ಬಮೂಲ್ ರೈತಾಪಿ ವರ್ಗದ್ದು: ಬಮೂಲ್ ಯಾವ ಪಕ್ಷದಲ್ಲ: ಇದಕ್ಕೆ ರಾಜಕೀಯ ಏಕೆ…?: ವರಿಷ್ಠರ ತೀರ್ಮಾನಕ್ಕೆ ನಾನು ಬದ್ಧ- ಜೆಡಿಎಸ್ ರಾಜ್ಯ ಕಾರ್ಯದರ್ಶಿ ಹುಸ್ಕೂರ್ ಆನಂದ್

ವಯಸ್ಸಿನಲ್ಲಿ ಕಿರಿಯರಾದ ಶಾಸಕ ಧೀರಜ್ ಮುನಿರಾಜ್ ಅವರಿಗೆ ನನ್ನ ಕಿವಿ ಮಾತು, ಬಮೂಲ್ ಚುನಾವಣೆಗೆ ರಾಜಕೀಯ ಬೇಡ. ಬಮೂಲ್ ರೈತಾಪಿ ವರ್ಗದ್ದು, ಯಾವ ರಾಜಕೀಯ ಪಕ್ಷದಲ್ಲ. ಎಲ್ಲರನ್ನು ಒಗ್ಗೂಡಿಸಿಕೊಂಡು ಹೋದರೆ ನಿನ್ನ ಹಣೆಬರಹ ಮುಂದೆ ಚೆನ್ನಾಗಿರುತ್ತದೆ ಎಂದು ಜೆಡಿಎಸ್ ರಾಜ್ಯ ಕಾರ್ಯದರ್ಶಿ ಹುಸ್ಕೂರ್ ಆನಂದ್ ಹೇಳಿದರು.

ಕೇಂದ್ರದಲ್ಲಿ ಎಚ್.ಡಿ‌.ಕುಮಾರಸ್ವಾಮಿ ಅವರು ಸಚಿವ ಸ್ಥಾನದಲ್ಲಿ ಇಲ್ಲ ಎಂದು ಶಾಸಕ ಧೀರಜ್ ಮುನಿರಜ್ ತಿಳಿದುಕೊಂಡಿರಬಹುದು. ನಾನು ಶಾಸಕರಿಗೆ ಮನವರಿಕೆ ಮಾಡಿಕೊಡುತ್ತೇನೆ ಏನೆಂದರೆ… ಕೇಂದ್ರದಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿಯಿಂದಾಗಿ ಕುಮಾರಸ್ವಾಮಿ ಅವರು ಮಂತ್ರಿಯಾಗಿದ್ದಾರೆ. ದೊಡ್ಡಬಳ್ಳಾಪುರದ ಜನತೆ ಎಲ್ಲರು ಸೇರಿ ಶಾಸಕರನ್ನಾಗಿ ಆಯ್ಕೆ ಮಾಡಿದ್ದಾರೆ. ಆದರೆ ಶಾಸಕ ಧೀರಜ್ ಮುನಿರಾಜ್ ಅವರು ತಮ್ಮ ಶಾಸಕ ಸ್ಥಾನಕ್ಕೆ ಧಕ್ಕೆ ಬರುವ ಹಾಗೆ ಮಾತನಾಡುತ್ತಿದ್ದಾರೆ ಎಂದರು.

ಬಮೂಲ್ ರೈತಾಪಿ ವರ್ಗದ ಸಂಸ್ಥೆ. ಬಮೂಲ್ ಚುನಾವಣೆ ಪಕ್ಷದಡಿಯಲ್ಲಿ ನಡೆಯುವಂತದ್ದಲ್ಲ. ಯಾವ‌ ಪಕ್ಷದಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದಿಲ್ಲ. ಬಿ ಫಾರಂ ಕೊಟ್ಟು ಚುನಾವಣೆ ನಡೆಸುವುದಿಲ್ಲ. ರೈತರು ಪರಸ್ಪರ ಒಮ್ಮತದ ತೀರ್ಮಾನದಿಂದ ಚುನಾವಣೆ ನಡೆಸಲಾಗುವುದು. ಬಿಜೆಪಿ ಅವರ ಬಳಿ ದುಡ್ಡಿರಬಹುದು, ಹಾಲಿ ನಿರ್ದೇಶಕ ಬಿ.ಸಿ.ಆನಂದ್ ಅವರನ್ನ ಹೊಗಳಿರಬಹುದು, ಅದಕ್ಕೂ ನಮಗೂ ಸಂಬಂಧವಿಲ್ಲ ಎಂದು ಹೇಳಿದರು.

ಹುಸ್ಕೂರ್ ಆನಂದ್ ಯಾರು ಅಂತಾ ಗೊತ್ತಿಲ್ಲ ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದ್ದಾರೆ. ಈ ಬಗ್ಗೆ ಶಾಸಕರನ್ನ ಆಯ್ಕೆ ಮಾಡಿದ ಜನಗಳನ್ನು ಕೇಳಬೇಕು. ಇದಕ್ಕೆ ಉತ್ತರ ಜನಗಳೇ ಕೊಡುತ್ತಾರೆ. ಬಿ.ಸಿ.ಆನಂದ್ ಪರ ಮಾತನಾಡಿರುವುದಕ್ಕೆ ನಾವೇನು ವಿರೋಧ ವ್ಯಕ್ತಪಡಿಸುವುದಿಲ್ಲ. ಅವರ ಪಕ್ಷ ಅವರಿಗೆ ದೊಡ್ಡದು, ನಮ್ಮ ಪಕ್ಷ ನಮಗೆ ದೊಡ್ಡದು ಎಂದರು.

ಬಮೂಲ್ ಚುನಾವಣೆಗೆ ಫೈಟ್ ಮಾಡುತ್ತಿರುವುದು ಅಣ್ಣ ತಮ್ಮಂದಿರ ಕುಟುಂಬ. ಈ ಕುಟುಂಬದಲ್ಲಿ ಒಡಕು ಉಂಟಾದರೆ, ಶಾಸಕರಾಗಿ ಅವರು ಆ ಒಡಕನ್ನು‌ ಸರಿಪಡಿಸಬೇಕು. ಅದನ್ನ ಬಿಟ್ಟು ಬೇರೆ ಏನೋ ಮಾಡೊದಕ್ಕೆ ಹೋದರೆ ಹೇಗೆ ಎಂದು ಪ್ರಶ್ನೆ ಮಾಡಿದರು.

ಬಮೂಲ್ ಚುನಾವಣೆಗೆ ಒಬ್ಬರನ್ನೇ ಆಯ್ಕೆ ಮಾಡಬೇಕು ಎಂಬ ಮನೋಭಾವನೆ ನನ್ನಲ್ಲಿದೆ. ಈ ನಿಟ್ಟಿನಲ್ಲಿ ಕಡೆವರೆಗೂ ಶತಾಯಗತಾಯ ಪ್ರಯತ್ನ ಮಾಡುತ್ತೇನೆ ಎಂದರು‌.

ನಾನು ಹುಸ್ಕೂರು ಹಾಲಿನ ಡೈರಿ ಅಧ್ಯಕ್ಷನೂ ಆಗಿಲ್ಲ, ಸದಸ್ಯನೂ ಆಗಿಲ್ಲ. ಅವರಿಗೆ ಯಾರೋ ತಪ್ಪು‌ ಮಾಹಿತಿ ನೀಡಿದ್ದಾರೆ. ಒಂದು ವೇಳೆ ಹಾಲಿನ ಡೈರಿ ಅಧ್ಯಕ್ಷನಾಗಿದ್ದರೆ ನಾನೇ ಶಾಸಕರಿಗೆ ಹೂಗುಚ್ಛ ನೀಡಿ ಬರುತ್ತಿದೆ. ಸುಖಾ ಸುಮ್ಮನ್ನೆ ನನ್ನ ಮೇಲೆ ಸುಳ್ಳು ಆರೋಪ ಮಾಡಿದರೆ ಎಷ್ಟರ ಮಟ್ಟಿಗೆ ಸರಿ ಎಂದು ಹೇಳಿದರು.

ನಾನು ಚಿಕ್ಕೋನು, ನಾನು ಸಾಮಾನ್ಯ ಶಾಸಕ, ನಾನು ತೆರೆಯ ಹಿಂದೆ ಇರುತ್ತೇನೆ ಎಂದು ಹೇಳುವುದು ಎಲ್ಲಾ ನಾಟಕದ ಮಾತು ಎಂದು ಹೇಳಿದರು.

ನನಗೆ ಬಿ.ಸಿ ಆನಂದ್ ಬೇರೆ ಅಲ್ಲ, ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಬೇರೆ ಅಲ್ಲ. ನಾವೆಲ್ಲಾ ಒಂದು ಕುಟುಂಬದ ಅಣ್ಣತಮ್ಮಂದಿರಾಗಿ ಇದ್ದೇವೆ. ಅಣ್ಣತಮ್ಮಂದಿರನ್ನು ಒಗ್ಗೂಡಿಸಿ ಒಬ್ಬ ಅಭರ್ಥಿಯನ್ನು ನಿಲ್ಲಿಸಬೇಕೆನ್ನುವುದು ನನ್ನ ಬಯಕೆ. ನಾನು ನಮ್ಮ ಕುಟುಂಬ ಚದರುವುದಕ್ಕೆ ಬಿಡುವುದಿಲ್ಲ ಎಂದು ತಿಳಿಸಿದರು.

ಬಿ.ಸಿ ಆನಂದ್ ಅವರು ಎಂಎಲ್ಎ ಎಲೆಕ್ಷನ್ ಪೂರ್ವದಲ್ಲಿ ಕಾಂಗ್ರೆಸ್ ನಿಂದ ಬಿಜೆಪಿಗೆ ಸೇರ್ಪಡೆಗೊಂಡರು, ನಾವು ಎಂಪಿ ಎಲೆಕ್ಷನ್ ಸಮಯದಲ್ಲಿ ಮೈತ್ರಿ ಧರ್ಮ ಪಾಲನೆ ಮಾಡಿ ಡಾ.ಸುಧಾಕರ್ ಗೆಲುವಿಗೆ ದುಡಿದಿದ್ದೇವೆ. ನಮ್ಮ ಕೆಲಸ ಕಾರ್ಯವನ್ನೂ ಗುರುತಿಸಬೇಕು ಎಂದರು.

ಶಾಸಕರಾದವರು ಎಲ್ಲಾ ರೈತರನ್ನು‌ ಒಗ್ಗೂಡಿಸಿ ಸಭೆ ಕರೆದು ಚರ್ಚೆ ಮಾಡಿ ಒಬ್ಬರನ್ನು ಆಯ್ಕೆ ಮಾಡಿದರೆ ಶಾಸಕರ ಸ್ಥಾನಕ್ಕೆ ಗೌರವ ಬರುತ್ತದೆ. ನಮ್ಮನ್ನು ಸಭೆಗೆ ಕರೆದರೆ ಹೋಗೋದಿಲ್ಲ ಅಂತೀವಾ, ಅವರು ಕರೆದಿಲ್ಲ, ನಾವು ಹೋಗಿಲ್ಲ. ಅವರಾಗೇ ಅವರೆ ನಮ್ಮನ್ನ ಶತ್ರುಗಳನ್ನಾಗಿ ನೋಡುತ್ತಿದ್ದಾರೆ ಎಂದರು.

ಬಮೂಲ್ ನಿರ್ದೇಶಕರ ಸ್ಥಾನಕ್ಕೆ ದೊಡ್ಡಬಳ್ಳಾಪುರದಲ್ಲಿ ಸುಮಾರು ಎಂಟು ಮಂದಿ ಅಭ್ಯರ್ಥಿ ಆಕಾಂಕ್ಷಿಗಳು‌ ಇದ್ದಾರೆ. ಇವರೆಲ್ಲಾರನ್ನು ಪಕ್ಷಾತೀತವಾಗಿ ಪರಿಗಣನೆಗೆ ತೆಗೆದುಕೊಂಡು ಅಂತಿಮ ತೀರ್ಮಾನಕ್ಕೆ ಬಂದು ಒಬ್ಬರನ್ನು ಅಭ್ಯರ್ಥಿಯನ್ನಾಗಿ ಮಾಡಿದರೆ ಒಳಿತು. ಅವರು ಮಾಡುವ ಕೆಲಸ ನಾನು ಮಾಡಲು ಸಿದ್ಧನಿದ್ದೇನೆ ಎಂದು ತಿಳಿಸಿದರು.

ಒಂದು ವೇಳೆ ವರಿಷ್ಠರು ಬಿ.ಸಿ ಆನಂದ್ ಅವರನ್ನು ಅಂತಿಮ‌ ಮಾಡಿದರೆ ನಾನು ಯಾವ ವಿರೋಧ ವ್ಯಕ್ತಪಡಿಸುವುದಿಲ್ಲ. ವರಿಷ್ಠರ ತೀರ್ಮಾನವೇ ಅಂತಿಮ ತೀರ್ಮಾನ ಎಂದು ಹೇಳಿದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

11 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

12 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

13 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

13 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

17 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

19 hours ago