ಬಮೂಲ್ ರೈತಾಪಿ ವರ್ಗದ್ದು: ಬಮೂಲ್ ಯಾವ ಪಕ್ಷದಲ್ಲ: ಇದಕ್ಕೆ ರಾಜಕೀಯ ಏಕೆ…?: ವರಿಷ್ಠರ ತೀರ್ಮಾನಕ್ಕೆ ನಾನು ಬದ್ಧ- ಜೆಡಿಎಸ್ ರಾಜ್ಯ ಕಾರ್ಯದರ್ಶಿ ಹುಸ್ಕೂರ್ ಆನಂದ್

ವಯಸ್ಸಿನಲ್ಲಿ ಕಿರಿಯರಾದ ಶಾಸಕ ಧೀರಜ್ ಮುನಿರಾಜ್ ಅವರಿಗೆ ನನ್ನ ಕಿವಿ ಮಾತು, ಬಮೂಲ್ ಚುನಾವಣೆಗೆ ರಾಜಕೀಯ ಬೇಡ. ಬಮೂಲ್ ರೈತಾಪಿ ವರ್ಗದ್ದು, ಯಾವ ರಾಜಕೀಯ ಪಕ್ಷದಲ್ಲ. ಎಲ್ಲರನ್ನು ಒಗ್ಗೂಡಿಸಿಕೊಂಡು ಹೋದರೆ ನಿನ್ನ ಹಣೆಬರಹ ಮುಂದೆ ಚೆನ್ನಾಗಿರುತ್ತದೆ ಎಂದು ಜೆಡಿಎಸ್ ರಾಜ್ಯ ಕಾರ್ಯದರ್ಶಿ ಹುಸ್ಕೂರ್ ಆನಂದ್ ಹೇಳಿದರು.

ಕೇಂದ್ರದಲ್ಲಿ ಎಚ್.ಡಿ‌.ಕುಮಾರಸ್ವಾಮಿ ಅವರು ಸಚಿವ ಸ್ಥಾನದಲ್ಲಿ ಇಲ್ಲ ಎಂದು ಶಾಸಕ ಧೀರಜ್ ಮುನಿರಜ್ ತಿಳಿದುಕೊಂಡಿರಬಹುದು. ನಾನು ಶಾಸಕರಿಗೆ ಮನವರಿಕೆ ಮಾಡಿಕೊಡುತ್ತೇನೆ ಏನೆಂದರೆ… ಕೇಂದ್ರದಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿಯಿಂದಾಗಿ ಕುಮಾರಸ್ವಾಮಿ ಅವರು ಮಂತ್ರಿಯಾಗಿದ್ದಾರೆ. ದೊಡ್ಡಬಳ್ಳಾಪುರದ ಜನತೆ ಎಲ್ಲರು ಸೇರಿ ಶಾಸಕರನ್ನಾಗಿ ಆಯ್ಕೆ ಮಾಡಿದ್ದಾರೆ. ಆದರೆ ಶಾಸಕ ಧೀರಜ್ ಮುನಿರಾಜ್ ಅವರು ತಮ್ಮ ಶಾಸಕ ಸ್ಥಾನಕ್ಕೆ ಧಕ್ಕೆ ಬರುವ ಹಾಗೆ ಮಾತನಾಡುತ್ತಿದ್ದಾರೆ ಎಂದರು.

ಬಮೂಲ್ ರೈತಾಪಿ ವರ್ಗದ ಸಂಸ್ಥೆ. ಬಮೂಲ್ ಚುನಾವಣೆ ಪಕ್ಷದಡಿಯಲ್ಲಿ ನಡೆಯುವಂತದ್ದಲ್ಲ. ಯಾವ‌ ಪಕ್ಷದಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದಿಲ್ಲ. ಬಿ ಫಾರಂ ಕೊಟ್ಟು ಚುನಾವಣೆ ನಡೆಸುವುದಿಲ್ಲ. ರೈತರು ಪರಸ್ಪರ ಒಮ್ಮತದ ತೀರ್ಮಾನದಿಂದ ಚುನಾವಣೆ ನಡೆಸಲಾಗುವುದು. ಬಿಜೆಪಿ ಅವರ ಬಳಿ ದುಡ್ಡಿರಬಹುದು, ಹಾಲಿ ನಿರ್ದೇಶಕ ಬಿ.ಸಿ.ಆನಂದ್ ಅವರನ್ನ ಹೊಗಳಿರಬಹುದು, ಅದಕ್ಕೂ ನಮಗೂ ಸಂಬಂಧವಿಲ್ಲ ಎಂದು ಹೇಳಿದರು.

ಹುಸ್ಕೂರ್ ಆನಂದ್ ಯಾರು ಅಂತಾ ಗೊತ್ತಿಲ್ಲ ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದ್ದಾರೆ. ಈ ಬಗ್ಗೆ ಶಾಸಕರನ್ನ ಆಯ್ಕೆ ಮಾಡಿದ ಜನಗಳನ್ನು ಕೇಳಬೇಕು. ಇದಕ್ಕೆ ಉತ್ತರ ಜನಗಳೇ ಕೊಡುತ್ತಾರೆ. ಬಿ.ಸಿ.ಆನಂದ್ ಪರ ಮಾತನಾಡಿರುವುದಕ್ಕೆ ನಾವೇನು ವಿರೋಧ ವ್ಯಕ್ತಪಡಿಸುವುದಿಲ್ಲ. ಅವರ ಪಕ್ಷ ಅವರಿಗೆ ದೊಡ್ಡದು, ನಮ್ಮ ಪಕ್ಷ ನಮಗೆ ದೊಡ್ಡದು ಎಂದರು.

ಬಮೂಲ್ ಚುನಾವಣೆಗೆ ಫೈಟ್ ಮಾಡುತ್ತಿರುವುದು ಅಣ್ಣ ತಮ್ಮಂದಿರ ಕುಟುಂಬ. ಈ ಕುಟುಂಬದಲ್ಲಿ ಒಡಕು ಉಂಟಾದರೆ, ಶಾಸಕರಾಗಿ ಅವರು ಆ ಒಡಕನ್ನು‌ ಸರಿಪಡಿಸಬೇಕು. ಅದನ್ನ ಬಿಟ್ಟು ಬೇರೆ ಏನೋ ಮಾಡೊದಕ್ಕೆ ಹೋದರೆ ಹೇಗೆ ಎಂದು ಪ್ರಶ್ನೆ ಮಾಡಿದರು.

ಬಮೂಲ್ ಚುನಾವಣೆಗೆ ಒಬ್ಬರನ್ನೇ ಆಯ್ಕೆ ಮಾಡಬೇಕು ಎಂಬ ಮನೋಭಾವನೆ ನನ್ನಲ್ಲಿದೆ. ಈ ನಿಟ್ಟಿನಲ್ಲಿ ಕಡೆವರೆಗೂ ಶತಾಯಗತಾಯ ಪ್ರಯತ್ನ ಮಾಡುತ್ತೇನೆ ಎಂದರು‌.

ನಾನು ಹುಸ್ಕೂರು ಹಾಲಿನ ಡೈರಿ ಅಧ್ಯಕ್ಷನೂ ಆಗಿಲ್ಲ, ಸದಸ್ಯನೂ ಆಗಿಲ್ಲ. ಅವರಿಗೆ ಯಾರೋ ತಪ್ಪು‌ ಮಾಹಿತಿ ನೀಡಿದ್ದಾರೆ. ಒಂದು ವೇಳೆ ಹಾಲಿನ ಡೈರಿ ಅಧ್ಯಕ್ಷನಾಗಿದ್ದರೆ ನಾನೇ ಶಾಸಕರಿಗೆ ಹೂಗುಚ್ಛ ನೀಡಿ ಬರುತ್ತಿದೆ. ಸುಖಾ ಸುಮ್ಮನ್ನೆ ನನ್ನ ಮೇಲೆ ಸುಳ್ಳು ಆರೋಪ ಮಾಡಿದರೆ ಎಷ್ಟರ ಮಟ್ಟಿಗೆ ಸರಿ ಎಂದು ಹೇಳಿದರು.

ನಾನು ಚಿಕ್ಕೋನು, ನಾನು ಸಾಮಾನ್ಯ ಶಾಸಕ, ನಾನು ತೆರೆಯ ಹಿಂದೆ ಇರುತ್ತೇನೆ ಎಂದು ಹೇಳುವುದು ಎಲ್ಲಾ ನಾಟಕದ ಮಾತು ಎಂದು ಹೇಳಿದರು.

ನನಗೆ ಬಿ.ಸಿ ಆನಂದ್ ಬೇರೆ ಅಲ್ಲ, ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಬೇರೆ ಅಲ್ಲ. ನಾವೆಲ್ಲಾ ಒಂದು ಕುಟುಂಬದ ಅಣ್ಣತಮ್ಮಂದಿರಾಗಿ ಇದ್ದೇವೆ. ಅಣ್ಣತಮ್ಮಂದಿರನ್ನು ಒಗ್ಗೂಡಿಸಿ ಒಬ್ಬ ಅಭರ್ಥಿಯನ್ನು ನಿಲ್ಲಿಸಬೇಕೆನ್ನುವುದು ನನ್ನ ಬಯಕೆ. ನಾನು ನಮ್ಮ ಕುಟುಂಬ ಚದರುವುದಕ್ಕೆ ಬಿಡುವುದಿಲ್ಲ ಎಂದು ತಿಳಿಸಿದರು.

ಬಿ.ಸಿ ಆನಂದ್ ಅವರು ಎಂಎಲ್ಎ ಎಲೆಕ್ಷನ್ ಪೂರ್ವದಲ್ಲಿ ಕಾಂಗ್ರೆಸ್ ನಿಂದ ಬಿಜೆಪಿಗೆ ಸೇರ್ಪಡೆಗೊಂಡರು, ನಾವು ಎಂಪಿ ಎಲೆಕ್ಷನ್ ಸಮಯದಲ್ಲಿ ಮೈತ್ರಿ ಧರ್ಮ ಪಾಲನೆ ಮಾಡಿ ಡಾ.ಸುಧಾಕರ್ ಗೆಲುವಿಗೆ ದುಡಿದಿದ್ದೇವೆ. ನಮ್ಮ ಕೆಲಸ ಕಾರ್ಯವನ್ನೂ ಗುರುತಿಸಬೇಕು ಎಂದರು.

ಶಾಸಕರಾದವರು ಎಲ್ಲಾ ರೈತರನ್ನು‌ ಒಗ್ಗೂಡಿಸಿ ಸಭೆ ಕರೆದು ಚರ್ಚೆ ಮಾಡಿ ಒಬ್ಬರನ್ನು ಆಯ್ಕೆ ಮಾಡಿದರೆ ಶಾಸಕರ ಸ್ಥಾನಕ್ಕೆ ಗೌರವ ಬರುತ್ತದೆ. ನಮ್ಮನ್ನು ಸಭೆಗೆ ಕರೆದರೆ ಹೋಗೋದಿಲ್ಲ ಅಂತೀವಾ, ಅವರು ಕರೆದಿಲ್ಲ, ನಾವು ಹೋಗಿಲ್ಲ. ಅವರಾಗೇ ಅವರೆ ನಮ್ಮನ್ನ ಶತ್ರುಗಳನ್ನಾಗಿ ನೋಡುತ್ತಿದ್ದಾರೆ ಎಂದರು.

ಬಮೂಲ್ ನಿರ್ದೇಶಕರ ಸ್ಥಾನಕ್ಕೆ ದೊಡ್ಡಬಳ್ಳಾಪುರದಲ್ಲಿ ಸುಮಾರು ಎಂಟು ಮಂದಿ ಅಭ್ಯರ್ಥಿ ಆಕಾಂಕ್ಷಿಗಳು‌ ಇದ್ದಾರೆ. ಇವರೆಲ್ಲಾರನ್ನು ಪಕ್ಷಾತೀತವಾಗಿ ಪರಿಗಣನೆಗೆ ತೆಗೆದುಕೊಂಡು ಅಂತಿಮ ತೀರ್ಮಾನಕ್ಕೆ ಬಂದು ಒಬ್ಬರನ್ನು ಅಭ್ಯರ್ಥಿಯನ್ನಾಗಿ ಮಾಡಿದರೆ ಒಳಿತು. ಅವರು ಮಾಡುವ ಕೆಲಸ ನಾನು ಮಾಡಲು ಸಿದ್ಧನಿದ್ದೇನೆ ಎಂದು ತಿಳಿಸಿದರು.

ಒಂದು ವೇಳೆ ವರಿಷ್ಠರು ಬಿ.ಸಿ ಆನಂದ್ ಅವರನ್ನು ಅಂತಿಮ‌ ಮಾಡಿದರೆ ನಾನು ಯಾವ ವಿರೋಧ ವ್ಯಕ್ತಪಡಿಸುವುದಿಲ್ಲ. ವರಿಷ್ಠರ ತೀರ್ಮಾನವೇ ಅಂತಿಮ ತೀರ್ಮಾನ ಎಂದು ಹೇಳಿದರು.

Ramesh Babu

Journalist

Recent Posts

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

33 minutes ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

1 hour ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

6 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

10 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

11 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

11 hours ago