಯಾಣ ಟ್ರಸ್ಟ್ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬಮೂಲ್
ರೈತರೊಂದಿಗೆ ಕೇವಲ ಹಾಲು ಕೊಳ್ಳುವ ವ್ಯಾಪಾರ ಮಾಡದೆ ಬಂದ ಲಾಭವನ್ನು ರೈತರಿಗೆ ನೀಡಲಾಗುತ್ತದೆ, ಹಾಗೆಯೇ ಪ್ರತಿಭಾ ಪುರಸ್ಕಾರ, ವಿಮಾ ಯೋಜನೆ, ಹೈನುಗಾರಿಕೆ ಯಂತ್ರಗಳಿಗೆ ಸಹಾಯಧನ, ತರಬೇತಿ ಹೀಗೆ ಹಲವಾರು ಯೋಜನೆಗಳಿಗೆ ಬಮೂಲ್‌ ಅನುದಾನ ಒದಗಿಸುತ್ತಿದೆ ಎಂದರು.

‌ಎಂಪಿಸಿಎಸ್ ಸಂಘದ ಕಾರ್ಯದರ್ಶಿಗಳು ಹಾಗೂ ಸಿಬ್ಬಂದಿಗಳು ಬಮೂಲ್‌ನಿಂದ ಸಿಗುವ ಸವಲತ್ತುಗಳ ಬಗ್ಗೆ ರೈತರಿಗೆ ತಿಳಿಸಿ, ಅಗತ್ಯವಿದ್ದವರಿಗೆ ಅವುಗಳನ್ನು ತಲುಪಿಸುವ ಕೆಲಸ ಮಾಡಬೇಕು, ಯಾರೂ ಈ ಯೋಜನೆಗಳಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದರು.

ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಜೀವನದಲ್ಲಿ ರ್ಯಾಂಕ್, ಗೋಲ್ಡ್ ಮೆಡಲ್ ಗಳನ್ನು ಪಡೆಯದೆ ಇದ್ದರೂ ಪರವಾಗಿಲ್ಲ, ತಂದೆ ತಾಯಿಗಳಿಗೆ ಗೌರವ ಬರುವಂತ ಕೆಲಸ ಮಾಡಿ. ವಿದ್ಯೆ ಜೊತೆಗೆ ವಿನಯವನ್ನು ಕಲಿಯಬೇಕು. ನಿಮ್ಮ ನಡೆ-ನುಡಿ ಶುದ್ಧವಾಗಿರಬೇಕು. ವಿದ್ಯಾರ್ಥಿಗಳು ಉತ್ತಮ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ಶ್ರಮಿಸಬೇಕೆ ವಿನಃ ದುಶ್ಚಟಗಳಿಗೆ ದಾಸರಾಗಿ ತಪ್ಪು ದಾರಿ ತುಳಿಯಬಾರದು ಬಿಸಿ ಆನಂದ್ ಕುಮಾರ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು

ಶಾಸಕ ವೆಂಕಟರಮಣಯ್ಯ ಮಾತನಾಡಿ ಹೈನುಗಾರಿಕೆಗೆ ಕಾಂಗ್ರೆಸ್ ಸರಕಾರ ಹೆಚ್ಚಿನ ಪ್ರೋತ್ಸಾಹ ನೀಡಿತ್ತು. ಬೆಲೆ ಏರಿಕೆ ಯಿಂದಾಗಿ ಹೈನುಗಾರಿಕೆಯಿಂದ ರೈತರು ವಿಮುಖರಾಗುತ್ತಿರುವುದು ದುರಂತ. ಕಾಂಗ್ರೆಸ್ ಸರಕಾರ ರೈತರ ಬಳಕೆಯ ಅನೇಕ ವಸ್ತುಗಳಿಗೆ ತೆರಿಗೆ ವಿಧಿಸಿರಲಿಲ್ಲ. ಈಗ ಹಿಂಡಿ-ಬೂಸ ದಿಂದ ಪ್ರತಿಯೊಂದಕ್ಕೂ ತೆರಿಗೆ ವಿಧಿಸಿ ರೈತರನ್ನು ಬೀದಿಗೆ ತರುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೆಎಂಎಫ್ ನಿರ್ದೇಶಕ ಬಿಸಿ ಆನಂದ್ ಕುಮಾರ್ ಅವರು ವೈಯಕ್ತಿಕವಾಗಿ 135 ವಿದ್ಯಾರ್ಥಿಗಳಿಗೆ ತಲಾ ಎರಡು ಸಾವಿರ ರೂ.ಗಳನ್ನು ಪ್ರೋತ್ಸಾಹಧನವಾಗಿ ವಿತರಣೆ ಜೊತೆಗೆ ಟ್ರಸ್ಟ್ ವತಿಯಿಂದ ವಿವಿಧ ವಿದ್ಯಾರ್ಥಿಗಳಿಗೆ ಒಟ್ಟು 12 ಲಕ್ಷ 72 ಸಾವಿರ ರೂ.ಗಳನ್ನು ಪ್ರತಿಭಾ ಪುರಸ್ಕಾರ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಟಿಎಪಿಎಂಸಿಎಸ್ ಅಧ್ಯಕ್ಷ ಅಂಜನೇಗೌಡ, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಲಕ್ಷ್ಮೀನಾರಾಯಣ, ಮುಖಂಡರಾದ ರಾಮಕೃಷ್ಣ, ಕಸವನಹಳ್ಳಿ ಅಂಬರೀಶ್, ವೆಂಕಟೇಶ್ ಮತ್ತಿತರರು ಇದ್ದರು.

Ramesh Babu

Journalist

Recent Posts

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

3 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

22 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 days ago