ಬಮೂಲ್ ರೈತಾಪಿ ವರ್ಗದ್ದು: ಬಮೂಲ್ ಯಾವ ಪಕ್ಷದಲ್ಲ: ಇದಕ್ಕೆ ರಾಜಕೀಯ ಏಕೆ…?: ವರಿಷ್ಠರ ತೀರ್ಮಾನಕ್ಕೆ ನಾನು ಬದ್ಧ- ಜೆಡಿಎಸ್ ರಾಜ್ಯ ಕಾರ್ಯದರ್ಶಿ ಹುಸ್ಕೂರ್ ಆನಂದ್

ವಯಸ್ಸಿನಲ್ಲಿ ಕಿರಿಯರಾದ ಶಾಸಕ ಧೀರಜ್ ಮುನಿರಾಜ್ ಅವರಿಗೆ ನನ್ನ ಕಿವಿ ಮಾತು, ಬಮೂಲ್ ಚುನಾವಣೆಗೆ ರಾಜಕೀಯ ಬೇಡ. ಬಮೂಲ್ ರೈತಾಪಿ ವರ್ಗದ್ದು, ಯಾವ ರಾಜಕೀಯ ಪಕ್ಷದಲ್ಲ. ಎಲ್ಲರನ್ನು ಒಗ್ಗೂಡಿಸಿಕೊಂಡು ಹೋದರೆ ನಿನ್ನ ಹಣೆಬರಹ ಮುಂದೆ ಚೆನ್ನಾಗಿರುತ್ತದೆ ಎಂದು ಜೆಡಿಎಸ್ ರಾಜ್ಯ ಕಾರ್ಯದರ್ಶಿ ಹುಸ್ಕೂರ್ ಆನಂದ್ ಹೇಳಿದರು.

ಕೇಂದ್ರದಲ್ಲಿ ಎಚ್.ಡಿ‌.ಕುಮಾರಸ್ವಾಮಿ ಅವರು ಸಚಿವ ಸ್ಥಾನದಲ್ಲಿ ಇಲ್ಲ ಎಂದು ಶಾಸಕ ಧೀರಜ್ ಮುನಿರಜ್ ತಿಳಿದುಕೊಂಡಿರಬಹುದು. ನಾನು ಶಾಸಕರಿಗೆ ಮನವರಿಕೆ ಮಾಡಿಕೊಡುತ್ತೇನೆ ಏನೆಂದರೆ… ಕೇಂದ್ರದಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿಯಿಂದಾಗಿ ಕುಮಾರಸ್ವಾಮಿ ಅವರು ಮಂತ್ರಿಯಾಗಿದ್ದಾರೆ. ದೊಡ್ಡಬಳ್ಳಾಪುರದ ಜನತೆ ಎಲ್ಲರು ಸೇರಿ ಶಾಸಕರನ್ನಾಗಿ ಆಯ್ಕೆ ಮಾಡಿದ್ದಾರೆ. ಆದರೆ ಶಾಸಕ ಧೀರಜ್ ಮುನಿರಾಜ್ ಅವರು ತಮ್ಮ ಶಾಸಕ ಸ್ಥಾನಕ್ಕೆ ಧಕ್ಕೆ ಬರುವ ಹಾಗೆ ಮಾತನಾಡುತ್ತಿದ್ದಾರೆ ಎಂದರು.

ಬಮೂಲ್ ರೈತಾಪಿ ವರ್ಗದ ಸಂಸ್ಥೆ. ಬಮೂಲ್ ಚುನಾವಣೆ ಪಕ್ಷದಡಿಯಲ್ಲಿ ನಡೆಯುವಂತದ್ದಲ್ಲ. ಯಾವ‌ ಪಕ್ಷದಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದಿಲ್ಲ. ಬಿ ಫಾರಂ ಕೊಟ್ಟು ಚುನಾವಣೆ ನಡೆಸುವುದಿಲ್ಲ. ರೈತರು ಪರಸ್ಪರ ಒಮ್ಮತದ ತೀರ್ಮಾನದಿಂದ ಚುನಾವಣೆ ನಡೆಸಲಾಗುವುದು. ಬಿಜೆಪಿ ಅವರ ಬಳಿ ದುಡ್ಡಿರಬಹುದು, ಹಾಲಿ ನಿರ್ದೇಶಕ ಬಿ.ಸಿ.ಆನಂದ್ ಅವರನ್ನ ಹೊಗಳಿರಬಹುದು, ಅದಕ್ಕೂ ನಮಗೂ ಸಂಬಂಧವಿಲ್ಲ ಎಂದು ಹೇಳಿದರು.

ಹುಸ್ಕೂರ್ ಆನಂದ್ ಯಾರು ಅಂತಾ ಗೊತ್ತಿಲ್ಲ ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದ್ದಾರೆ. ಈ ಬಗ್ಗೆ ಶಾಸಕರನ್ನ ಆಯ್ಕೆ ಮಾಡಿದ ಜನಗಳನ್ನು ಕೇಳಬೇಕು. ಇದಕ್ಕೆ ಉತ್ತರ ಜನಗಳೇ ಕೊಡುತ್ತಾರೆ. ಬಿ.ಸಿ.ಆನಂದ್ ಪರ ಮಾತನಾಡಿರುವುದಕ್ಕೆ ನಾವೇನು ವಿರೋಧ ವ್ಯಕ್ತಪಡಿಸುವುದಿಲ್ಲ. ಅವರ ಪಕ್ಷ ಅವರಿಗೆ ದೊಡ್ಡದು, ನಮ್ಮ ಪಕ್ಷ ನಮಗೆ ದೊಡ್ಡದು ಎಂದರು.

ಬಮೂಲ್ ಚುನಾವಣೆಗೆ ಫೈಟ್ ಮಾಡುತ್ತಿರುವುದು ಅಣ್ಣ ತಮ್ಮಂದಿರ ಕುಟುಂಬ. ಈ ಕುಟುಂಬದಲ್ಲಿ ಒಡಕು ಉಂಟಾದರೆ, ಶಾಸಕರಾಗಿ ಅವರು ಆ ಒಡಕನ್ನು‌ ಸರಿಪಡಿಸಬೇಕು. ಅದನ್ನ ಬಿಟ್ಟು ಬೇರೆ ಏನೋ ಮಾಡೊದಕ್ಕೆ ಹೋದರೆ ಹೇಗೆ ಎಂದು ಪ್ರಶ್ನೆ ಮಾಡಿದರು.

ಬಮೂಲ್ ಚುನಾವಣೆಗೆ ಒಬ್ಬರನ್ನೇ ಆಯ್ಕೆ ಮಾಡಬೇಕು ಎಂಬ ಮನೋಭಾವನೆ ನನ್ನಲ್ಲಿದೆ. ಈ ನಿಟ್ಟಿನಲ್ಲಿ ಕಡೆವರೆಗೂ ಶತಾಯಗತಾಯ ಪ್ರಯತ್ನ ಮಾಡುತ್ತೇನೆ ಎಂದರು‌.

ನಾನು ಹುಸ್ಕೂರು ಹಾಲಿನ ಡೈರಿ ಅಧ್ಯಕ್ಷನೂ ಆಗಿಲ್ಲ, ಸದಸ್ಯನೂ ಆಗಿಲ್ಲ. ಅವರಿಗೆ ಯಾರೋ ತಪ್ಪು‌ ಮಾಹಿತಿ ನೀಡಿದ್ದಾರೆ. ಒಂದು ವೇಳೆ ಹಾಲಿನ ಡೈರಿ ಅಧ್ಯಕ್ಷನಾಗಿದ್ದರೆ ನಾನೇ ಶಾಸಕರಿಗೆ ಹೂಗುಚ್ಛ ನೀಡಿ ಬರುತ್ತಿದೆ. ಸುಖಾ ಸುಮ್ಮನ್ನೆ ನನ್ನ ಮೇಲೆ ಸುಳ್ಳು ಆರೋಪ ಮಾಡಿದರೆ ಎಷ್ಟರ ಮಟ್ಟಿಗೆ ಸರಿ ಎಂದು ಹೇಳಿದರು.

ನಾನು ಚಿಕ್ಕೋನು, ನಾನು ಸಾಮಾನ್ಯ ಶಾಸಕ, ನಾನು ತೆರೆಯ ಹಿಂದೆ ಇರುತ್ತೇನೆ ಎಂದು ಹೇಳುವುದು ಎಲ್ಲಾ ನಾಟಕದ ಮಾತು ಎಂದು ಹೇಳಿದರು.

ನನಗೆ ಬಿ.ಸಿ ಆನಂದ್ ಬೇರೆ ಅಲ್ಲ, ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಬೇರೆ ಅಲ್ಲ. ನಾವೆಲ್ಲಾ ಒಂದು ಕುಟುಂಬದ ಅಣ್ಣತಮ್ಮಂದಿರಾಗಿ ಇದ್ದೇವೆ. ಅಣ್ಣತಮ್ಮಂದಿರನ್ನು ಒಗ್ಗೂಡಿಸಿ ಒಬ್ಬ ಅಭರ್ಥಿಯನ್ನು ನಿಲ್ಲಿಸಬೇಕೆನ್ನುವುದು ನನ್ನ ಬಯಕೆ. ನಾನು ನಮ್ಮ ಕುಟುಂಬ ಚದರುವುದಕ್ಕೆ ಬಿಡುವುದಿಲ್ಲ ಎಂದು ತಿಳಿಸಿದರು.

ಬಿ.ಸಿ ಆನಂದ್ ಅವರು ಎಂಎಲ್ಎ ಎಲೆಕ್ಷನ್ ಪೂರ್ವದಲ್ಲಿ ಕಾಂಗ್ರೆಸ್ ನಿಂದ ಬಿಜೆಪಿಗೆ ಸೇರ್ಪಡೆಗೊಂಡರು, ನಾವು ಎಂಪಿ ಎಲೆಕ್ಷನ್ ಸಮಯದಲ್ಲಿ ಮೈತ್ರಿ ಧರ್ಮ ಪಾಲನೆ ಮಾಡಿ ಡಾ.ಸುಧಾಕರ್ ಗೆಲುವಿಗೆ ದುಡಿದಿದ್ದೇವೆ. ನಮ್ಮ ಕೆಲಸ ಕಾರ್ಯವನ್ನೂ ಗುರುತಿಸಬೇಕು ಎಂದರು.

ಶಾಸಕರಾದವರು ಎಲ್ಲಾ ರೈತರನ್ನು‌ ಒಗ್ಗೂಡಿಸಿ ಸಭೆ ಕರೆದು ಚರ್ಚೆ ಮಾಡಿ ಒಬ್ಬರನ್ನು ಆಯ್ಕೆ ಮಾಡಿದರೆ ಶಾಸಕರ ಸ್ಥಾನಕ್ಕೆ ಗೌರವ ಬರುತ್ತದೆ. ನಮ್ಮನ್ನು ಸಭೆಗೆ ಕರೆದರೆ ಹೋಗೋದಿಲ್ಲ ಅಂತೀವಾ, ಅವರು ಕರೆದಿಲ್ಲ, ನಾವು ಹೋಗಿಲ್ಲ. ಅವರಾಗೇ ಅವರೆ ನಮ್ಮನ್ನ ಶತ್ರುಗಳನ್ನಾಗಿ ನೋಡುತ್ತಿದ್ದಾರೆ ಎಂದರು.

ಬಮೂಲ್ ನಿರ್ದೇಶಕರ ಸ್ಥಾನಕ್ಕೆ ದೊಡ್ಡಬಳ್ಳಾಪುರದಲ್ಲಿ ಸುಮಾರು ಎಂಟು ಮಂದಿ ಅಭ್ಯರ್ಥಿ ಆಕಾಂಕ್ಷಿಗಳು‌ ಇದ್ದಾರೆ. ಇವರೆಲ್ಲಾರನ್ನು ಪಕ್ಷಾತೀತವಾಗಿ ಪರಿಗಣನೆಗೆ ತೆಗೆದುಕೊಂಡು ಅಂತಿಮ ತೀರ್ಮಾನಕ್ಕೆ ಬಂದು ಒಬ್ಬರನ್ನು ಅಭ್ಯರ್ಥಿಯನ್ನಾಗಿ ಮಾಡಿದರೆ ಒಳಿತು. ಅವರು ಮಾಡುವ ಕೆಲಸ ನಾನು ಮಾಡಲು ಸಿದ್ಧನಿದ್ದೇನೆ ಎಂದು ತಿಳಿಸಿದರು.

ಒಂದು ವೇಳೆ ವರಿಷ್ಠರು ಬಿ.ಸಿ ಆನಂದ್ ಅವರನ್ನು ಅಂತಿಮ‌ ಮಾಡಿದರೆ ನಾನು ಯಾವ ವಿರೋಧ ವ್ಯಕ್ತಪಡಿಸುವುದಿಲ್ಲ. ವರಿಷ್ಠರ ತೀರ್ಮಾನವೇ ಅಂತಿಮ ತೀರ್ಮಾನ ಎಂದು ಹೇಳಿದರು.

Ramesh Babu

Journalist

Recent Posts

ಬಗರ್ ಹುಕ್ಕುಂ ಸಮಿತಿ ಸಭೆ ವಿಳಂಬ: ಹಕ್ಕುಪತ್ರಕ್ಕಾಗಿ ರೈತರ ಅಲೆದಾಟ: ಅರ್ಜಿ ಸಲ್ಲಿಸಿ ವರ್ಷಗಳಾದರೂ ಸಾಗುವಳಿ ಚೀಟಿ ಇಲ್ಲ: ಆತಂಕದಲ್ಲಿ ರೈತ

ಗ್ರಾಮೀಣ ಭಾಗದಲ್ಲಿ ಜೀವನ ನಡೆಸಲು ಸರ್ಕಾರಿ ಜಮೀನುಗಳಲ್ಲಿ ಉಳುಮೆ ಮಾಡಿಕೊಂಡು ಜೀವನೋಪಾಯ ರೂಪಿಸಿಕೊಂಡಿರುವ ರೈತಾಪಿ ವರ್ಗದ ಜನರಿಗಾಗಿ ಸರ್ಕಾರ ಸಾಗುವಳಿ…

2 hours ago

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

18 hours ago

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

1 day ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

1 day ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

2 days ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

2 days ago