Categories: ಕೋಲಾರ

ಬಯಲುಸೀಮೆ ಪ್ರದೇಶ ಅಭಿವೃದ್ಧಿ ಮಂಡಳಿಯಲ್ಲಿ ಅನುದಾನ ಬಿಡುಗಡೆಗೆ ಎಂಎಲ್ಸಿ ಅನಿಲ್ ಕುಮಾರ್ ಒತ್ತಾಯ

ಕೋಲಾರ: ಬಯಲುಸೀಮೆ ಪ್ರದೇಶ ಅಭಿವೃದ್ಧಿ ಮಂಡಳಿಯಲ್ಲಿನ ಸಾರ್ವಜನಿಕರ ಮಹತ್ವದ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಿಲ್ಲ ಯಾಕೆ ಇದರ ಹಿಂದಿರುವ ಹುನ್ನಾರವಾದರೂ ಏನು ಎಂಬುದನ್ನು ಸದನಕ್ಕೆ ತಿಳಿಸುವಂತೆ ವಿಧಾನ ಪರಿಷತ್ ಅಧಿವೇಶನದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಅವರು ಒತ್ತಾಯಿಸಿದರು.

ಕಳೆದ 2022-23ನೇ ಸಾಲಿನ ಅವಧಿಯಲ್ಲಿ ಸುಮಾರು 99 ಶಾಸಕರಿಗೆ ಅಭಿವೃದ್ಧಿ ಮಂಡಳಿಯಿಂದ ತಲಾ ಒಂದು ಕೋಟಿ ಅನುದಾನವನ್ನು ಕಾಮಗಾರಿಗಳಿಗೆ ನೀಡುವಂತೆ ಸೂಚಿಸಿದ್ದು, ಅದರಂತೆ ಇದುವರೆಗೂ ಯಾವುದೇ ರೀತಿ ಅನುದಾನವನ್ನು ಬಿಡುಗಡೆ ಮಾಡಿಲ್ಲ ಏಕೆ? ಸುಮಾರು 362 ಕೋಟಿ ಅನುದಾನವನ್ನು ಸರಕಾರದ ಅನುಮೋದನೆ ಇಲ್ಲದೇ ಬಳಸಿಕೊಳ್ಳುತ್ತಾರೆ ಎಂದರೆ ಮನವಿ ಕೊಟ್ಟ ಶಾಸಕರಿಗೆ ಬೆಲೆ ಇಲ್ಲವೇ? ಇದರ ಹಿಂದಿರುವ ಅಧಿಕಾರಿಗಳ ಮೇಲೆ ಕ್ರಮವಾದರೆ ಅಷ್ಟೇ ಸಾಲದು, ಸಮಗ್ರ ವರದಿ ಕೊಡಬೇಕು. ಇವತ್ತು ಕೇವಲ 35 ಲಕ್ಷ ಅನುದಾನ ಕೊಟ್ಟರೆ ಯಾವ ಶಾಸಕರಿಗೂ ಸಾಕಾಗುವುದಿಲ್ಲ ತೃಪ್ತಿಕರವಿಲ್ಲ, ಜೊತೆಗೆ ಎಂಎಲ್ಸಿಗಳಿಗೆ ಇಂತಹ ಅಭಿವೃದ್ಧಿ ಮಂಡಳಿಗಳಿಂದ ಅಷ್ಟೇ ಅನುದಾನ ಬರುತ್ತದೆ ಅದು ಬಿಟ್ಟು ಬೇರೆ ಕಡೆಯಿಂದ ಅನುದಾನ ಬರಲ್ಲ ಏಕೆ ಇಂತಹ ತಾರತಮ್ಯ ಎಂದು ಪ್ರಶ್ನೆ ಮಾಡಿದರು.

2023 24ನೇ ಸಾಲಿನ ಅವಧಿಗೆ 35ಲಕ್ಷಕ್ಕೆ ಕಾಮಗಾರಿಗಳನ್ನು ಸಲ್ಲಿಸಲು ಕೊರಿದ್ದು, ಈ ಹಿಂದೆ ನೀಡಿರುವ ಕಾಮಗಾರಿಗಳಿಗೆ ಅನುದಾನವನ್ನು ಬಿಡುಗಡೆಗೊಳಿಸಿ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ, ಕಾಮಗಾರಿಗಳಿಗೆ ಅಡ್ಡಿಪಡಿಸದಂತೆ ಸರಿ ಪಡಿಸಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಉತ್ತರಿಸಿದ ಸಚಿವ ಬೋಸುರಾಜ್, ಹಿಂದಿನ ಸರ್ಕಾರದ ಅವಧಿಯಲ್ಲಿ ಅನುದಾನ ಮೀರಿ ಅನುಮೋದನೆ ಇಲ್ಲದೇ ಸುಮಾರು 362 ಕೋಟಿ ಅನುದಾನದಲ್ಲಿ ಸುಮಾರು 2374 ಕಾಮಗಾರಿಗಳನ್ನು ನಡೆಸಲು ಪ್ರಸ್ತಾಪ ಮಾಡಲಾಗಿತ್ತು. ಇದಕ್ಕೆ ಯಾರು ತಪ್ಪು ಮಾಡಿದ್ದಾರೆ ಅವರನ್ನು ಇಲಾಖೆಯಿಂದ ಬಿಡುಗಡೆ ಮಾಡಲಾಗಿದೆ. ಈಗಿರುವ 19 ಕೋಟಿ ಅನುದಾನದಲ್ಲಿ ಬಯಲುಸೀಮೆ ಪ್ರದೇಶದ ಶಾಸಕರಿಗೆ ತಲಾ 35 ಲಕ್ಷ ವನ್ನು ಅಧ್ಯತೆಯ ಕಾಮಗಾರಿಗೆ ಬಳಸಿಕೊಳ್ಳಬಹುದಾಗಿದೆ ಎಂದು ಸದನದಲ್ಲಿ ತಿಳಿಸಿದರು.

Ramesh Babu

Journalist

Recent Posts

ಎಂಎಸ್ ಜಿಪಿ ಘಟಕಕ್ಕೆ ಬಂದ ಹೆಚ್ಚುವರಿ ಕಸದ ಲಾರಿಗಳು: ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ಲಾರಿಗಳಿಗೆ ತಡೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…

8 hours ago

40 ಸಾವಿರ ಲಂಚ ಪಡೆಯುವಾಗ ವಿಶೇಷ ಭೂಸ್ವಾಧೀನಾಧಿಕಾರಿ ಸೇರಿದಂತೆ ಇಬ್ಬರು ಲೋಕಾಯುಕ್ತ ಬಲೆಗೆ.!

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…

8 hours ago

Accident Update: ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ‌ ಪ್ರಕರಣ: ಬೈಕ್ ಸವಾರ ಸಾವು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…

9 hours ago

ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…

9 hours ago

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟ

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…

11 hours ago

ಗೀತಂ ಯೂನಿವರ್ಸಿಟಿಯಲ್ಲಿ ಯುವತಿ ಆತ್ಮಹತ್ಯೆ ಪ್ರಕರಣ: ಸ್ಥಳಕ್ಕೆ ಎಸ್ಪಿ‌ ಚಂದ್ರಕಾಂತ್ ಭೇಟಿ, ಪರಿಶೀಲನೆ, ಪ್ರತಿಕ್ರಿಯೆ

ಆಕೆ ತಂದೆ ತಾಯಿಗೆ ಇದ್ದ ಏಕೈಕ‌ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ‌. ಮಗಳು ಚೆನ್ನಾಗಿ…

13 hours ago