ಕೋಲಾರ: ಬಯಲುಸೀಮೆ ಪ್ರದೇಶ ಅಭಿವೃದ್ಧಿ ಮಂಡಳಿಯಲ್ಲಿನ ಸಾರ್ವಜನಿಕರ ಮಹತ್ವದ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಿಲ್ಲ ಯಾಕೆ ಇದರ ಹಿಂದಿರುವ ಹುನ್ನಾರವಾದರೂ ಏನು ಎಂಬುದನ್ನು ಸದನಕ್ಕೆ ತಿಳಿಸುವಂತೆ ವಿಧಾನ ಪರಿಷತ್ ಅಧಿವೇಶನದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಅವರು ಒತ್ತಾಯಿಸಿದರು.
ಕಳೆದ 2022-23ನೇ ಸಾಲಿನ ಅವಧಿಯಲ್ಲಿ ಸುಮಾರು 99 ಶಾಸಕರಿಗೆ ಅಭಿವೃದ್ಧಿ ಮಂಡಳಿಯಿಂದ ತಲಾ ಒಂದು ಕೋಟಿ ಅನುದಾನವನ್ನು ಕಾಮಗಾರಿಗಳಿಗೆ ನೀಡುವಂತೆ ಸೂಚಿಸಿದ್ದು, ಅದರಂತೆ ಇದುವರೆಗೂ ಯಾವುದೇ ರೀತಿ ಅನುದಾನವನ್ನು ಬಿಡುಗಡೆ ಮಾಡಿಲ್ಲ ಏಕೆ? ಸುಮಾರು 362 ಕೋಟಿ ಅನುದಾನವನ್ನು ಸರಕಾರದ ಅನುಮೋದನೆ ಇಲ್ಲದೇ ಬಳಸಿಕೊಳ್ಳುತ್ತಾರೆ ಎಂದರೆ ಮನವಿ ಕೊಟ್ಟ ಶಾಸಕರಿಗೆ ಬೆಲೆ ಇಲ್ಲವೇ? ಇದರ ಹಿಂದಿರುವ ಅಧಿಕಾರಿಗಳ ಮೇಲೆ ಕ್ರಮವಾದರೆ ಅಷ್ಟೇ ಸಾಲದು, ಸಮಗ್ರ ವರದಿ ಕೊಡಬೇಕು. ಇವತ್ತು ಕೇವಲ 35 ಲಕ್ಷ ಅನುದಾನ ಕೊಟ್ಟರೆ ಯಾವ ಶಾಸಕರಿಗೂ ಸಾಕಾಗುವುದಿಲ್ಲ ತೃಪ್ತಿಕರವಿಲ್ಲ, ಜೊತೆಗೆ ಎಂಎಲ್ಸಿಗಳಿಗೆ ಇಂತಹ ಅಭಿವೃದ್ಧಿ ಮಂಡಳಿಗಳಿಂದ ಅಷ್ಟೇ ಅನುದಾನ ಬರುತ್ತದೆ ಅದು ಬಿಟ್ಟು ಬೇರೆ ಕಡೆಯಿಂದ ಅನುದಾನ ಬರಲ್ಲ ಏಕೆ ಇಂತಹ ತಾರತಮ್ಯ ಎಂದು ಪ್ರಶ್ನೆ ಮಾಡಿದರು.
2023 24ನೇ ಸಾಲಿನ ಅವಧಿಗೆ 35ಲಕ್ಷಕ್ಕೆ ಕಾಮಗಾರಿಗಳನ್ನು ಸಲ್ಲಿಸಲು ಕೊರಿದ್ದು, ಈ ಹಿಂದೆ ನೀಡಿರುವ ಕಾಮಗಾರಿಗಳಿಗೆ ಅನುದಾನವನ್ನು ಬಿಡುಗಡೆಗೊಳಿಸಿ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ, ಕಾಮಗಾರಿಗಳಿಗೆ ಅಡ್ಡಿಪಡಿಸದಂತೆ ಸರಿ ಪಡಿಸಬೇಕು ಎಂದು ಮನವಿ ಮಾಡಿದರು.
ಇದಕ್ಕೆ ಉತ್ತರಿಸಿದ ಸಚಿವ ಬೋಸುರಾಜ್, ಹಿಂದಿನ ಸರ್ಕಾರದ ಅವಧಿಯಲ್ಲಿ ಅನುದಾನ ಮೀರಿ ಅನುಮೋದನೆ ಇಲ್ಲದೇ ಸುಮಾರು 362 ಕೋಟಿ ಅನುದಾನದಲ್ಲಿ ಸುಮಾರು 2374 ಕಾಮಗಾರಿಗಳನ್ನು ನಡೆಸಲು ಪ್ರಸ್ತಾಪ ಮಾಡಲಾಗಿತ್ತು. ಇದಕ್ಕೆ ಯಾರು ತಪ್ಪು ಮಾಡಿದ್ದಾರೆ ಅವರನ್ನು ಇಲಾಖೆಯಿಂದ ಬಿಡುಗಡೆ ಮಾಡಲಾಗಿದೆ. ಈಗಿರುವ 19 ಕೋಟಿ ಅನುದಾನದಲ್ಲಿ ಬಯಲುಸೀಮೆ ಪ್ರದೇಶದ ಶಾಸಕರಿಗೆ ತಲಾ 35 ಲಕ್ಷ ವನ್ನು ಅಧ್ಯತೆಯ ಕಾಮಗಾರಿಗೆ ಬಳಸಿಕೊಳ್ಳಬಹುದಾಗಿದೆ ಎಂದು ಸದನದಲ್ಲಿ ತಿಳಿಸಿದರು.
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…
ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…