ಕೋಲಾರ: ಬಯಲುಸೀಮೆ ಪ್ರದೇಶ ಅಭಿವೃದ್ಧಿ ಮಂಡಳಿಯಲ್ಲಿನ ಸಾರ್ವಜನಿಕರ ಮಹತ್ವದ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಿಲ್ಲ ಯಾಕೆ ಇದರ ಹಿಂದಿರುವ ಹುನ್ನಾರವಾದರೂ ಏನು ಎಂಬುದನ್ನು ಸದನಕ್ಕೆ ತಿಳಿಸುವಂತೆ ವಿಧಾನ ಪರಿಷತ್ ಅಧಿವೇಶನದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಅವರು ಒತ್ತಾಯಿಸಿದರು.
ಕಳೆದ 2022-23ನೇ ಸಾಲಿನ ಅವಧಿಯಲ್ಲಿ ಸುಮಾರು 99 ಶಾಸಕರಿಗೆ ಅಭಿವೃದ್ಧಿ ಮಂಡಳಿಯಿಂದ ತಲಾ ಒಂದು ಕೋಟಿ ಅನುದಾನವನ್ನು ಕಾಮಗಾರಿಗಳಿಗೆ ನೀಡುವಂತೆ ಸೂಚಿಸಿದ್ದು, ಅದರಂತೆ ಇದುವರೆಗೂ ಯಾವುದೇ ರೀತಿ ಅನುದಾನವನ್ನು ಬಿಡುಗಡೆ ಮಾಡಿಲ್ಲ ಏಕೆ? ಸುಮಾರು 362 ಕೋಟಿ ಅನುದಾನವನ್ನು ಸರಕಾರದ ಅನುಮೋದನೆ ಇಲ್ಲದೇ ಬಳಸಿಕೊಳ್ಳುತ್ತಾರೆ ಎಂದರೆ ಮನವಿ ಕೊಟ್ಟ ಶಾಸಕರಿಗೆ ಬೆಲೆ ಇಲ್ಲವೇ? ಇದರ ಹಿಂದಿರುವ ಅಧಿಕಾರಿಗಳ ಮೇಲೆ ಕ್ರಮವಾದರೆ ಅಷ್ಟೇ ಸಾಲದು, ಸಮಗ್ರ ವರದಿ ಕೊಡಬೇಕು. ಇವತ್ತು ಕೇವಲ 35 ಲಕ್ಷ ಅನುದಾನ ಕೊಟ್ಟರೆ ಯಾವ ಶಾಸಕರಿಗೂ ಸಾಕಾಗುವುದಿಲ್ಲ ತೃಪ್ತಿಕರವಿಲ್ಲ, ಜೊತೆಗೆ ಎಂಎಲ್ಸಿಗಳಿಗೆ ಇಂತಹ ಅಭಿವೃದ್ಧಿ ಮಂಡಳಿಗಳಿಂದ ಅಷ್ಟೇ ಅನುದಾನ ಬರುತ್ತದೆ ಅದು ಬಿಟ್ಟು ಬೇರೆ ಕಡೆಯಿಂದ ಅನುದಾನ ಬರಲ್ಲ ಏಕೆ ಇಂತಹ ತಾರತಮ್ಯ ಎಂದು ಪ್ರಶ್ನೆ ಮಾಡಿದರು.
2023 24ನೇ ಸಾಲಿನ ಅವಧಿಗೆ 35ಲಕ್ಷಕ್ಕೆ ಕಾಮಗಾರಿಗಳನ್ನು ಸಲ್ಲಿಸಲು ಕೊರಿದ್ದು, ಈ ಹಿಂದೆ ನೀಡಿರುವ ಕಾಮಗಾರಿಗಳಿಗೆ ಅನುದಾನವನ್ನು ಬಿಡುಗಡೆಗೊಳಿಸಿ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ, ಕಾಮಗಾರಿಗಳಿಗೆ ಅಡ್ಡಿಪಡಿಸದಂತೆ ಸರಿ ಪಡಿಸಬೇಕು ಎಂದು ಮನವಿ ಮಾಡಿದರು.
ಇದಕ್ಕೆ ಉತ್ತರಿಸಿದ ಸಚಿವ ಬೋಸುರಾಜ್, ಹಿಂದಿನ ಸರ್ಕಾರದ ಅವಧಿಯಲ್ಲಿ ಅನುದಾನ ಮೀರಿ ಅನುಮೋದನೆ ಇಲ್ಲದೇ ಸುಮಾರು 362 ಕೋಟಿ ಅನುದಾನದಲ್ಲಿ ಸುಮಾರು 2374 ಕಾಮಗಾರಿಗಳನ್ನು ನಡೆಸಲು ಪ್ರಸ್ತಾಪ ಮಾಡಲಾಗಿತ್ತು. ಇದಕ್ಕೆ ಯಾರು ತಪ್ಪು ಮಾಡಿದ್ದಾರೆ ಅವರನ್ನು ಇಲಾಖೆಯಿಂದ ಬಿಡುಗಡೆ ಮಾಡಲಾಗಿದೆ. ಈಗಿರುವ 19 ಕೋಟಿ ಅನುದಾನದಲ್ಲಿ ಬಯಲುಸೀಮೆ ಪ್ರದೇಶದ ಶಾಸಕರಿಗೆ ತಲಾ 35 ಲಕ್ಷ ವನ್ನು ಅಧ್ಯತೆಯ ಕಾಮಗಾರಿಗೆ ಬಳಸಿಕೊಳ್ಳಬಹುದಾಗಿದೆ ಎಂದು ಸದನದಲ್ಲಿ ತಿಳಿಸಿದರು.
Ставки на спорт UA: советы и стратегии для успеха Ставки на спорт в Украине: основы…
ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿಯಾಗಿದ್ದ ಎನ್ ದುರ್ಗಶ್ರೀ ಅವರನ್ನು ಇಂದು ವರ್ಗಾವಣೆ ಮಾಡಲಾಗಿತ್ತು. ಇವರ ಜಾಗಕ್ಕೆ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಿ…
ನಾಳೆ (ಏ.23) ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು…
ಇತ್ತೀಚೆಗೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ಉದ್ಯೋಗದ ನೆಪದಲ್ಲಿ ಹೆಣ್ಣುಮಕ್ಕಳನ್ನು ಬಲವಂತಾಗಿ ಮತಾಂತರ ಮಾಡುವ ವಿಚಾರ ದೊಡ್ಡ ದುರಂತ ಪ್ರಕರಣವಾಗಿದೆ. ಇದರ…
ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎನ್ ದುರ್ಗಶ್ರೀ ಅವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಎಸಿಯಾಗಿ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಲಾಗಿದೆ...
ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಗೇಟ್ ಮುಂಭಾಗ ಸರಣಿ ಅಪಘಾತ ನಡೆದಿದೆ. ಘಟನೆಯಲ್ಲಿ ಬಸ್, ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ. ಅಡ್ಡಬಂದ…