Categories: ಕೋಲಾರ

ಬಯಲುಸೀಮೆ ಪ್ರದೇಶ ಅಭಿವೃದ್ಧಿ ಮಂಡಳಿಯಲ್ಲಿ ಅನುದಾನ ಬಿಡುಗಡೆಗೆ ಎಂಎಲ್ಸಿ ಅನಿಲ್ ಕುಮಾರ್ ಒತ್ತಾಯ

ಕೋಲಾರ: ಬಯಲುಸೀಮೆ ಪ್ರದೇಶ ಅಭಿವೃದ್ಧಿ ಮಂಡಳಿಯಲ್ಲಿನ ಸಾರ್ವಜನಿಕರ ಮಹತ್ವದ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಿಲ್ಲ ಯಾಕೆ ಇದರ ಹಿಂದಿರುವ ಹುನ್ನಾರವಾದರೂ ಏನು ಎಂಬುದನ್ನು ಸದನಕ್ಕೆ ತಿಳಿಸುವಂತೆ ವಿಧಾನ ಪರಿಷತ್ ಅಧಿವೇಶನದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಅವರು ಒತ್ತಾಯಿಸಿದರು.

ಕಳೆದ 2022-23ನೇ ಸಾಲಿನ ಅವಧಿಯಲ್ಲಿ ಸುಮಾರು 99 ಶಾಸಕರಿಗೆ ಅಭಿವೃದ್ಧಿ ಮಂಡಳಿಯಿಂದ ತಲಾ ಒಂದು ಕೋಟಿ ಅನುದಾನವನ್ನು ಕಾಮಗಾರಿಗಳಿಗೆ ನೀಡುವಂತೆ ಸೂಚಿಸಿದ್ದು, ಅದರಂತೆ ಇದುವರೆಗೂ ಯಾವುದೇ ರೀತಿ ಅನುದಾನವನ್ನು ಬಿಡುಗಡೆ ಮಾಡಿಲ್ಲ ಏಕೆ? ಸುಮಾರು 362 ಕೋಟಿ ಅನುದಾನವನ್ನು ಸರಕಾರದ ಅನುಮೋದನೆ ಇಲ್ಲದೇ ಬಳಸಿಕೊಳ್ಳುತ್ತಾರೆ ಎಂದರೆ ಮನವಿ ಕೊಟ್ಟ ಶಾಸಕರಿಗೆ ಬೆಲೆ ಇಲ್ಲವೇ? ಇದರ ಹಿಂದಿರುವ ಅಧಿಕಾರಿಗಳ ಮೇಲೆ ಕ್ರಮವಾದರೆ ಅಷ್ಟೇ ಸಾಲದು, ಸಮಗ್ರ ವರದಿ ಕೊಡಬೇಕು. ಇವತ್ತು ಕೇವಲ 35 ಲಕ್ಷ ಅನುದಾನ ಕೊಟ್ಟರೆ ಯಾವ ಶಾಸಕರಿಗೂ ಸಾಕಾಗುವುದಿಲ್ಲ ತೃಪ್ತಿಕರವಿಲ್ಲ, ಜೊತೆಗೆ ಎಂಎಲ್ಸಿಗಳಿಗೆ ಇಂತಹ ಅಭಿವೃದ್ಧಿ ಮಂಡಳಿಗಳಿಂದ ಅಷ್ಟೇ ಅನುದಾನ ಬರುತ್ತದೆ ಅದು ಬಿಟ್ಟು ಬೇರೆ ಕಡೆಯಿಂದ ಅನುದಾನ ಬರಲ್ಲ ಏಕೆ ಇಂತಹ ತಾರತಮ್ಯ ಎಂದು ಪ್ರಶ್ನೆ ಮಾಡಿದರು.

2023 24ನೇ ಸಾಲಿನ ಅವಧಿಗೆ 35ಲಕ್ಷಕ್ಕೆ ಕಾಮಗಾರಿಗಳನ್ನು ಸಲ್ಲಿಸಲು ಕೊರಿದ್ದು, ಈ ಹಿಂದೆ ನೀಡಿರುವ ಕಾಮಗಾರಿಗಳಿಗೆ ಅನುದಾನವನ್ನು ಬಿಡುಗಡೆಗೊಳಿಸಿ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ, ಕಾಮಗಾರಿಗಳಿಗೆ ಅಡ್ಡಿಪಡಿಸದಂತೆ ಸರಿ ಪಡಿಸಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಉತ್ತರಿಸಿದ ಸಚಿವ ಬೋಸುರಾಜ್, ಹಿಂದಿನ ಸರ್ಕಾರದ ಅವಧಿಯಲ್ಲಿ ಅನುದಾನ ಮೀರಿ ಅನುಮೋದನೆ ಇಲ್ಲದೇ ಸುಮಾರು 362 ಕೋಟಿ ಅನುದಾನದಲ್ಲಿ ಸುಮಾರು 2374 ಕಾಮಗಾರಿಗಳನ್ನು ನಡೆಸಲು ಪ್ರಸ್ತಾಪ ಮಾಡಲಾಗಿತ್ತು. ಇದಕ್ಕೆ ಯಾರು ತಪ್ಪು ಮಾಡಿದ್ದಾರೆ ಅವರನ್ನು ಇಲಾಖೆಯಿಂದ ಬಿಡುಗಡೆ ಮಾಡಲಾಗಿದೆ. ಈಗಿರುವ 19 ಕೋಟಿ ಅನುದಾನದಲ್ಲಿ ಬಯಲುಸೀಮೆ ಪ್ರದೇಶದ ಶಾಸಕರಿಗೆ ತಲಾ 35 ಲಕ್ಷ ವನ್ನು ಅಧ್ಯತೆಯ ಕಾಮಗಾರಿಗೆ ಬಳಸಿಕೊಳ್ಳಬಹುದಾಗಿದೆ ಎಂದು ಸದನದಲ್ಲಿ ತಿಳಿಸಿದರು.

Ramesh Babu

Journalist

Recent Posts

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

23 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 days ago