Categories: ಕೋಲಾರ

ಬಯಲುಸೀಮೆ ಪ್ರದೇಶ ಅಭಿವೃದ್ಧಿ ಮಂಡಳಿಯಲ್ಲಿ ಅನುದಾನ ಬಿಡುಗಡೆಗೆ ಎಂಎಲ್ಸಿ ಅನಿಲ್ ಕುಮಾರ್ ಒತ್ತಾಯ

ಕೋಲಾರ: ಬಯಲುಸೀಮೆ ಪ್ರದೇಶ ಅಭಿವೃದ್ಧಿ ಮಂಡಳಿಯಲ್ಲಿನ ಸಾರ್ವಜನಿಕರ ಮಹತ್ವದ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಿಲ್ಲ ಯಾಕೆ ಇದರ ಹಿಂದಿರುವ ಹುನ್ನಾರವಾದರೂ ಏನು ಎಂಬುದನ್ನು ಸದನಕ್ಕೆ ತಿಳಿಸುವಂತೆ ವಿಧಾನ ಪರಿಷತ್ ಅಧಿವೇಶನದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಅವರು ಒತ್ತಾಯಿಸಿದರು.

ಕಳೆದ 2022-23ನೇ ಸಾಲಿನ ಅವಧಿಯಲ್ಲಿ ಸುಮಾರು 99 ಶಾಸಕರಿಗೆ ಅಭಿವೃದ್ಧಿ ಮಂಡಳಿಯಿಂದ ತಲಾ ಒಂದು ಕೋಟಿ ಅನುದಾನವನ್ನು ಕಾಮಗಾರಿಗಳಿಗೆ ನೀಡುವಂತೆ ಸೂಚಿಸಿದ್ದು, ಅದರಂತೆ ಇದುವರೆಗೂ ಯಾವುದೇ ರೀತಿ ಅನುದಾನವನ್ನು ಬಿಡುಗಡೆ ಮಾಡಿಲ್ಲ ಏಕೆ? ಸುಮಾರು 362 ಕೋಟಿ ಅನುದಾನವನ್ನು ಸರಕಾರದ ಅನುಮೋದನೆ ಇಲ್ಲದೇ ಬಳಸಿಕೊಳ್ಳುತ್ತಾರೆ ಎಂದರೆ ಮನವಿ ಕೊಟ್ಟ ಶಾಸಕರಿಗೆ ಬೆಲೆ ಇಲ್ಲವೇ? ಇದರ ಹಿಂದಿರುವ ಅಧಿಕಾರಿಗಳ ಮೇಲೆ ಕ್ರಮವಾದರೆ ಅಷ್ಟೇ ಸಾಲದು, ಸಮಗ್ರ ವರದಿ ಕೊಡಬೇಕು. ಇವತ್ತು ಕೇವಲ 35 ಲಕ್ಷ ಅನುದಾನ ಕೊಟ್ಟರೆ ಯಾವ ಶಾಸಕರಿಗೂ ಸಾಕಾಗುವುದಿಲ್ಲ ತೃಪ್ತಿಕರವಿಲ್ಲ, ಜೊತೆಗೆ ಎಂಎಲ್ಸಿಗಳಿಗೆ ಇಂತಹ ಅಭಿವೃದ್ಧಿ ಮಂಡಳಿಗಳಿಂದ ಅಷ್ಟೇ ಅನುದಾನ ಬರುತ್ತದೆ ಅದು ಬಿಟ್ಟು ಬೇರೆ ಕಡೆಯಿಂದ ಅನುದಾನ ಬರಲ್ಲ ಏಕೆ ಇಂತಹ ತಾರತಮ್ಯ ಎಂದು ಪ್ರಶ್ನೆ ಮಾಡಿದರು.

2023 24ನೇ ಸಾಲಿನ ಅವಧಿಗೆ 35ಲಕ್ಷಕ್ಕೆ ಕಾಮಗಾರಿಗಳನ್ನು ಸಲ್ಲಿಸಲು ಕೊರಿದ್ದು, ಈ ಹಿಂದೆ ನೀಡಿರುವ ಕಾಮಗಾರಿಗಳಿಗೆ ಅನುದಾನವನ್ನು ಬಿಡುಗಡೆಗೊಳಿಸಿ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ, ಕಾಮಗಾರಿಗಳಿಗೆ ಅಡ್ಡಿಪಡಿಸದಂತೆ ಸರಿ ಪಡಿಸಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಉತ್ತರಿಸಿದ ಸಚಿವ ಬೋಸುರಾಜ್, ಹಿಂದಿನ ಸರ್ಕಾರದ ಅವಧಿಯಲ್ಲಿ ಅನುದಾನ ಮೀರಿ ಅನುಮೋದನೆ ಇಲ್ಲದೇ ಸುಮಾರು 362 ಕೋಟಿ ಅನುದಾನದಲ್ಲಿ ಸುಮಾರು 2374 ಕಾಮಗಾರಿಗಳನ್ನು ನಡೆಸಲು ಪ್ರಸ್ತಾಪ ಮಾಡಲಾಗಿತ್ತು. ಇದಕ್ಕೆ ಯಾರು ತಪ್ಪು ಮಾಡಿದ್ದಾರೆ ಅವರನ್ನು ಇಲಾಖೆಯಿಂದ ಬಿಡುಗಡೆ ಮಾಡಲಾಗಿದೆ. ಈಗಿರುವ 19 ಕೋಟಿ ಅನುದಾನದಲ್ಲಿ ಬಯಲುಸೀಮೆ ಪ್ರದೇಶದ ಶಾಸಕರಿಗೆ ತಲಾ 35 ಲಕ್ಷ ವನ್ನು ಅಧ್ಯತೆಯ ಕಾಮಗಾರಿಗೆ ಬಳಸಿಕೊಳ್ಳಬಹುದಾಗಿದೆ ಎಂದು ಸದನದಲ್ಲಿ ತಿಳಿಸಿದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

14 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

15 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

16 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

16 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

20 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

22 hours ago