Categories: ಕೋಲಾರ

ಬಯಲುಸೀಮೆ ಪ್ರದೇಶ ಅಭಿವೃದ್ಧಿ ಮಂಡಳಿಯಲ್ಲಿ ಅನುದಾನ ಬಿಡುಗಡೆಗೆ ಎಂಎಲ್ಸಿ ಅನಿಲ್ ಕುಮಾರ್ ಒತ್ತಾಯ

ಕೋಲಾರ: ಬಯಲುಸೀಮೆ ಪ್ರದೇಶ ಅಭಿವೃದ್ಧಿ ಮಂಡಳಿಯಲ್ಲಿನ ಸಾರ್ವಜನಿಕರ ಮಹತ್ವದ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಿಲ್ಲ ಯಾಕೆ ಇದರ ಹಿಂದಿರುವ ಹುನ್ನಾರವಾದರೂ ಏನು ಎಂಬುದನ್ನು ಸದನಕ್ಕೆ ತಿಳಿಸುವಂತೆ ವಿಧಾನ ಪರಿಷತ್ ಅಧಿವೇಶನದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಅವರು ಒತ್ತಾಯಿಸಿದರು.

ಕಳೆದ 2022-23ನೇ ಸಾಲಿನ ಅವಧಿಯಲ್ಲಿ ಸುಮಾರು 99 ಶಾಸಕರಿಗೆ ಅಭಿವೃದ್ಧಿ ಮಂಡಳಿಯಿಂದ ತಲಾ ಒಂದು ಕೋಟಿ ಅನುದಾನವನ್ನು ಕಾಮಗಾರಿಗಳಿಗೆ ನೀಡುವಂತೆ ಸೂಚಿಸಿದ್ದು, ಅದರಂತೆ ಇದುವರೆಗೂ ಯಾವುದೇ ರೀತಿ ಅನುದಾನವನ್ನು ಬಿಡುಗಡೆ ಮಾಡಿಲ್ಲ ಏಕೆ? ಸುಮಾರು 362 ಕೋಟಿ ಅನುದಾನವನ್ನು ಸರಕಾರದ ಅನುಮೋದನೆ ಇಲ್ಲದೇ ಬಳಸಿಕೊಳ್ಳುತ್ತಾರೆ ಎಂದರೆ ಮನವಿ ಕೊಟ್ಟ ಶಾಸಕರಿಗೆ ಬೆಲೆ ಇಲ್ಲವೇ? ಇದರ ಹಿಂದಿರುವ ಅಧಿಕಾರಿಗಳ ಮೇಲೆ ಕ್ರಮವಾದರೆ ಅಷ್ಟೇ ಸಾಲದು, ಸಮಗ್ರ ವರದಿ ಕೊಡಬೇಕು. ಇವತ್ತು ಕೇವಲ 35 ಲಕ್ಷ ಅನುದಾನ ಕೊಟ್ಟರೆ ಯಾವ ಶಾಸಕರಿಗೂ ಸಾಕಾಗುವುದಿಲ್ಲ ತೃಪ್ತಿಕರವಿಲ್ಲ, ಜೊತೆಗೆ ಎಂಎಲ್ಸಿಗಳಿಗೆ ಇಂತಹ ಅಭಿವೃದ್ಧಿ ಮಂಡಳಿಗಳಿಂದ ಅಷ್ಟೇ ಅನುದಾನ ಬರುತ್ತದೆ ಅದು ಬಿಟ್ಟು ಬೇರೆ ಕಡೆಯಿಂದ ಅನುದಾನ ಬರಲ್ಲ ಏಕೆ ಇಂತಹ ತಾರತಮ್ಯ ಎಂದು ಪ್ರಶ್ನೆ ಮಾಡಿದರು.

2023 24ನೇ ಸಾಲಿನ ಅವಧಿಗೆ 35ಲಕ್ಷಕ್ಕೆ ಕಾಮಗಾರಿಗಳನ್ನು ಸಲ್ಲಿಸಲು ಕೊರಿದ್ದು, ಈ ಹಿಂದೆ ನೀಡಿರುವ ಕಾಮಗಾರಿಗಳಿಗೆ ಅನುದಾನವನ್ನು ಬಿಡುಗಡೆಗೊಳಿಸಿ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ, ಕಾಮಗಾರಿಗಳಿಗೆ ಅಡ್ಡಿಪಡಿಸದಂತೆ ಸರಿ ಪಡಿಸಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಉತ್ತರಿಸಿದ ಸಚಿವ ಬೋಸುರಾಜ್, ಹಿಂದಿನ ಸರ್ಕಾರದ ಅವಧಿಯಲ್ಲಿ ಅನುದಾನ ಮೀರಿ ಅನುಮೋದನೆ ಇಲ್ಲದೇ ಸುಮಾರು 362 ಕೋಟಿ ಅನುದಾನದಲ್ಲಿ ಸುಮಾರು 2374 ಕಾಮಗಾರಿಗಳನ್ನು ನಡೆಸಲು ಪ್ರಸ್ತಾಪ ಮಾಡಲಾಗಿತ್ತು. ಇದಕ್ಕೆ ಯಾರು ತಪ್ಪು ಮಾಡಿದ್ದಾರೆ ಅವರನ್ನು ಇಲಾಖೆಯಿಂದ ಬಿಡುಗಡೆ ಮಾಡಲಾಗಿದೆ. ಈಗಿರುವ 19 ಕೋಟಿ ಅನುದಾನದಲ್ಲಿ ಬಯಲುಸೀಮೆ ಪ್ರದೇಶದ ಶಾಸಕರಿಗೆ ತಲಾ 35 ಲಕ್ಷ ವನ್ನು ಅಧ್ಯತೆಯ ಕಾಮಗಾರಿಗೆ ಬಳಸಿಕೊಳ್ಳಬಹುದಾಗಿದೆ ಎಂದು ಸದನದಲ್ಲಿ ತಿಳಿಸಿದರು.

Ramesh Babu

Journalist

Recent Posts

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

11 hours ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

12 hours ago

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ…?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…

15 hours ago

ಮರ್ಯಾದಾ ಹತ್ಯೆ……..

  ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…

24 hours ago

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

1 day ago